local news -೨೫ ರಂದು ರಾಷ್ಟ್ರೀಯ ಲೋಕ ಅದಾಲತ್

ಜಿ ಟಿ ವಿತ್ truth… 89

ಅಕ್ಷರ ಹಣತೆ ಬೆಳಗಲು ಜತೆಯಾಗಿ….

ಸಿಗಂದೂರು ಲಾಂಚ್ ನಿಲ್ದಾಣದಲ್ಲಿ ಟಿ ಮಂಡಕ್ಕಿ ಮಾರುವ ಪುಟ್ಟ ಟೀ ಸ್ಟಾಲ್ ನಲ್ಲಿ ಭಾನುವಾರ ಮತ್ತು ಇತರೆ ಕಾಲೇಜು ರಜೆ ದಿನಗಳಲ್ಲಿ ಅಪ್ಪನ ಜತೆ ಮಂಡಕ್ಕಿ ಮಾರಲು ಸಹಾಯ ಮಾಡುತ್ತಾ, ರಾತ್ರಿ ಅಮ್ಮನ ಜತೆಗೆ ಅಡಿಕೆ ಸೊಲಿಯುತ್ತ ಕೂಲಿ ಕಾರ್ಮಿಕ ಬಡವರ ನಮ್ಮೂರಿನ ಚಕ್ಕೋಡು ರಘುಪತಿ ಮಗಳು ದಿವ್ಯಶ್ರೀ ದ್ವಿತೀಯ ಪಿಯುಸಿ ಯಲ್ಲಿ 94% ಅಂಕವನ್ನ ವಾಣಿಜ್ಯ ವಿಭಾಗದಲ್ಲಿ ಗಳಿಸಿದ್ದಾಳೆ. ತುಮರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಟಾಪರ್ ಆಗಿದ್ದಾಳೆ.

ಇವಳ ಅಕ್ಕ ಕಾವ್ಯಶ್ರೀ ಕೂಡಾ 2 ವರ್ಷ ಹಿಂದೆ 95% ದ್ವಿತೀಯ ಪಿಯುಸಿಯಲ್ಲಿ ಅಂಕ ಗಳಿಸಿ ತೇರ್ಗಡೆ ಆಗಿದ್ದಳು. ಈಗ ತಂಗಿಯ ಸರದಿ.

ತನ್ನ ಮಂಡಕ್ಕಿ ಟೀ ಅಂಗಡಿಯಲ್ಲಿ ಬರುವ ಆದಾಯದಲ್ಲಿ ಮಕ್ಕಳ ವಿದ್ಯಭ್ಯಾಸಕ್ಕಾಗಿ ಹಣ ಎಲ್ಲಿಂದ ತರಲಿ ಎಂಬುದು ರಘುಪತಿ ಅಂತರಾಳ. ಈ ಹಿಂದೆ ಕಾವ್ಯಶ್ರೀ ಗೆ ನೀವೆಲ್ಲ ಜಿ ಟಿ ವಿತ್ truth.. ನ ನನ್ನ ಕೋರಿಕೆಗೆ ನೀವೆಲ್ಲ ಸಹಕಾರ ನೀಡಿದ್ದೀರಿ. ಈಗ ಕಾವ್ಯಶ್ರೀ ಕುಂದಾಪುರದಲ್ಲಿ ವಾಣಿಜ್ಯ ದ್ವಿತೀಯ ಪದವಿ ಓದುತಾ ಇದ್ದಾಳೆ 95%ಸರಾಸರಿ ಕಾಯ್ದುಕೊಂಡಿದ್ದಾಳೆ.

ದಿವ್ಯಶ್ರೀ ಪದವಿ ಓದಲಿ….
ನಿಮ್ಮ ಸಹಕಾರ ಸಿಕ್ಕರೆ ಈ ಹಾದಿ ಸುಗಮ

ಪ್ಲೀಸ್ ಜತೆಯಾಗಿ…..

ತುಮರಿ ಕೆನರಾ ಬ್ಯಾಂಕ್ ಆಕೆಯ ವಯಕ್ತಿಕ ಖಾತೆ ಹೀಗಿದೆ….

Divyashree

19132200062857

CNRB0011913

ಪೋನ್ ಪೇ ಅವರ ಬಳಿ ಇಲ್ಲದೆ ಇರುವ ಕಾರಣ.

ಜಿ ಟಿ ವಿತ್ truth.. ನನ್ನ ಪೋನ್ ಪೇ, ಗೂಗಲ್ ಪೇ ಸಂಖ್ಯೆ 9482283612 ಬಳಸಬಹುದು.

ಬನ್ನಿ ಅಕ್ಷರ ಹಣತೆ ಬೆಳಗುವ…..

ಜಿ. ಟಿ ತುಮರಿ
9448018212‌

ಸಿದ್ದಾಪುರ ಜೂನ್ 25ರಂದು ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕಅದಾಲತ್‌ ಹಮ್ಮಿಕೊಂಡಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ಸಿರ್ಸಿ ಸಿವಿಲ್ ನ್ಯಾಯಾಧೀಶ ಕಮಲಾಕ್ಷ .ಡಿ. ತಿಳಿಸಿದರು.
ಲೋಕದ ಅದಾಲತ್ ನಲ್ಲಿ ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕಾರಗಳು, ಆದಿನ ಭೂ ಸ್ವಾಧೀನ ಪ್ರಕರಣಗಳು, ರಾಜಿಯಾಗುವಂತಹ ಅಂತ ಎಲ್ಲಾ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ,ವ್ಯಾಜ್ಯ ಪೂರ್ವ ಪ್ರಕರಣಗಳು, ಬ್ಯಾಂಕ್ ಮತ್ತು ಹಣಕಾಸು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ವೇದಿಕೆಯನ್ನು ಕಲ್ಪಿಸಿಕೊಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಸಿದ್ದಾಪುರ ನ್ಯಾಯಾಲಯದ ಸಂಪರ್ಕದಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿ ಭೇಟಿ ನೀಡಬಹುದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ನ್ಯಾಯಾಧೀಶರು ವಿನಂತಿಸಿಕೊಂಡಿದ್ದಾರೆ.
ಸಿದ್ದಾಪುರ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ತಿಮ್ಮಯ್ಯ. ಜಿ ಮಾತನಾಡಿ ಕೆಳವರ್ಗದವರು ಮತ್ತು ಕಾರ್ಮಿಕರಿಗೆ ಅನುಕೂಲ ಆಗುವ ದೃಷ್ಟಿಯಿಂದ ಈ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.
ಬಹಳ ವರ್ಷಗಳಿಂದ ಇತ್ಯರ್ಥವಾಗದೆ ಇರುವ ಪ್ರಕರಣಗಳನ್ನು ಈ ಲೋಕದಲ್ಲಿ ಪರಿಹರಿಸಿಕೊಳ್ಳು ಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಬಂದು ಲಾಭ ಪಡೆಯಲು ವಿನಂತಿಸಿಕೊಂಡಿದ್ದಾರೆ.



_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *