ಪೊಲೀಸ್‌ ಹವಾಲ್ಧಾರ ಜನಸ್ನೇಹಿ ಪೊಲೀಸಿಂಗ್‌ ಗೆ ಕಂಡುಕೊಂಡ ದಾನದ ಮಾರ್ಗಕ್ಕೆ ಜನಮೆಚ್ಚುಗೆ


ಮನಸ್ಸಿದ್ದರೆ ಕರ್ತವ್ಯದೊಂದಿಗೆ ಜನಸೇವೆ ಮಾಡುತ್ತಾ ಜನಸ್ನೇಹಿ ಪೊಲೀಸ್‌ ಆಗಬಹುದೆನ್ನುವುದನ್ನು ಸಾಬೀತು ಮಾಡಿದ ಹವಾಲ್ಧಾರ್ ರಾಘವೇಂದ್ರ ನಾಯ್ಕ

ಜನಸ್ನೇಹಿ  ಬೀಟ್‌, ಜನಸ್ನೇಹಿ ಪೊಲೀಸ್‌ ಎನ್ನುವುದೊಂದು ಗುರಿ ಮತ್ತು ಧ್ಯೇಯ. ಪೊಲೀಸ್‌ ಇಲಾಖೆ ಇಂಥ ಘೋಷಣೆಗಳು ಮತ್ತು ಕಾರ್ಯಕ್ರಮಗಳ ಮೂಲಕ ಸಾರ್ವಜನಿಕ ಸಂಪರ್ಕವನ್ನು ಸಾಧಿಸುವ ಗುರಿ ಹೊಂದಿದೆ. ಆದರೆ ಪೊಲೀಸ್‌ ಎಂದರೆ ಈಗಲೂ ಜನಮಾನಸದಲ್ಲಿ ಭಯ ಉಳಿದುಕೊಂಡಿದೆ. ಪೊಲೀಸ್‌ ಎಂದರೆ ಭಯ ಅಲ್ಲ ಭರವಸೆ ಎನ್ನುವ ಕಲ್ಪನೆಯನ್ನು ಸಾಕಾರಮಾಡಲು ಪೊಲೀಸರು ಶ್ರಮಿಸುತಿದ್ದಾರೆ.


ಇಲ್ಲೊಂದು ಜನಪರ ಪೊಲೀಸಿಂಗ್‌ ನ ಉದಾಹರಣೆ ‌ನಮ್ಮ ಮುಂದೇ ಇದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ಹವಾಲ್ಧಾರ್‌ ಆಗಿ ಕೆಲಸ ಮಾಡುತ್ತಿರುವ ರಾಘವೇಂದ್ರ ನಾಯ್ಕ ಪ್ರತಿವರ್ಷ ತಮ್ಮ ಬೀಟ್‌ ನಲ್ಲಿ ಒಂದೆರಡು ಕಾರ್ಯಕ್ರಮ ಮಾಡಿ ಅಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುತಿದ್ದಾರೆ. ರಾಘವೇಂದ್ರ ನಾಯ್ಕ ತಮ್ಮ ಬೀಟ್‌ ನ ಒಂದೆರಡು ಶಾಲೆಗಳಿಗೆ ಪ್ರತಿವರ್ಷ ನೋಟ್ ಪುಸ್ತಕ, ಲೇಖನಿ ವಿತರಿಸುತ್ತಾರೆ. ಮೊದಮೊದಲು ತಾವೊಬ್ಬರೇ ಮಾಡುತಿದ್ದ ಈ ಪೊಲೀಸ್‌ ಜನಸ್ನೇಹಿ ಕೆಲಸಕ್ಕೆ ಈಗ ಅವರ ಸಮಾನ ಮನಸ್ಕ ಗೆಳೆಯರ ಸಹಕಾರ ಸಿಗುತ್ತಿದೆ.

ಮಕ್ಕಳಿಗೆ ಪೊಲೀಸರ ಕೆಲಸದ ಅರಿವು ಮೂಡಬೇಕು.ಶಾಲೆಯಲ್ಲಿ ಜನಸ್ನೇಹಿ ಪೊಲೀಸ್‌ ಕಾರ್ಯಕ್ರಮ ಮಾಡುವ ಮೂಲಕ ಮಕ್ಕಳೊಂದಿಗೆ ಪಾಲಕರು ಸೇರಬೇಕು.  ಮಕ್ಕಳ ಮೂಲಕ ಹಿರಿಯರು ಸಾರ್ವಜನಿಕರ ಸಂಪರ್ಕ ಹಿತಕಾರಿಯಾಗಿರಬೇಕು ಇದರಿಂದ ಪೊಲೀಸ್‌ ಕೆಲಸವೂ ಸರಳವಾಗುತ್ತದೆ. ಪೊಲೀಸರು ಮತ್ತು ಸಾರ್ವಜನಿಕರ ಸಂಪರ್ಕ ಸುಗಮವಾಗುತ್ತದೆ ಎನ್ನುವ ರಾಘವೇಂದ್ರ ನಾಯ್ಕ ತಮ್ಮ ಪೊಲೀಸ್‌ ಕೆಲಸದ ಜೊತೆಗೆ ಅಸಹಾಯಕ ಮಕ್ಕಳಿಗೆ ನೆರವೂ ನೀಡುತಿದ್ದಾರೆ.


ವಿದ್ಯಾರ್ಥಿಗಳಿಗೆ ಎಲ್ಲರಿಗೂ ಸಮನಾದ ಅನುಕೂಲ ಸೌಲಭ್ಯಗಳಿರುವುದಿಲ್ಲ ಆ ಕೊರತೆ ನೀಗಿಸುವ ಹಿನ್ನೆಲೆಯಲ್ಲಿ ತಮ್ಮ ಪುಟ್ಟ ಪ್ರಯತ್ನ ಎನ್ನುವ ಈ ಪೊಲೀಸ್‌ ತಮ್ಮ ಶಾಲಾದಿನಗಳಲ್ಲಿತಾವು ನೋಡಿದ ಅನುಭವಿಸಿದ ಕಷ್ಟಗಳ ಹಿನ್ನೆಲೆಯಲ್ಲಿ ಮಕ್ಕಳಿಗೆ ನೋಟ್‌ ಬುಕ್‌ ಪೆನ್ನು ವಿತರಿಸುವ ಮೂಲಕ ಈ ಕೆಲಸ ಇತರರಿಗೂ ಪ್ರೇರಣೆಯಾದರೆ ಯಾವ ವಿದ್ಯಾರ್ಥಿಗೂ ತನ್ನ ಕೊರತೆ, ಅಸಹಾಯಕತೆ ಎನಿಸುವುದಿಲ್ಲ ಎನ್ನುತ್ತಾರೆ ರಾಘವೇಂದ್ರ ನಾಯ್ಕ.

ಸಿದ್ದಾಪುರ ಪೊಲೀಸ್‌ ಠಾಣೆಯ ವ್ಯಾಪ್ತಿಯ ತಮ್ಮ ಕೆಲವು ಬೀಟ್‌ ಗಳಲ್ಲಿ ಹಲವು ಶಾಲೆಗಳ ವಿದ್ಯಾರ್ಥಿಗಳಿಗೆ ಪಟ್ಟಿ ಪೆನ್‌ ವಿತರಿಸಿ ಶಾಲೆಗಳಲ್ಲೇ ಜನಸ್ನೇಹಿ ಪೊಲೀಸ್‌ ಬೀಟ್‌ ಕಾರ್ಯಕ್ರಮ ಮಾಡಿದ್ದಾರೆ. ಪೊಲೀಸ್‌ ಹುದ್ದೆಯಿಂದ ಹವಾಲ್ಧಾರರಾಗಿ ಪದೋನ್ನತಿ ಹೊಂದಿರುವ  ರಾ ಘವೇಂದ್ರ ನಾಯ್ಕರ ಈ ಜನಸ್ನೇಹಿ ಪೊಲೀಸಿಂಗ್‌ ಗೆ ಅಪಾರ ಜನಬೆಂಬಲವೂ ವ್ಯಕ್ತವಾಗಿದೆ. ಪೊಲೀಸ್‌ ಪೇದೆಯೊಬ್ಬರ ಈ ಸಮಾಜಮುಖಿ ಮನಸ್ಥಿತಿ, ಜನಪರ ಕಾಳಜಿಗೆ ಅವರ ಹಿರಿಯ ಅಧಿಕಾರಿಗಳ ಬೆಂಬಲವೂ ದೊರೆಯುತಿದ್ದು ಇಲಾಖೆ ಈ ಪೊಲೀಸ್‌ ಬಗ್ಗೆ ಅಭಿಮಾನವನ್ನೂ ವ್ಯಕ್ತಮಾಡುತ್ತಿದೆ.
ರಾಘವೇಂದ್ರ ನಾಯ್ಕರ ಈ ಜನಸ್ನೇಹಿ ಕೆಲಸ ಇತರ ಪೊಲೀಸ್‌ ರಿಗೂ ಮಾದರಿಯಾಗಿದ್ದು ಸಮಾಜಮುಖಿ ಯಾದ ಯಾವುದೇ ಕೆಲಸಕ್ಕೆ ಜನಬೆಂಬಲ ದೊರೆಯುತ್ತದೆನ್ನುವ ದೃಷ್ಟಾಂತಕ್ಕೆ ಈ ಪೊಲೀಸರ ಜನಸ್ನೇಹಿ ಬೀಟ್‌ ಕಾರ್ಯಕ್ರಮ ಉತ್ತಮ ಉದಾಹರಣೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *