Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!

2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 

Bengal script a unique record against Jharkhand

ಕ್ರಿಕೆಟ್ ಇತಿಹಾಸದಲ್ಲೇ ಅತ್ಯಪರೂಪದ ದಾಖಲೆ ನಿರ್ಮಿಸಿದ ಬಂಗಾಳ, 7 ಅರ್ಧಶತಕ, 2 ಶತಕ!!

ಬೆಂಗಳೂರು: 2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 


ಹೌದು.. 2022ರ ರಣಜಿ ಟ್ರೋಫಿಯ ಮೊದಲ ಕ್ವಾರ್ಟರ್ ಫೈನಲ್ ನಲ್ಲಿ ಜಾರ್ಖಂಡ್ ತಂಡದ ವಿರುದ್ಧದ ಪಂದ್ಯದಲ್ಲಿ ಬಂಗಾಳ ತಂಡ ಈ ದಾಖಲೆ ನಿರ್ಮಿಸಿದ್ದು, ತಮ್ಮ ಒಂಬತ್ತು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸುವುದರೊಂದಿಗೆ ಬಂಗಾಳ ಕ್ರಿಕೆಟ್ ತಂಡವು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಬೆಂಗಳೂರಿನಲ್ಲಿ ನಡೆದ ಜಾರ್ಖಂಡ್ ವಿರುದ್ಧದ ರಣಜಿ ಟ್ರೋಫಿ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಂಗಾಳ ತಂಡ 7 ವಿಕೆಟ್ ನಷ್ಟಕ್ಕೆ 773ರನ್ ಗಳಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿತು. ತಂಡದ ಈ ಮ್ಯಾರಥಾನ್ ರನ್ ಗಳಿಕೆಯಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ಸೇರಿದ್ದವು. ಅವಕಾಶ ಪಡೆದು ಅಂಗಳಕ್ಕಿಳಿದ ಬಂಗಾಳ ತಂಡದ ಎಲ್ಲಾ ಬ್ಯಾಟರ್‌ಗಳು ಕನಿಷ್ಠ ತಲಾ ಅರ್ಧಶತಕ ಬಾರಿಸಿದರು. ನಂ. 3 ಬ್ಯಾಟರ್ ಸುದೀಪ್ ಘರಾಮಿ (186) ಮತ್ತು ನಂ. 4 ಅನುಸ್ತುಪ್ ಮಜುಂದಾರ್ (117) ಮೂರಂಕಿ ಸ್ಕೋರ್ ತಲುಪಿದರು. 

ಪ್ರಥಮ ದರ್ಜೆ ಇನ್ನಿಂಗ್ಸ್ ನಲ್ಲಿ ಒಂಬತ್ತು ಬ್ಯಾಟ್ಸ್ ಮನ್‌ಗಳು ತಲಾ ಅರ್ಧಶತಕ ಸಿಡಿಸಿದ್ದು ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು. ಈ ಹಿಂದೆ ಮೊದಲ ದರ್ಜೆಯ ಇನ್ನಿಂಗ್ಸ್ ನಲ್ಲಿ ತಂಡವೊಂದರ ಎಂಟು ಬ್ಯಾಟರ್‌ಗಳು ಅರ್ಧಶತಕಗಳನ್ನು ಗಳಿಸಿದ್ದು 1893 ರಲ್ಲಿ ಘಟಿಸಿದ್ದು ಇದುವರೆಗಿನ ದಾಖಲೆಯಾಗಿತ್ತು.

ಪೋರ್ಟ್ಸ್‌ಮೌತ್‌ನಲ್ಲಿ ನಡೆದ ಆ ಪಂದ್ಯದಲ್ಲಿ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯಗಳ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡದ ಎಂಟು ಸದಸ್ಯರು ಕನಿಷ್ಠ ತಲಾ ಅರ್ಧಶತಕ ಗಳಿಸಿದ್ದರು.

ಅಂದಹಾಗೆ ಹಾಲಿ ಪಂದ್ಯದಲ್ಲಿ ಬಂಗಾಳ ನೀಡಿರುವ ಬೃಹತ್ ರನ್ ಅನ್ನು ಬೆನ್ನು ಹತ್ತಿರುವ ಜಾರ್ಖಂಡ್ ತಂಡ ಮೂರನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 139ರನ್ ಗಳಿಸಿ ಇನ್ನಿಂಗ್ಸ್ ಹಿನ್ನಡೆಯ ಭೀತಿಯಲ್ಲಿ ಸಿಲುಕಿದೆ. 17 ರನ್ ಗಳಿಸಿರುವ ವಿರಾಟ್ ಸಿಂಗ್ ಮತ್ತು ದಿನದಾಟದ ಕೊನೆಯ ಹಂತದಲ್ಲಿ ಕ್ರೀಸ್ ಗೆ ಇಳಿದ ಅನುಕುಲ್ ರಾಯ್ 1 ರನ್ ಗಳಿಸಿ ನಾಲ್ಕನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *