ಯಕ್ಷ ನೃತ್ಯದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಶಿರಸಿಯ ಬಾಲಕಿ

etv comment image
Thumbnail image

ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್‌ ಸೇರಿದೆ.

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ ಹೆಗಡೆ ಎಂಬ ಬಾಲಕಿ ಕಳೆದ ಏಳು ವರ್ಷದಿಂದ ನಿರಂತರವಾಗಿ ವಿಶ್ವಶಾಂತಿ ಸಂದೇಶ ಸಾರುವ ಯಕ್ಷ ನೃತ್ಯ ಮಾಡುತ್ತಿದ್ದರು. ಈ ನೃತ್ಯದ ಮೂಲಕ ಇದೀಗ ಇವರು ಪ್ರತಿಷ್ಟಿತ ಇಂಡಿಯನ್ ಬುಕ್ ಆಫ್ ರೆಕಾರ್ಡ್​ ದಾಖಲೆ ಮಾಡಿದ್ದಾರೆ. ಈ ಮೂಲಕ ದೇಶದ ಅತೀ ಕಿರಿಯ ವಯಸ್ಸಿ‌ನ ವಿಶ್ವಶಾಂತಿ ಸಂದೇಶ ಸಾರುವ ಏಕೈಕ ಬಾಲಕಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದಾರೆ.

ಮಾರಿಕಾಂಬ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಈಕೆಯ ಸಾಧನೆಗೆ ಇಂಟರ್​​ನ್ಯಾಶನಲ್ ಬುಕ್ ಆಫ್ ರೆಕಾರ್ಡ್​ ಲಭಿಸಿದೆ. ಪೂನಾದ ಸಂಸ್ಥೆಯೊಂದು ನೀಡುವ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್​ ಕೂಡ ಲಭಿಸಿದ್ದು, ಹಲವು ಪ್ರಶಸ್ತಿಗಳಿಗೆ ಬಾಲಕಿ ಬಾಜನಳಾಗಿದ್ದಾಳೆ. ತುಳಸಿ ಹೆಗಡೆಯು ಒಂದು ಗಂಟೆಗೂ ಅಧಿಕ ಕಾಲದ ಯಕ್ಷನೃತ್ಯ ರೂಪಕವನ್ನು ಪ್ರಸ್ತುತಗೊಳಿಸುತ್ತಿದ್ದಾಳೆ.

ಶಿರಸಿಯ ಬಾಲೆ ತುಳಸಿಯ ಅದ್ಭುತ ಸಾಧನೆ

13 ವರ್ಷದ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಗೊಳಿಸುತ್ತಿದ್ದು, ಯಕ್ಷಗಾನದ ಬಡಗುತಿಟ್ಟು ಪ್ರಕಾರದಲ್ಲಿ ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದೆ. ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣಿತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರದರ್ಶಿಸುತ್ತಾಳೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *