ಉತ್ತರಕನ್ನಡ ನೆರೆ ನಿರಾಶ್ರಿತರಿಗೆ ಹುಸಿಯಾದ ಭರವಸೆ: ಮತ್ತೆ ಶುರುವಾದ ಆತಂಕ

ಕಳೆದ ಮೂರು ವರ್ಷಗಳಲ್ಲಿ ಸುರಿದ ಮಳೆ, ಉಂಟಾದ ನೆರೆ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು. ಸರ್ಕಾರದಿಂದ ನೆರವು ಸಿಗುವ ನಿರೀಕ್ಷೆಯಲ್ಲೇ ಬಾಡಿಗೆ ಮನೆಗಳಲ್ಲಿ ಉಳಿದುಕೊಂಡಿದ್ದರು. ಆದ್ರೆ ಇದೀಗ ಮತ್ತೆ ಮಳೆಗಾಲ ಆರಂಭವಾಗಲಿದ್ದು, ಈವರೆಗೂ ಸಹ ಸಾಕಷ್ಟು ಕುಟುಂಬಗಳಿಗೆ ಸರ್ಕಾರದಿಂದ ಮನೆಯಾಗಲಿ, ಸೂಕ್ತ ಪರಿಹಾರವಾಗಲಿ ಲಭಿಸಿಲ್ಲ.

ಕಾರವಾರ(ಉತ್ತರಕನ್ನಡ): 2019. ಈ ವರ್ಷದಲ್ಲಿ ಉತ್ತರಕನ್ನಡ ಜಿಲ್ಲೆ ಕಂಡು ಕೇಳರಿಯದ ಧಾರಾಕಾರ ಮಳೆಗೆ ಸಾಕ್ಷಿಯಾಗಿತ್ತು. ಹಲವೆಡೆ ವಾರಗಳ ಕಾಲ ನೆರೆ ಪರಿಸ್ಥಿತಿ ಆವರಿಸಿತ್ತು. 2020ರಲ್ಲಿ ಅಷ್ಟು ಪ್ರಮಾಣದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿಲ್ಲವಾದರೂ ಕೆಲವೆಡೆ ಸುರಿದ ಮಳೆ ಸಾಕಷ್ಟು ಹಾನಿ ಉಂಟುಮಾಡಿದೆ. ಆದ್ರೆ ಕಳೆದ 2021ರಲ್ಲಿ ಸುರಿದ ಭಾರಿ ಮಳೆಗೆ ಕಾಳಿ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ಕಾರವಾರ ತಾಲೂಕಿನ ಕದ್ರಾ ಜಲಾಶಯದಿಂದ ಹೊರಬಿಟ್ಟ ನೀರಿನಿಂದಾಗಿ ನದಿ ಪಾತ್ರದ ಸಾಕಷ್ಟು ಮನೆಗಳು ಕೊಚ್ಚಿ ಹೋಗಿದ್ದವು. ಏಕಾಏಕಿ ಜಲಾಶಯದಿಂದ ನೀರು ಹೊರಬಿಟ್ಟಿದ್ದು ಜನರು ಸರ್ವಸ್ವವನ್ನೂ ಕಳೆದುಕೊಳ್ಳುವಂತಾಯಿತು. ಘಟನೆ ನಡೆದು ವರ್ಷ ಕಳೆಯುತ್ತಾ ಬಂದರೂ ಈವರೆಗೂ ಅವರಿಗೆ ಮನೆ ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ.

ಆ ಸಂದರ್ಭದಲ್ಲಿ ಜಿಲ್ಲಾಡಳಿತ ನೆರೆ ನಿರಾಶ್ರಿತರಿಗೆ ಪರಿಹಾರದ ಜೊತೆಗೆ ಮನೆ ಕಟ್ಟಿಕೊಳ್ಳಲು ಪರ್ಯಾಯ ಜಾಗ ನೀಡುವುದಾಗಿ ಭರವಸೆ ನೀಡಿತ್ತು. ಘಟನೆ ನಡೆದು ವರ್ಷ ಕಳೆಯುತ್ತಾ ಬಂದಿದ್ದು ಈವರೆಗೂ ಹಲವು ನಿರಾಶ್ರಿತರಿಗೆ ಪರಿಹಾರ ಕೈಸೇರಿಲ್ಲ. ಮನೆ ಕಟ್ಟಿಕೊಳ್ಳಲು ಜಾಗವನ್ನೂ ನೀಡಿಲ್ಲ.

ಜಲಾಶಯದಿಂದ ಹೊರಬಿಟ್ಟ ನೀರಿನಿಂದಾಗಿ ಜಲಾಶಯ ವ್ಯಾಪ್ತಿಯ ಕದ್ರಾ, ಮಲ್ಲಾಪುರ, ಗಾಂಧಿನಗರ, ಕುರ್ನಿಪೇಟ್ ಸೇರಿದಂತೆ ಸಾಕಷ್ಟು ಪ್ರದೇಶಗಳಲ್ಲಿ ನೆರೆ ಹಾನಿ ಸಂಭವಿಸಿದೆ. ಅದರಲ್ಲೂ ಜಲಾಶಯದ ಬುಡದಲ್ಲೇ ಇರುವ ಗಾಂಧಿನಗರ ಭಾಗದ ಇಪ್ಪತ್ತಕ್ಕೂ ಅಧಿಕ ಮನೆಗಳು ಸಂಪೂರ್ಣವಾಗಿ ಮುಳುಗಡೆಯಾಗಿ ಪ್ರವಾಹಕ್ಕೆ ಕೊಚ್ಚಿಹೋಗಿದ್ದವು.

ಪರಿಣಾಮ, ನೂರಾರು ಮಂದಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಸದ್ಯ ಬಾಡಿಗೆ ಮನೆಗಳಲ್ಲೇ ಜೀವನ ನಡೆಸುತ್ತಿದ್ದಾರೆ. ಇನ್ನೇನು ಮಲೆಗಾಲ ಆರಂಭವಾಗಲಿದ್ದು ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಅಂತಾರೆ ಸ್ಥಳೀಯರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *