ಕುವೆಂಪು ವಿವಾದ: ರೋಹಿತ್ ಚಕ್ರತೀರ್ಥ ಪದಚ್ಯುತಗೊಳಿಸುವಂತೆ ಸಿಎಂ ಮೇಲೆ ಲೇಖಕರು, ರಾಜಕೀಯ ನಾಯಕರು, ಸಾಹಿತಿಗಳಿಂದ ಒತ್ತಡ

ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.

Rohith Chakrathirtha

ಬೆಂಗಳೂರು: ಕುವೆಂಪು ನಾಡಗೀತೆ ಅವಮಾನಿಸಿರುವ ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಪದಚ್ಯುತಗೊಳಿಸುವಂತೆ ಲೇಖಕರು, ರಾಜಕೀಯ ನಾಯಕರು ಹಾಗೂ ಸಾಹಿತಿಗಳಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ. 

ಆದಿಚುಂಚನಗಿರಿ ಮಠದ ಮುಖ್ಯಸ್ಥ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ‘ರಾಷ್ಟ್ರಕವಿ’ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ಅವಮಾನ ಮಾಡಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 

ಕುವೆಂಪು ಅವರು ಮೊದಲ ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ಕನ್ನಡ ಮತ್ತು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ. ಸರ್ಕಾರ ಅವರಿಗೆ ಕರ್ನಾಟಕ ರತ್ನ ನೀಡಿ ಗೌರವಿಸುವುದರ ಜೊತೆಗೆ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಸ್ಥಾಪಿಸಿತು. ಆದರೆ, ಅವರನ್ನು ಅವಮಾನ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಜವಾಬ್ದಾರಿಯುತ ಹುದ್ದೆ ನೀಡಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಈ ನಡುವೆ ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಹಂಪ ನಾಗರಾಜಯ್ಯ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಈ ಬೆಳವಣಿಗೆಯಲ್ಲಿ ಸರಕಾರ ಮೂಕಪ್ರೇಕ್ಷಕರಾಗಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ, ನಾಡಗೀತೆಯನ್ನು ಅವಮಾನಿಸುವವರಿಗೆ ಸರಕಾರಿ ಸಮಿತಿಗಳ ಸದಸ್ಯರಾಗಿ ಅವಕಾಶ ಸಿಗುತ್ತದೆ ಎಂಬ ತಪ್ಪು ಸಂದೇಶ ರವಾನಿಸಲಾಗುತ್ತಿದೆ. “ವ್ಯಕ್ತಿಗಳ ಮೇಲಿನ ದಾಳಿಯನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಭರವಸೆ ವ್ಯರ್ಥವಾಯಿತು, ಮತ್ತು ಕುವೆಂಪು ಮತ್ತು ನಾಡಗೀತೆಯ ಅವಮಾನವಾಗುತ್ತಿದ್ದರೂ ಮೌನವಾಗಿರುವುದು ನನ್ನಿಂದ ಸಾಧ್ಯವಿಲ್ಲ. ಹೀಗಾಗಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾನೆ. ಮುಖ್ಯಮಂತ್ರಿಗಳು ಈ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆಂದು ನಾಗರಾಜಯ್ಯ ಹೇಳಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *