ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೆ?

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Narendra modi

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದ ಸಂದರ್ಭ ತಮ್ಮ ಭಾಷಣದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ನೀಡಿದ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

‘ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು ಎಂಬ ಪ್ರಧಾನಿ ಮೋದಿ ಹೇಳಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿದ್ದಾರೆ.  

ವಾಸ್ತವವನ್ನು ಗುರುತಿಸಿ, ಬಿಜೆಪಿಯ ಬೆಳವಣಿಗೆಯ ಹಿನ್ನೆಲೆ ಅರಿತು ಪ್ರಧಾನಿ ಮೋದಿ ಭಾಷಣ ಮಾಡಬೇಕಿತ್ತು. ಕೇವಲ ಚುನಾವಣಾ ಪ್ರಚಾರ ಶೈಲಿಯ ಭಾಷಣ ಮಾಡಿದ್ದಾರಷ್ಟೇ. ಕುಟುಂಬ ಪಕ್ಷಗಳ ಟೀಕೆ ನೆಪವಷ್ಟೇ. ಪ್ರಧಾನಿಯವರ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ನೆಲಕಚ್ಚಿದ ಮೇಲೆ ಬಿಜೆಪಿಗೆ ಪ್ರತಿರಾಜ್ಯದಲ್ಲಿ ಎದುರಾಗುತ್ತಿರುವ ರಾಜಕೀಯ ವೈರಿಗಳೆಂದರೆ ಪ್ರಾದೇಶಿಕ ಪಕ್ಷಗಳೇ. ಇಂಥ ಬಲಿಷ್ಠ ಪಕ್ಷಗಳನ್ನು ಮುಗಿಸಲು ಬಿಜೆಪಿ ಏನೆಲ್ಲ ಅಡ್ಡದಾರಿ ಹಿಡಿಯಿತು ಎನ್ನುವುದು ಗುಟ್ಟೇನಲ್ಲ ಎಂದಿದ್ದಾರೆ.

ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಹೋರಾಟದ ಫಲಗಳಲ್ಲಿ ಜನಸಂಘವೂ ಒಂದು. ತುರ್ತು ಪರಿಸ್ಥಿತಿ ಹೇರಿದಾಗ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ನೂರಾರು ಸಣ್ಣಪುಟ್ಟ ಪಕ್ಷಗಳನ್ನು ಒಗ್ಗೂಡಿಸಿದ್ದು ಅವರೇ. ಇವೆಲ್ಲಾ ಒಟ್ಟಾಗಿ ʼಜನತಾ ಪರಿವಾರʼ ಉದಯ ಆಯಿತು. ಈ ಪರಿವಾರ ಹಂತಹಂತವಾಗಿ ಬೆಳೆದು ಹೆಮ್ಮರವಾಗಿ, ಕ್ರಮೇಣ ಅನೇಕ ಟಿಸಿಲುಗಳೊಡೆದು ಬೇರೆ ಬೇರೆಯಾಯಿತು. ಬಿಜೆಪಿಯೂ ಈ ಪರಿವಾರದ ಒಂದು ತುಣುಕಷ್ಟೇ. ಜೆಡಿಎಸ್‌, ಜೆಡಿಯು, ಆರ್‌ಜೆಡಿ, ಬಿಜೆಡಿ, ಸಮಾಜವಾದಿ ಪಕ್ಷಗಳೆಲ್ಲ ಈ ಮಹಾವೃಕ್ಷದ ರೆಂಬೆ-ಕೊಂಬೆಗಳೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಜನತಾ ಪರಿವಾರದ ಟಿಸಿಲುಗಳು ದೇಶದ ಉದ್ದಗಲಕ್ಕೂ ‌ಬೃಹತ್‌ ವೃಕ್ಷಗಳಾಗಿ ಬೆಳೆದು ನಿಂತಿವೆ. ಅವುಗಳ ಬೇರುಗಳು ಆಳಕ್ಕಿಳಿದು ಬಲಿಷ್ಠವಾಗಿವೆ; ಕೀಳುವುದು, ಅಲ್ಲಾಡಿಸುವುದು ಸುಲಭವಲ್ಲ. ಮೋದಿ ಅವರಿಗೆ ಈ ವಿಷಯವೂ ತಿಳಿಯದ್ದೇನಲ್ಲ. ಜನಸಂಘ ಬಿಜೆಪಿಯಾಗಿ ರೂಪಾಂತರಗೊಂಡು ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದು ತನ್ನ ಸ್ವಂತ ಶಕ್ತಿಯಿಂದೇನಲ್ಲ. ಇದೇ ಕುಟುಂಬ ಕೇಂದ್ರಿತ ಪಕ್ಷಗಳ ಊರುಗೋಲಿನಿಂದ. ಎನ್‌ಡಿಎ ಹುಟ್ಟಿದ್ದು ಹೇಗೆ? ಹುಟ್ಟಿದಾಗ ಎಷ್ಟು ಪಕ್ಷಗಳಿದ್ದವು? ಈಗೆಷ್ಟಿವೆ? ಈ ಮಾಹಿತಿ ಮೋದಿ ಅವರ ಮನದಲ್ಲಿ ಇರಬೇಕಿತ್ತು ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೊಕಸಭೆಯಲ್ಲಿ ಈಗ ಬಿಜೆಪಿಗೆ 303 ಸೀಟುಗಳಿವೆ. ಆದರೆ, ಎಷ್ಟು ಸೀಟುಗಳಿಂದ ಈ ಅಂಕಿ ಆರಂಭವಾಯಿತು? ಆ ಪಕ್ಷದ ಪ್ರಯಾಣ ಶುರುವಾಗಿದ್ದು ಎಲ್ಲಿಂದ? ಮೊದಲಿನದ್ದೆಲ್ಲವನ್ನೂ ಮೋದಿ ಮರೆತರೆ ಹೇಗೆ? ಈಗಲೂ ಅವರು ಟೀಕಿಸಿದ ಕುಟುಂಬ ಕೇಂದ್ರಿತ ಪಕ್ಷಗಳು ಎನ್‌ಡಿಎ ಕೂಟದಲ್ಲಿವೆಯಲ್ಲಾ?

ಇತ್ತೀಚೆಗೆ, ನಿತ್ಯವೂ ಕುಟುಂಬ ರಾಜಕಾರಣ-ಭ್ರಷ್ಟಾಚಾರದ ಬಗ್ಗೆ ಹೇಳುವ ಅವರ ಪಕ್ಷದಲ್ಲೇ ಇರುವ ʼವಂಶವೃಕ್ಷದ ಘೋಂಡಾರಣ್ಯ ಮತ್ತು ಭ್ರಷ್ಟಾಚಾರʼ ಕೂಪದ ಬಗ್ಗೆ ಅವರೇಕೆ ದಿವ್ಯಮೌನ ವಹಿಸುತ್ತಾರೆ? ಕರ್ನಾಟಕದಿಂದ ಹಿಡಿದು, ವಿಂಧ್ಯ ಪರ್ವತದ ಆಚೆಗೂ ಬಿಜೆಪಿಗರ ಕುಟುಂಬಗಳ ಕುಲಕಸುಬು ರಾಜಕೀಯವೇ ಆಗಿ, ಭ್ರಷ್ಟಾಚಾರವು ಅವರ ನಿತ್ಯ ಆಚಾರ ಆಗಿದೆ. ದೇಶಕ್ಕೆ ಅಪಾಯ ಇರುವುದು ʼಕುಟುಂಬವಾದಿ  ಪಕ್ಷಗಳಿಂದಲ್ಲ, ಬಿಜೆಪಿಯಂಥ ಕೋಮುವಾದಿ ಪಕ್ಷದಿಂದ.ʼ ಭಾವನಾತ್ಮಕವಾಗಿ ಜನರನ್ನು ಜಗಳಕ್ಕಿಳಿಸಿ ಜಾಗ ಹಿಡಿಯುವ ಪರಿಪಾಠ ಪ್ರಜಾಪ್ರಭುತ್ವದ ನಿಜವಾದ ದೊಡ್ಡ ಶತ್ರು. ಸಂವಿಧಾನಕ್ಕೆ ಗಂಡಾಂತರಕಾರಿ. ಮಾನ್ಯ ಮೋದಿ ಅವರಿಗೆ ಈ ವಿಷಯ ಗೊತ್ತಿಲ್ಲವೆಂದು ನಾನು ಭಾವಿಸುವುದಿಲ್ಲ. ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು?

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ  ಸರ್ಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರ್ಕಾರʼವಿದು! ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ?

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ? ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ! ಏಕೆ?

ಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಒಂದೆಡೆ, ಸಂಸತ್ತು-ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ! ಇನ್ನೊಂದೆಡೆ, ಆಪರೇಷನ್ ಕಮಲದ ಮೂಲಕ ಸಂವಿಧಾನದ ಶಿರಚ್ಛೇಧ! ಇದೆಂಥಾ ರಾಜಕಾರಣ? ಇದು ರಾಷ್ಟ್ರೀಯವಾದಿ ಪಕ್ಷದ ಸೋಗಲಾಡಿತನ.

ಮುಖ್ಯಮಂತ್ರಿ ಸ್ಥಾನವನ್ನು ಕರ್ನಾಟಕದಲ್ಲಿ ಮಾರಾಟಕ್ಕೆ ಇಟ್ಟಿದ್ದು ಯಾರು? ಕುಟುಂಬ ರಾಜಕಾರಣದ ಪಕ್ಷವೋ? ಬಿಜೆಪಿಯೋ? ‘ 2,500 ಕೋಟಿ ಕೊಡಿ, ನಿಮ್ಮನ್ನು ಸಿಎಂ ಮಾಡುತ್ತೇವೆ’ ಎಂದು ಕೇಳಿದ ಪಾರ್ಟಿ ಬಿಜೆಪಿ. ಇದನ್ನು ಹೇಳಿದ್ದು ನಾವಲ್ಲ,  ಸ್ವತಃ ಬಿಜೆಪಿ ಶಾಸಕರೇ! ಆ ಶಾಸಕರ ಮೇಲೆ ಶಿಸ್ತುಕ್ರಮ ಇರಲಿ, ಒಂದು ನೊಟೀಸನ್ನೂ ಕೊಡಲಿಲ್ಲ.

ಹೋಗಲಿ.. ಮೋದಿ ಅವರೂ ಸಿಎಂ ಕುರ್ಚಿ ಮಾರಾಟದ ಬಗ್ಗೆ ಮಾತನಾಡಲಿಲ್ಲ. ಈ ಘನಘೋರ ಆರೋಪದ ಬಗ್ಗೆಯೂ ಅವರದ್ದು ಮುಂದುವರಿದ ಮೌನ! ಅಲ್ಲಿಗೆ ಶಾಸಕರ ಹೇಳಿಕೆ ಸತ್ಯ ಎಂದಾಯಿತಲ್ಲ. ಪಿಎಸ್‌ಐ ಹುದ್ದೆಗಳಂತೆ ಸಿಎಂ ಪದವಿಯನ್ನೂ ಮಾರಿಕೊಳ್ಳುವುದು ದೇಶಕ್ಕೆ ಸೌಭಾಗ್ಯವಾ? ಯುವಕರಿಗೆ ಆದರ್ಶವಾ?

ಕುಟುಂಬ ರಾಜಕಾರಣದ ನೆಪವೊಡ್ಡಿ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ತಂತ್ರ ಫಲಿಸದು. ಭಾರತವೆಂದರೆ; ಬಿಜೆಪಿಯಷ್ಟೇ ಅಲ್ಲ, 140 ಕೋಟಿಗೂ ಹೆಚ್ಚು ಭಾರತೀಯರು ಸೇರಿದರೆ ಮಾತ್ರ ಭಾರತ. ಪ್ರಧಾನಿಗಳು ಈ ಆಶಯವನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *