ಕುಮಟಾದ ಈ ಗ್ರಾಮದಲ್ಲಿ ಮದುವೆಗೂ ತೊಡಕಾಗಿರುವ ಪ್ರಬಲವಾದ ಕಾರಣ ಏನು ಗೊತ್ತೆ?

Thumbnail image

ಮೂಲ ಸೌಕರ್ಯಗಳಿಂದ ವಂಚಿತ ಕುಮಟಾದ ಮೇದಿನಿ ಗ್ರಾಮ.. ಸೂಕ್ತ ರಸ್ತೆಗೆ ಗ್ರಾಮಸ್ಥರ ಮನವಿ

ಕುಮಟಾ ತಾಲೂಕಿನ ಮೇದಿನಿ ಗ್ರಾಮ ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದು, ನಮಗೆ ಅತಿ ಅಗತ್ಯವಿರುವ ರಸ್ತೆ ನಿರ್ಮಿಸಿಕೊಡಿ ಎಂದು ಸ್ಥಳಿಯರು ಮನವಿ ಮಾಡಿದ್ದಾರೆ.

ಕಾರವಾರ(ಉತ್ತರಕನ್ನಡ): ಜಿಲ್ಲೆಯ ಕುಮಟಾ ತಾಲೂಕಿನ ಮೇದಿನಿ ಗ್ರಾಮ ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಕುಮಟಾ – ಸಿದ್ದಾಪುರ ಮುಖ್ಯ ರಸ್ತೆಯಿಂದ ಕೇವಲ 8 ಕಿ.ಮೀ ದೂರದಲ್ಲಿರುವ ಈ ಗ್ರಾಮಕ್ಕೆ ಸೂಕ್ತ ರಸ್ತೆ ಇಲ್ಲದ ಕಾರಣ ಅನಾರೋಗ್ಯಕ್ಕೆ ಒಳಗಾದವರನ್ನು ಒಳಗೊಂಡಂತೆ ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ತಲೆಯ ಮೇಲೆಯೇ ಹೊತ್ತು ನಡೆಯಬೆಕಾದ ಪರಿಸ್ಥಿತಿ ಇದೆ.

ರಸ್ತೆ ಸಮಸ್ಯೆ ಕಾರಣಕ್ಕೆ ಗ್ರಾಮದ ಬಹುತೇಕ ಮಕ್ಕಳು ಅರ್ಧಕ್ಕೆ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳಿಂದ ಬೇಸತ್ತು ಹೋರಾಟ ನಡೆಸಿದ ಹಿನ್ನೆಲೆ, 2019ರಲ್ಲಿ ಅಂದಿನ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಗ್ರಾಮ ವಾಸ್ತವ್ಯ ನಡೆಸಿ ಸ್ಥಳೀಯರ ಸಮಸ್ಯೆ ಆಲಿಸಿದ್ದರಾದರೂ ಕೂಡ ಯಾವುದೇ ಪ್ರಯೋಜನವಾಗಿರಲಿಲ್ಲ. ಪಿಂಚಣಿ, ಶಾಲೆಗೆ ಸುಣ್ಣ ಬಣ್ಣ ಹೀಗೆ ಸಣ್ಣಪುಟ್ಟ ಸಮಸ್ಯೆಗಳು ಮಾತ್ರ ಬಗೆಹರಿದಿತ್ತು.

ಮೇದಿನಿ ಗ್ರಾಮದ ರಸ್ತೆ ಸಮಸ್ಯೆ!

ಈ ಬಾರಿ ಮತ್ತೆ ಈಗಿನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತೆರಳಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು. ಒಂದಿಷ್ಟು ಸಮಸ್ಯೆಗಳಿಗೆ ಮುಕ್ತಿ ದೊರಕಿಸಿದ್ದರು. ಅಲ್ಲದೇ ಮೂಲ ಸಮಸ್ಯೆಯಾಗಿರುವ ರಸ್ತೆ ಹಾಗೂ ವಿದ್ಯುತ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದೀಗ ಮಳೆಗಾಲ ಆರಂಭವಾಗುತ್ತಿದ್ದು, ಈವರೆಗೂ ಯಾವುದೇ ಯೋಜನೆ ಜಾರಿಯಾಗಿಲ್ಲ. ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ನಮಗೆ ಅತಿ ಅಗತ್ಯವಿರುವ ರಸ್ತೆ ನಿರ್ಮಿಸಿಕೊಡಿ ಎಂದು ಸ್ಥಳಿಯರು ಮನವಿ ಮಾಡಿದ್ದಾರೆ.

ಗ್ರಾಮದಲ್ಲಿ ಸುಮಾರು 56 ಮನೆಗಳಿದ್ದು ಬಹುತೇಕರು ರೈತರಾಗಿದ್ದಾರೆ. ಹೆಚ್ಚಿನವರಲ್ಲಿ ಸ್ವಂತ ಗಾಡಿಯೂ ಇಲ್ಲ. ಮಳೆಗಾಲದಲ್ಲೂ ನಡೆದೇ ಸಾಗಬೇಕು. ಅದೇಷ್ಟೋ ಮನೆಗಳಲ್ಲಿ ಸಂಬಂಧ ಬೆಳೆಸಲು ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ ಮದುವೆಗೆ ಬಂದ ಮಕ್ಕಳ ಮದುವೆ ಮಾಡಲಾಗದ ಪರಿಸ್ಥಿತಿ ಇದೆ.

ಗ್ರಾಮ 7 ಕಿ.ಮೀ ವಿಸ್ತಾರದಲ್ಲಿದ್ದರೂ ತುರ್ತಾಗಿ 3 ಕಿ.ಮೀ ರಸ್ತೆ ನಿರ್ಮಾಣ ಮಾಡಿದರೆ ಗ್ರಾಮಸ್ಥರು ಸುಲಭವಾಗಿ ಸಂಚಾರ ಮಾಡಲು ಸಾಧ್ಯವಿದೆ. ಇಷ್ಟಾದರೂ ಜನಪ್ರತಿನಿಧಿಗಳು ಅನುದಾನ ಮಂಜೂರು ಮಾಡಿಸಲು ಮುಂದಾಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ಅಸಮಾಧಾನ. ಈ ಬಗ್ಗೆ ಸ್ಥಳೀಯ ಶಾಸಕರಾದ ದಿನಕರ ಶೆಟ್ಟಿ ಬಳಿ ಕೇಳಿದ್ರೆ, ಗ್ರಾಮ ಅರಣ್ಯ ಪ್ರದೇಶದಲ್ಲಿದ್ದು ಈಗಾಗಲೇ ಸ್ವಲ್ಪ ಅನುದಾನ ನೀಡಿದ್ದೇನೆ. ಮುಂದೆ ಈ ಬಗ್ಗೆ ಪ್ರಯತ್ನ ನಡೆಸುವುದಾಗಿ ತಿಳಿಸಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *