ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಎಲ್ಲಿ ಸ್ಥಾಪಿಸೋಣ?

ಜೂನ್‌ ೨೫ ರಂದು ಜಿಲ್ಲಾ ಆಡಳಿತದಿಂದ ನಡೆಯುವ ಅಮೃತಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟದ ಸ್ಮರಣೆಗಾಗಿ ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಅನಾವರಣ ನಡೆಯಲಿದೆ.

ಈ ಕಾರ್ಯಕ್ರಮಗಳು ಎಲ್ಲಾ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನಡೆಯಲಿವೆ. ಈ ಕಾರ್ಯಕ್ರಮದ ಪೂರ್ವತಯಾರಿ ಸಭೆಯಲ್ಲಿ ಸಿದ್ದಾಪುರದಲ್ಲಿ ಸ್ಥಾಪನೆಯಾಗಲಿರುವ ಶಿಲಾಫಲಕ ಎಲ್ಲಿ ಸ್ಥಾಪಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಿತು.

ಈ ಪ್ರಸ್ಥಾಪ ಮಾಡಿದ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್‌ ಆರ್.‌ ಸ್ವಾತಂತ್ರ್ಯೋತ್ಸವ ಅಮೃತಫಲಕ ಎಲ್ಲಿ ಸ್ಥಾಪಿಸಬೇಕು ಎಂದು ಸಲಹೆ ಕೇಳಿದಾಗ ಪತ್ರಕರ್ತ ಗಣೇಶ್‌ ಭಟ್‌ ತಹಸಿಲ್ಧಾರ ಕಛೇರಿಯ ಆವರಣದಲ್ಲಿ ಈ ಫಲಕ ಸ್ಥಾಪಿಸುವುದು ಸೂಕ್ತ ಎನ್ನುವ ಸಲಹೆ ನೀಡಿದರು.

ನಂತರ ವಕೀಲ ರವಿ ಹೆಗಡೆ ನಗರದ ಗಾರ್ಡನ್‌ ವೃತ್ತ ಅಂದರೆ ರಾಮಕೃಷ್ಣ ಹೆಗಡೆ ಸರ್ಕಲ್‌ ನಲ್ಲಿ ಈ ಫಲಕ ಸ್ಥಾಪನೆಯಾದರೆ ಒಳ್ಳೆಯದು ಎಂದರು.

ಈ ಚರ್ಚೆಗೆ ಧ್ವನಿ ಜೋಡಿಸಿದ ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಶಿಲಾಫಲಕ ನೆಟ್ಟು ನಿರ್ವಹಣೆ ಮಾಡುವುದು ವ್ಯವಸ್ಥೆಯ ಜವಾಬ್ಧಾರಿ ಪಟ್ಟಣ ಪಂಚಾಯತ್‌ ನಿರ್ವಹಣೆಯಲ್ಲಿ ಈ ಶಿಲಾಫಲಕ ಗಾರ್ಡನ್‌ ಸರ್ಕಲ್‌ ನಲ್ಲಿ ಸ್ಥಾಪನೆಯಾದರೆ ಸ್ಥಳಿಯರೊಂದಿಗೆ ಹೊರ ಊರುಗಳ ಪ್ರವಾಸಿಗರಿಗೆ ಕೂಡಾ ಸಿದ್ಧಾಪುರದ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಪರಿಚಯವಾಗಬಹುದು ಎಂದರು.

ಈ ಸಭೆಯ ನಂತರ ಸಾಧ್ಯಾಸಾಧ್ಯತೆಗಳನ್ನು ಪರಿಗಣಿಸಿ ಉಳಿದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸೂಕ್ತ ಸ್ಥಳದಲ್ಲಿ ಈ ಅಮೃತಮಹೋತ್ಸವದ ಸ್ಮರಣೆಯ ಶಿಲಾಫಲಕ ಸ್ಥಾಪಿಸುವುದಾಗಿ ತಿಳಿಸಿದರು. ಈ ವರೆಗೆ ಸಭೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆ, ಚರ್ಚೆಗಳಾಗಿವೆ. ಆದರೆ ಈ ಮಹತ್ವದ ಶಿಲಾಫಲಕ ಸಿದ್ಧಾಪುರದ ಯಾವ ಪ್ರದೇಶದಲ್ಲಿ ಸ್ಥಾಪನೆಯಾದರೆ ಒಳ್ಳೆಯದು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ದಾಖಲಿಸಲು ಸಾಧ್ಯವೆ? ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರೀಯಿಸುವ ಮೂಲಕ ಈ ಜನಾಭಿಪ್ರಾಯವನ್ನೂ ಬೆಂಬಲಿಸಬಹುದು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *