ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಎಲ್ಲಿ ಸ್ಥಾಪಿಸೋಣ?

ಜೂನ್‌ ೨೫ ರಂದು ಜಿಲ್ಲಾ ಆಡಳಿತದಿಂದ ನಡೆಯುವ ಅಮೃತಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಸ್ವಾತಂತ್ರ್ಯ ಹೋರಾಟದ ಸ್ಮರಣೆಗಾಗಿ ಅಮೃತಭಾರತಿಗೆ ಕನ್ನಡದಾರತಿ ಶಿಲಾಫಲಕ ಅನಾವರಣ ನಡೆಯಲಿದೆ.

ಈ ಕಾರ್ಯಕ್ರಮಗಳು ಎಲ್ಲಾ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ನಡೆಯಲಿವೆ. ಈ ಕಾರ್ಯಕ್ರಮದ ಪೂರ್ವತಯಾರಿ ಸಭೆಯಲ್ಲಿ ಸಿದ್ದಾಪುರದಲ್ಲಿ ಸ್ಥಾಪನೆಯಾಗಲಿರುವ ಶಿಲಾಫಲಕ ಎಲ್ಲಿ ಸ್ಥಾಪಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಿತು.

ಈ ಪ್ರಸ್ಥಾಪ ಮಾಡಿದ ಶಿರಸಿ ಉಪವಿಭಾಗಾಧಿಕಾರಿ ದೇವರಾಜ್‌ ಆರ್.‌ ಸ್ವಾತಂತ್ರ್ಯೋತ್ಸವ ಅಮೃತಫಲಕ ಎಲ್ಲಿ ಸ್ಥಾಪಿಸಬೇಕು ಎಂದು ಸಲಹೆ ಕೇಳಿದಾಗ ಪತ್ರಕರ್ತ ಗಣೇಶ್‌ ಭಟ್‌ ತಹಸಿಲ್ಧಾರ ಕಛೇರಿಯ ಆವರಣದಲ್ಲಿ ಈ ಫಲಕ ಸ್ಥಾಪಿಸುವುದು ಸೂಕ್ತ ಎನ್ನುವ ಸಲಹೆ ನೀಡಿದರು.

ನಂತರ ವಕೀಲ ರವಿ ಹೆಗಡೆ ನಗರದ ಗಾರ್ಡನ್‌ ವೃತ್ತ ಅಂದರೆ ರಾಮಕೃಷ್ಣ ಹೆಗಡೆ ಸರ್ಕಲ್‌ ನಲ್ಲಿ ಈ ಫಲಕ ಸ್ಥಾಪನೆಯಾದರೆ ಒಳ್ಳೆಯದು ಎಂದರು.

ಈ ಚರ್ಚೆಗೆ ಧ್ವನಿ ಜೋಡಿಸಿದ ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಶಿಲಾಫಲಕ ನೆಟ್ಟು ನಿರ್ವಹಣೆ ಮಾಡುವುದು ವ್ಯವಸ್ಥೆಯ ಜವಾಬ್ಧಾರಿ ಪಟ್ಟಣ ಪಂಚಾಯತ್‌ ನಿರ್ವಹಣೆಯಲ್ಲಿ ಈ ಶಿಲಾಫಲಕ ಗಾರ್ಡನ್‌ ಸರ್ಕಲ್‌ ನಲ್ಲಿ ಸ್ಥಾಪನೆಯಾದರೆ ಸ್ಥಳಿಯರೊಂದಿಗೆ ಹೊರ ಊರುಗಳ ಪ್ರವಾಸಿಗರಿಗೆ ಕೂಡಾ ಸಿದ್ಧಾಪುರದ ಸ್ವಾತಂತ್ರ್ಯ ಹೋರಾಟದ ಚರಿತ್ರೆ ಪರಿಚಯವಾಗಬಹುದು ಎಂದರು.

ಈ ಸಭೆಯ ನಂತರ ಸಾಧ್ಯಾಸಾಧ್ಯತೆಗಳನ್ನು ಪರಿಗಣಿಸಿ ಉಳಿದ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಸೂಕ್ತ ಸ್ಥಳದಲ್ಲಿ ಈ ಅಮೃತಮಹೋತ್ಸವದ ಸ್ಮರಣೆಯ ಶಿಲಾಫಲಕ ಸ್ಥಾಪಿಸುವುದಾಗಿ ತಿಳಿಸಿದರು. ಈ ವರೆಗೆ ಸಭೆ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಣೆ, ಚರ್ಚೆಗಳಾಗಿವೆ. ಆದರೆ ಈ ಮಹತ್ವದ ಶಿಲಾಫಲಕ ಸಿದ್ಧಾಪುರದ ಯಾವ ಪ್ರದೇಶದಲ್ಲಿ ಸ್ಥಾಪನೆಯಾದರೆ ಒಳ್ಳೆಯದು ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ದಾಖಲಿಸಲು ಸಾಧ್ಯವೆ? ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರೀಯಿಸುವ ಮೂಲಕ ಈ ಜನಾಭಿಪ್ರಾಯವನ್ನೂ ಬೆಂಬಲಿಸಬಹುದು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *