Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!

2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 

Bengal script a unique record against Jharkhand

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಪರೂಪದ ದಾಖಲೆ ನಿರ್ಮಿಸಿದ ಬಂಗಾಳ, 7 ಅರ್ಧಶತಕ, 2 ಶತಕ!!

ಬೆಂಗಳೂರು: 2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 


ಹೌದು.. 2022ರ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಜಾರ್ಖಂಡ್ ತಂಡದ ವಿರುದ್ಧದ ಪಂದ್ಯದಲ್ಲಿ ಬಂಗಾಳ ತಂಡ ಈ ದಾಖಲೆ ನಿರ್ಮಿಸಿದ್ದು, ತಮ್ಮ ಒಂಬತ್ತು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸುವುದರೊಂದಿಗೆ ಬಂಗಾಳ ಕ್ರಿಕೆಟ್ ತಂಡವು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಬೆಂಗಳೂರಿನಲ್ಲಿ ನಡೆದ ಜಾರ್ಖಂಡ್ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಂಗಾಳ ತಂಡ 7 ವಿಕೆಟ್ ನಷ್ಟಕ್ಕೆ 773ರನ್ ಗಳಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ತಂಡದ ಈ ಮ್ಯಾರಥಾನ್ ರನ್ ಗಳಿಕೆಯಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ಸೇರಿದ್ದವು. ಅವಕಾಶ ಪಡೆದು ಅಂಗಳಕ್ಕಿಳಿದ ಬಂಗಾಳ ತಂಡದ ಎಲ್ಲಾ ಬ್ಯಾಟರ್‌ಗಳು ಕನಿಷ್ಠ ತಲಾ ಅರ್ಧಶತಕ ಬಾರಿಸಿದರು. ನಂ. 3 ಬ್ಯಾಟರ್ ಸುದೀಪ್ ಘರಾಮಿ (186) ಮತ್ತು ನಂ. 4 ಅನುಸ್ತುಪ್ ಮಜುಂದಾರ್ (117) ಮೂರಂಕಿ ಸ್ಕೋರ್ ತಲುಪಿದರು. 

ಪ್ರಥಮ ದರ್ಜೆ ಇನ್ನಿಂಗ್ಸ್ ನಲ್ಲಿ ಒಂಬತ್ತು ಬ್ಯಾಟ್ಸ್ ಮನ್‌ಗಳು ತಲಾ ಅರ್ಧಶತಕ ಸಿಡಿಸಿದ್ದು ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು. ಈ ಹಿಂದೆ ಮೊದಲ ದರ್ಜೆಯ ಇನ್ನಿಂಗ್ಸ್ ನಲ್ಲಿ ತಂಡವೊಂದರ ಎಂಟು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸಿದ್ದು 1893 ರಲ್ಲಿ ಘಟಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಪೋರ್ಟ್ಸ್‌ಮೌತ್‌ನಲ್ಲಿ ನಡೆದ ಆ ಪಂದ್ಯದಲ್ಲಿ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯಗಳ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡದ ಎಂಟು ಸದಸ್ಯರು ಕನಿಷ್ಠ ತಲಾ ಅರ್ಧಶತಕ ಗಳಿಸಿದ್ದರು.

ಅಂದಹಾಗೆ ಹಾಲಿ ಪಂದ್ಯದಲ್ಲಿ ಬಂಗಾಳ ನೀಡಿರುವ ಬೃಹತ್ ರನ್ ಅನ್ನು ಬೆನ್ನು ಹತ್ತಿರುವ ಜಾರ್ಖಂಡ್ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 139ರನ್ ಗಳಿಸಿ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿ ಸಿಲುಕಿದೆ. 17 ರನ್ ಗಳಿಸಿರುವ ವಿರಾಟ್ ಸಿಂಗ್ ಮತ್ತು ದಿನದಾಟದ ಕೊನೆಯ ಹಂತದಲ್ಲಿ ಕ್ರೀಸ್ ಗೆ ಇಳಿದ ಅನುಕುಲ್ ರಾಯ್ 1 ರನ್ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *