ಮುಂಗಾರು ಮಳೆ.. ರೈತರಿಗೆ ಶಾಪವಾದ ಕತೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮಳೆ ಆರ್ಭಟ ಪ್ರಾರಂಭವಾಗಿದ್ದು ಬಹುನಿರೀಕ್ಷೆಯ ಮಲೆಗಾಲ ಸಾರ್ವಜನಿಕರಲ್ಲಿ ಮಿಶ್ರ ಅಭಿಪ್ರಾಯ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ನೂರು ಸೆಂ.ಟಿ.  ಮೀಟರ್ಗಳ ವರೆಗೆ ಮಳೆಯಾದ ಉದಾಹರಣೆಗಳಿವೆ. ಕಳೆದ ವರ್ಷದ ಒಂದೆರಡು ದಿವಸಗಳ ಮಳೆಯ ಆರ್ಭಟ ಜಿಲ್ಲೆಯ ಜನರನ್ನು ಕಂಗಾಲುಗೊಳಿಸಿತ್ತು.
ಈ ವರ್ಷ ಮುಂಗಾರಿನ ಪೂರ್ವ ಬಂದಿದ್ದ ಮಳೆ ಒಂದೆರಡು ದಿವಸಗಳಲ್ಲೇ ಪ್ರವಾಹದ ಭೀತಿ ಹೆಚ್ಚಿಸಿತ್ತು. ಈಗ ಪ್ರಾರಂಭವಾಗಿರುವ ಮಳೆ ಈ ವಾರ ಪೂರ್ತಿ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಘಟ್ಟದ ಕೆಳಗಿನ ತಾಲೂಕುಗಳಲ್ಲಿ ಎರಡು ದಿವಸಗಳ ಮಳೆ ಸಾರ್ವಜನಿಕ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಘಟ್ಟದ ಮೇಲೆ ಮಳೆಯ ಪ್ರಮಾಣ ಅಷ್ಟು ವಿಪರೀತವಲ್ಲದಿದ್ದರೂ ಮಂಗಳವಾರ,ಬುಧವಾರಗಳ ಸಂತೆಗೆ ಮಳೆ ಅಡ್ಡಿಯಾಗಿತ್ತು.ಸಿದ್ಧಾಪುರದಲ್ಲಿ ಬುಧವಾರ ಮುಂಜಾನೆಯಿಂದ ಸುರಿದ ಮಳೆಯಿಂದಾಗಿ ವಾರದ ಸಂತೆ ಪ್ರಾರಂಭವಾಗುವುದೇ ವಿಳಂಬವಾಯಿತು. ಮಳೆಯ ರಭಸ ನೋಡಿ ಸಂತೆ ಪ್ರಾರಂಭಿಸಬೇಕಿದ್ದ ವ್ಯಾಪಾರಸ್ಥರು ತಮ್ಮ ಮೂಟೆಗಳೊಂದಿಗೆ ಎರಡ್ಮೂರು ಗಂಟೆ ಕಾಯುವಂತಾಯಿತು. ಜೂನ್‌ ತಿಂಗಳಲ್ಲಿ ಮೊದಲೆಂಬಂತೆ ಪ್ರಾರಂಭವಾದ ಈ ವಾರದ ಮಳೆ ಆರಿದ್ರಮಳೆ ಹಬ್ಬಕ್ಕೂ ಅಡಚಣೆ ಉಂಟುಮಾಡಿದೆ. ವಿಳಂಬವಾಗಿ ಪ್ರಾರಂಭವಾಗಿ ರಭಸದಿಂದ ಬೀಳುತ್ತಿರುವ ಮಳೆಯಿಂದ ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗಿದೆ.

https://l.facebook.com/l.php?u=https%253A%252F%252Fsamajamukhi.net%252F2022%252F06%252F21%252Fabout-harsha-kugve%252F%253Ffbclid%253DIwA


ಜಿಲ್ಲಾ ಕೇಂದ್ರ ಕಾರವಾರ ಸೇರಿದಂತೆ ಕರಾವಳಿಭಾಗದಲ್ಲಿ ಕಳೆದ ಎರಡುದಿವಸಗಳ ಮಳೆ ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಮಳೆಯ ರಭಸ, ಪ್ರವಾಹದ ಭೀತಿಯಿಂದಾಗಿ ಸರ್ಕಾರಿ ಕಾರ್ಯಕ್ರಮಗಳೊಂದಿಗೆ ಇತರ ಚಟುವಟಿಕೆಗಳಿಗೂ ಹಿನ್ನಡೆಯಾಗುವ ಸಾಧ್ಯತೆ ಇದೆ. ಕಾರವಾರದಲ್ಲಿ ಶಾಸಕಿ ರೂಪಾಲಿ ನಾಯ್ಕ ಮಳೆಯಿಂದ ತೊಂದರೆಗೆ ಒಳಗಾದವರ ಅಹವಾಲು ಕೇಳಿದ್ದಾರೆ. ಜಿಲ್ಲಾಧಿಕಾರಿಗಳು ಪ್ರವಾಹಪೀಡಿತರ ನೆರವಿಗೆ ವಿಶೇಶ ಪಡೆಯೊಂದನ್ನು ಸಿದ್ಧಪಡಿಸಿದ್ದಾರೆ. ಜಿಲ್ಲಾ ಉಸ್ತವಾರಿ ಸಚಿವ ಶ್ರೀನಿವಾಸ ಪೂಜಾರಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ,ಮಳೆ ಅನಾನುಕೂಲತೆ ಬಗ್ಗೆ ಜಿಲ್ಲಾಡಳಿತದಿಂದ ಮಾಹಿತಿ ತರಿಸಿಕೊಳ್ಳುತಿದ್ದು ಜಿಲ್ಲಾಡಳಿತ ಮಳೆ, ಪ್ರವಾಹದ ತೊಂದರೆಗಳಿಗೆ ಶೀಘ್ರ ಸ್ಪಂದಿಸಲು ಆದೇಶ ಮಾಡಿದ್ದಾರೆ.


ರೈತರಿಗೆ ತೊಂದರೆ- ಮಳೆಗಾಲ ಪ್ರಾರಂಭದಲ್ಲಿ ರೈತರಿಗೆ ನೀಡುವ ಬೆಳೆಸಾಲದ ವಿಚಾರದಲ್ಲಿ ಹೊಸ ನಿಯಮಗಳಿಂದ ರೈತರಿಗೆ ತೊಂದರೆಯಾಗಿದೆ. ಪಹಣಿಪತ್ರಿಕೆಯಲ್ಲಿ ಸಾಮೂಹಿಕ ಹಕ್ಕುದಾರರು ಪ್ರತ್ಯೇಕವಾಗಿ ದಾಖಲಾತಿ ನೀಡುವ ಆದೇಶಕ್ಕೆ ರೈತರ ವಿರೋಧ ವ್ಯಕ್ತವಾಗಿದೆ. ತೋಟಗಾರಿಕೆ ಇಲಾಖೆಯ ಫ್ರೂಟ್‌  ನೋಂದಣಿ, ಪ್ರತ್ಯೇಕವಾಗಿ ಪಹಣಿಪತ್ರದ ಹಕ್ಕು ಮಾನ್ಯತೆ ಧೃಢೀಕರಣ ಪತ್ರ ನೀಡುವ ವಿಷಯ ರೈತರಿಗೆ ಬಿಸಿತುಪ್ಪವಾಗಿದೆ. ಕರ್ನಾಟಕ ಸರ್ಕಾರದ ಹಕ್ಕುಪತ್ರದ ಪಹಣಿಪತ್ರಿಕೆ ದಾಖಲಾತಿ ಬದಲಾವಣೆ, ಸಾಮೂಹಿಕ ಹಕ್ಕುದಾರರ ಪ್ರತ್ಯೇಕ ಪ್ರಮಾಣ ಪತ್ರ ನೀಡಿಕೆ ವಿಚಾರವಾಗಿ ಜಿಲ್ಲಾಡಳಿತ ಸ್ಫಷ್ಟನೆ ನೀಡಿಲ್ಲ. ಆದರೆ ಬೆಳೆಸಾಲ ಪಡೆಯಲು ಹೋಗುತ್ತಿರುವ ರೈತರು ಈ ಹೊಸ ನಿಯಮದ ಬಗ್ಗೆ ಕೇಳಿ ಮನನೊಂದು ಬರುವಂತಾಗಿರುವುದು ರೈತರ ಕೋಪಕ್ಕೆ ಕಾರಣವಾಗಿದೆ. ಮುಂಗಾರಿನ ಬಿತ್ತನೆ ಮೊದಲು ಬೆಳೆಸಾಲ ದೊರೆಯದಿರುವುದು ಮುಂಗಾರಿನ ಮಳೆ ಕಣ್ಣುಮುಚ್ಚಾಲೆ ಆಟ ಆಡುತ್ತಿರುವುದು. ಈ ವಿದ್ಯಮಾನಗಳಿಗೆ ಸರ್ಕಾರ ಸ್ಫಂದಿಸದಿರುವುದು ರೈತ ರ ದುಗುಡ ಹೆಚ್ಚಿಸಿದೆ. ಈ ವರ್ಷದ ಬಿತ್ತನೆ ಮೊದಲು ಅನಿರೀಕ್ಷಿತ ಬೆಳವಣಿಗೆಗಳಾಗಿರುವುದು ರೈತ ಸಮೂಹದ ಅಸಮಾಧಾನಕ್ಕೆ ಕಾರಣವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *