ಶಿರಸಿ: ಶಾಲ್ಮಲಾ ನದಿಯಲ್ಲಿರುವ ಐತಿಹಾಸಿಕ ಸಹಸ್ರ ಲಿಂಗಗಳೇ ಕಣ್ಮರೆ!

ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು.‌ ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ.

The idols in the Shalmala river at Sahasralinga in Uttara Kannada district

ಕಾರವಾರ: ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು.‌ ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ.

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಭೈರುಂಬೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿರುವ ಸಹಸ್ರಲಿಂಗ ಕ್ಷೇತ್ರ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಿವಲಿಂಗಗಳಿದ್ದವು. ಇವುಗಳು ಒಂದಕ್ಕಿಂತ ಒಂದು ವಿಭಿನ್ನವಾಗಿದ್ದ ಕಾರಣ ಹೆಚ್ಚು ಆಕರ್ಷಕವಾಗಿತ್ತು‌. ಈ ಶಾಲ್ಮಲಾ ನದಿ ಒಟ್ಟು 290 ಕಿ.ಮೀ. ಹರಿಯುತ್ತಿದ್ದು, ಈ ನದಿಯ ಒಳಭಾಗದಲ್ಲೂ ಸಾಕಷ್ಟು ಲಿಂಗಗಳಿವೆ. ಆದರೆ, ಇತ್ತೀಚೆಗೆ ಈ ಕ್ಷೇತ್ರದಲ್ಲಿ ಕಾಣಸಿಗುತ್ತಿದ್ದ ಶಿವಲಿಂಗಗಳ ಸಂಖ್ಯೆ ವಿವಿಧ ಕಾರಣಗಳಿಂದ ಭಾರೀ ಕಡಿಮೆಯಾಗತೊಡಗಿವೆ.

ADVERTISEMENT

ಮಳೆಗಾಲದಲ್ಲಿ ರಭಸವಾಗಿ ಹರಿಯುವ ಶಾಲ್ಮಲಾ ನದಿ ಹಲವು ಬಂಡೆಕಲ್ಲುಗಳನ್ನು ಕೊಚ್ಚಿಕೊಂಡು ಸಾಗಿದ್ದರಿಂದ ಹಾಗೂ ನೀರಿನ ರಭಸಕ್ಕೆ ಸವೆದು ಹೋಗಿರುವುದರಿದ ಇಲ್ಲಿನ ಲಿಂಗಗಳು ಕಣ್ಮರೆಯಾಗುತ್ತಿವೆ. ಇಲ್ಲಿಗೆ ಭೇಟಿ ನೀಡುವ ಕೆಲವು ಕಿಡಿಗೇಡಿ ಪ್ರವಾಸಿಗರು ಕೂಡಾ ದಾಂಧಲೆ ಎಬ್ಬಿಸಿ, ಮೋಜಿಗಾಗಿ ಕಲ್ಲುಗಳನ್ನು ಒಡೆದು ಹಾಕಿರುವ ದೂರುಗಳಿವೆ. ಇನ್ನು ಸಣ್ಣ ಸಣ್ಣ ಲಿಂಗಗಳನ್ನು ಕೆಲವರು ಕೊಂಡೊಯ್ದಿರುವುದಾಗಿಯೂ ಮಾಹಿತಿಗಳಿವೆ.

ಹದಿನೈದನೇ ಶತಮಾನದಲ್ಲಿ ಸೋದೆ ಅರಸರ ಕಾಲದಲ್ಲಿ ಸಹಸ್ರಲಿಂಗಗಳನ್ನು ಕೆತ್ತಿಸಿದ್ದರು ಎಂಬ ಪ್ರತೀತಿಯಿದೆ. ಅಂದಿನಿಂದ ಇಂದಿನವರೆಗೂ ಈ ಸ್ಥಳಕ್ಕೆ ಪ್ರತೀ ವರ್ಷ ಬೇಸಿಗೆಗಾಲದ ಸಮಯದಲ್ಲಿ ಶಿವರಾತ್ರಿ ಹಾಗೂ ಸಂಕ್ರಾಂತಿಯಂದು ಹದಿನೈದರಿಂದ ಇಪ್ಪತ್ತು ಸಾವಿರ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡಿ ಲಿಂಗಗಳಿಗೆ ಪೂಜೆ ಸಲ್ಲಿಸುತ್ತಾರೆ. ಸುಮಾರು 500 ವರ್ಷಗಳಷ್ಟು ಹಳೆ ಯ ಲಿಂಗಗಳಾಗಿವೆ.

ಇಲ್ಲಿ ಮೇಲ್ಗಡೆ 8 ಕಿ.ಮೀ. ಹಾಗೂ ಕೆಳಗಡೆ 8 ಕಿ.ಮೀ.‌ ಸೇರಿ ಒಟ್ಟು 16 ಕಿ.ಮೀ. ವ್ಯಾಪ್ತಿಯಲ್ಲಿ ಸಹಸ್ರಲಿಂಗಗಳು ವ್ಯಾಪಿಸಿವೆ. ಸದ್ಯ ಲಿಂಗಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಗಳು ಇದರತ್ತ ಗಮನ ಹರಿಸಿ ಈ ಸ್ಥಳವನ್ನು ಅಭಿವೃದ್ಧಿ ಪಡಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಮಹಾ ಶಿವರಾತ್ರಿ ಸಮಯದಲ್ಲಿ ಅಪಾರ ಪ್ರಮಾಣದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.

ಭೈರುಂಬೆ ಗ್ರಾಮ ಪಂಚಾಯಿತಿಯಿಂದ ಸಹಸ್ರಲಿಂಗ ಸ್ಥಳ ನಿರ್ವಹಿಸಲಾಗುತ್ತದೆ. ಗಾರ್ಡ್ ನೇಮಕ ಮಾಡಬಹದು ಅಷ್ಟೇ. ಅಗತ್ಯವಿದ್ದರೆ ನಾವು ಅವುಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಯಂತ್ ಹೇಳಿದರು. ಇನ್ನು ಈ ಬಗ್ಗೆ ಪರಿಶೀಲಿಸುವುದಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಲಿನ್ ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *