ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ : ರಾಕಿಂಗ್ ಸ್ಟಾರ್ ಯಶ್‌ರ ಯಶೋ ಮಾರ್ಗದಿಂದ ಪುನಶ್ಚೇತನ

Thumbnail image

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ದಾರ ಕಾರ್ಯಕ್ಕೆ ಕೈ ಹಾಕಲಾಗಿತ್ತು. ಸರಸ್ಸುವಿನಲ್ಲಿ ಗಿಡ-ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ದಾರ ಮಾಡಲಾಗಿದೆ.

ಶಿವಮೊಗ್ಗ : ಪಾಳು ಬಿದ್ದು ಸುಸೈಡ್ ಪಾಯಿಂಟ್ ಆಗಿದ್ದ ಕೆಳದಿ ಅರಸರಿಂದ ನಿರ್ಮಾಣದ ಚಂಪಕ ಸರಸ್ಸುವನ್ನು ನಟ ಯಶ್ ಅವರ ಯಶೋ ಮಾರ್ಗದ ಮೂಲಕ ಜೀರ್ಣೋದ್ಧಾರ ನಡೆಸಿ ಲೋಕಾರ್ಪಣೆ ಮಾಡಲಾಯಿತು. ಸಾಗರ ತಾಲೂಕು ಆನಂದಪುರಂ ಬಳಿ ಚಂಪಕ ಸರಸ್ಸು ಕೆರೆಯನ್ನು ಕೆಳದಿಯ ಸೋಮಶೇಖರ ನಾಯ್ಕ ನಿರ್ಮಿಸಿದರು ಎಂದು ಇತಿಹಾಸ ತಿಳಿಸುತ್ತದೆ. ಸಾಮ್ರಾಜ್ಯ ವಿಸ್ತರಣೆಗಾಗಿ ಬಂದಾಗ ಆನಂದಪುರಂ ಬಳಿ ಮಹಿಳೆಗೆ ಮನಸೋತು ಆಕೆಯನ್ನು ಪ್ರೀತಿಸುತ್ತಾನೆ. ಆಕೆಯ‌ ನೆನಪಿಗೆ ಈ ಚಂಪಕ ಸರಸ್ಸು ನಿರ್ಮಿಸಿದರು ಎಂದು ತಿಳಿದು ಬರುತ್ತದೆ.

ಇದು ಚೌಕಾಕಾರದ ಒಂದು ಸುಂದರ ಕೊಳವಾಗಿದೆ. ಕಲ್ಲಿನಿಂದ ನಿರ್ಮಿಸಲಾದ ಇಲ್ಲಿ ಸುಂದರ ಕೆತ್ತನೆಯನ್ನು ಒಳಗೊಂಡಿದೆ. ಚಂಪಕ ಸರಸ್ಸು ಮುಂಭಾಗ ಎರಡು ಆನೆಗಳು ಸ್ವಾಗತ ನೀಡುತ್ತವೆ. ಇದರ ಮಧ್ಯ ಭಾಗದಲ್ಲಿ ಶಿವನ ಲಿಂಗವಿದೆ. ಅಲ್ಲಿಗೆ ಸಾಗಲು ಕಲ್ಲಿನ ದಾರಿ ಇದೆ. ಅತ್ಯಂತ ಸುಂದರವಾದ ಚಂಪಕ ಸರಸ್ಸು ಆಡಳಿತ ನಡೆಸುವವರ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು.

ಜಲತಜ್ಞ ಶಿವಾನಂದ ಕಳವೆ ಅವರ ಕರೆಯ ಮೇರೆಗೆ ರಾಕಿಂಗ್ ಸ್ಟಾರ್ ಯಶ್ ಅವರು ಕಳೆದ ವರ್ಷ ಡಿಸೆಂಬರ್​ನಲ್ಲಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ಮುಂದಾಗಿದ್ದರು. ಸರಸ್ಸುವಿನಲ್ಲಿ ಗಿಡ ಗಂಟಿ ಬೆಳೆದು ಸೀಳು ಬಿಟ್ಟು, ಬಿದ್ದು ಹೋಗಿದ್ದ ಕಲ್ಲುಗಳನ್ನು ಸ್ವಚ್ಛಗೊಳಿಸಿ, ಜೀರ್ಣೋದ್ಧಾರ ಮಾಡಲಾಗಿದೆ. ಈ ಚಂಪಕ ಸರಸ್ಸುವನ್ನು ಇಂದು ಜಲತಜ್ಞರಾದ ಶಿವಾನಂದ ಕಳವೆ ಅವರು ಉದ್ಘಾಟಿಸಿದರು. ಸರಸ್ಸು ಆವರಣದಲ್ಲಿ ಕೆಳದಿ ಅರಸ ಇತಿಹಾಸಗಾರರಾದ ಗುಂಡಾಜೋಯಿಸ ಅವರು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಜೀರ್ಣೋದ್ದಾರವಾದ ಚಂಪಕ ಸರಸ್ಸು ಲೋಕಾರ್ಪಣೆ

ಯಶ್ ಅವರ ದೂರದೃಷ್ಟಿ ಹಾಗೂ ಪರಿಸರ, ಜಲಮೂಲಗಳ ರಕ್ಷಣೆಯ ಬಗ್ಗೆ ಆಸಕ್ತಿಯಿಂದ ಚಂಪಕ ಸರಸ್ಸು ಮತ್ತೆ ನಮಗೆ ಲಭ್ಯವಾಗಿದೆ ಎಂದು ಶಿವಾನಂದ ಕಳವೆ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರಕ್ಕೆ ಸಹಕಾರ ನೀಡಿದ ಇತಿಹಾಸ ಪರಂಪರೆ ಉಳಿಸಿ ಸಮಿತಿ ಅವರಿಗೆ ಸನ್ಮಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸತೀಶ್ ಶಿವಣ್ಣ, ಯಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಜೇಂದ್ರ ಗೌಡ, ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ನ ರವಿಕುಮಾರ್ ಬಿ ಡಿ ಇತರರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *