ವಿಧಾನಸಭಾ ಅಧ್ಯಕ್ಷರ ಮಲತಾಯಿಧೋರಣೆ,ಮೂಲಕಾರ್ಯಕರ್ತರ ಕಡೆಗಣನೆ ವಿರೋಧಿಸಿ ಹರೀಶ್‌ ಗೌಡರ್‌ ರಾಜೀನಾಮೆ

ಪಕ್ಷದ ಸಾಮಾನ್ಯ ಕಾರ್ಯಕರ್ತರ ಕಡೆಗಣನೆ ನಿಷ್ಠಾವಂತರ ಅಪಹಾಸ್ಯ ಮಾಡುತ್ತಾ ಅನ್ಯಪಕ್ಷಗಳ ಜನರಿಗೆ ಪ್ರಶಸ್ತಿ,ಪುರಸ್ಕಾರ ಕೊಡಿಸುತ್ತಾ ಸ್ವಪಕ್ಷದಲ್ಲಿ ಒಡುಕು ಮೂಡಿಸಿ ಅನ್ಯ ಪಕ್ಷಗಳ ನಾಯಕರ ಜೊತೆಗೆ ಹೊಂದಾಣಿಕೆ ಮಾಡುವ ಸ್ಥಳಿಯ ಶಾಸಕ ಮತ್ತು ರಾಜ್ಯದ ಗೌರವಾನ್ವಿತ ವಿಧಾನಸಭಾ ಅಧ್ಯಕ್ಷರ ನಡವಳಿಕೆ ವಿರೋಧಿಸಿ ಸಿದ್ಧಾಪುರ ತಾಲೂಕಾ ಯುವಮೋರ್ಚಾ ಅಧ್ಯಕ್ಷತೆಗೆ ರಾಜೀನಾಮೆ ನೀಡಿರುವುದಾಗಿ ಹರೀಶ್‌ ಗೌಡರ್‌ ಮಳಲಿಕೊಪ್ಪ ಪ್ರಕಟಿಸಿದ್ದಾರೆ.

ಸಿದ್ಧಾಪುರ ಬಿ.ಜೆ.ಪಿ. ಕಛೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ವಿವರಣೆ ನೀಡಿದ ಅವರು ಹಿಂದಿನ ಚುನಾವಣೆಗಳಲ್ಲಿ ಬಿ.ಜೆ.ಪಿ. ಆಯ್ಕೆಯಾದರೆ ಅಕ್ರಮ ಮದ್ಯ ಮಾರಾಟ ನಿಯಂತ್ರಿಸುತ್ತೇವೆ ಎಂದು ಜನರ ಬಳಿ ಮತಯಾಚಿಸಿದ್ದೆವು. ಈಗ ಕ್ಷೇತ್ರದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ ನಾವೇ ಆಯ್ಕೆ ಮಾಡಿದ ಶಾಸಕರು ಅದಕ್ಕೆ ಸಹಕರಿಸುತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಬಿ.ಜೆ.ಪಿ. ತತ್ವ-ಸಿದ್ಧಾಂತ ನಂಬಿ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತಿದ್ದೇವೆ ಆದರೆ ನಮ್ಮ ಶಾಸಕರು ಅನ್ಯ ಪಕ್ಷಗಳ ಜನರಿಗೆ ಪ್ರಶಸ್ತಿ ಪುರಸ್ಕಾರ ಕೊಡಿಸುವುದು, ಸರ್ಕಾರದ ನೇಮಕಾತಿಗಳಿಗೆ ಸಹಕರಿಸುವುದು ಮಾಡುತಿದ್ದಾರೆ. ಗುತ್ತಿಗೆ ಕೆಲಸ ನೀಡಿಕೆ, ಅನ್ಯರ ಓಲೈಕೆ ಮಾಡುತ್ತಾ ಪಕ್ಷ, ಸಂಘಟನೆಗೆ ದುಡಿದವರಿಗೆ ಅನ್ಯಾಯ ಮಾಡುತಿದ್ದಾರೆ.

ಈ ಅವ್ಯವಸ್ಥೆ, ನಿಷ್ಟಾವಂತರ ಕಡೆಗಣಗಳಿಂದ ಬೇಸತ್ತು ಬಿ.ಜೆ.ಪಿ. ತಾಲೂಕಾ ಯುವಮೋರ್ಚಾ ಅಧ್ಯಕ್ಷತೆಗೆ ರಾಜೀನಾಮೆ ನೀಡಿದ್ದೇನೆ. ನನ್ನೊಂದಿಗೆ ಚಂದನ ಶಾಸ್ತ್ರಿ ಕೂಡಾ ರಾಜೀನಾಮೆ ನೀಡಿದ್ದಾರೆ ಎಂದು ಹರೀಶ್‌ ಗೌಡರ್‌ ತಿಳಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *