ವೈರಲ್‌ ಆಯ್ತು ಸಾಯಿಪಲ್ಲವಿ ಹೇಳಿಕೆ…

ಕಾಶ್ಮೀರಿ ಪಂಡಿತರದ್ದು ನರಮೇಧವಾದರೆ, ಜೈಶ್ರೀರಾಮ್ ಹೆಸರಲ್ಲಿ ಮುಸ್ಲಿಂರ ಮೇಲೆ ನಡಿತಿರೋದೇನು?: ನಟಿ ಸಾಯಿ ಪಲ್ಲವಿ

ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.

ನವದೆಹಲಿ: ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಇತ್ತೀಚಿಗೆ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲಾದ ಹಲ್ಲೆಯನ್ನು ಹೋಲಿಸಿ ಯಾರನ್ನೂ ಧರ್ಮದ ಹೆಸರಲ್ಲಿ ಹಿಂಸಿಸಬಾರದೆಂದಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಅವರು ‘ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವುಗಳನ್ನು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಹೇಳಿದ್ದಾರೆ. 

ನಟಿ ಸಾಯಿ ಪಲ್ಲವಿಯ ಮಾತಿಗೆ ಪರ ವಿರೋಧ ವ್ಯಕ್ತವಾಗಿದೆ. ಕೆಲವು ಟ್ವಿಟರ್ ಬಳಕೆದಾರರು ಆಕೆಯ ಧೈರ್ಯವನ್ನು ಶ್ಲಾಘಿಸಿದರೆ, ಇತರರು ಅವರನ್ನು ಟ್ರೋಲ್ ಮಾಡಿದ್ದಾರೆ.

ಅವರ ರಾಜಕೀಯ ಒಲವಿನ ಬಗ್ಗೆ ಕೇಳಲಾದ ಪ್ರಶ್ನೆಗೆ, ತಾವು ತಟಸ್ಥ ಕುಟುಂಬದಲ್ಲಿ ಬೆಳೆದರು. ಮತ್ತು ನಮಗೆ ಉತ್ತಮ ಮನುಷ್ಯರಾಗಿ ಬದುಕಲು ಕಲಿಸಲಾಯಿತು. ನೋಯುತ್ತಿರುವವರನ್ನು ರಕ್ಷಿಸಬೇಕು ಎಂದು ನನಗೆ ಕಲಿಸಲಾಗಿದೆ, ದಮನಿತರನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.

ಸಾಯಿ ಪಲ್ಲವಿ ಪ್ರಸ್ತುತ ತಮ್ಮ ಮುಂಬರುವ ತೆಲುಗು ಚಿತ್ರ ‘ವಿರಾಟ ಪರ್ವಂ’ ಪ್ರಚಾರದಲ್ಲಿದ್ದಾರೆ. ರಾಣಾ ದಗ್ಗುಬಾಟಿ ನಟಿಸಿರುವ ಈ ಚಲನಚಿತ್ರವು 1990ರ ದಶಕದ ನೈಜ ಘಟನೆಗಳಿಂದ ಪ್ರೇರಿತವಾಗಿದೆ. ಇದು ತೆಲಂಗಾಣ ಪ್ರದೇಶದಲ್ಲಿ ನಕ್ಸಲೀಯ ಚಳವಳಿಯ ಹಿನ್ನೆಲೆಯಲ್ಲಿ ಪ್ರೇಮಕಥೆಯನ್ನು ನಿರೂಪಿಸುತ್ತದೆ. ಸಾಯಿ ಪಲ್ಲವಿ ಅವರು ನಕ್ಸಲ್ ನಾಯಕ ರಾವಣ್ಣ(ರಾಣಾ ದಗ್ಗುಬಾಟಿ) ಯನ್ನು ಪ್ರೀತಿಸುವ ವೆನ್ನೆಲಾ ಪಾತ್ರದಲ್ಲಿ ನಟಿಸಿದ್ದಾರೆ.

ಸಾಯಿ ಪಲ್ಲವಿ ಅಭಿನಯದ ‘ವಿರಾಟ ಪರ್ವಂ’ ಜೂನ್ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *