



ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್ ಸೇರಿದೆ.

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ ಹೆಗಡೆ ಎಂಬ ಬಾಲಕಿ ಕಳೆದ ಏಳು ವರ್ಷದಿಂದ ನಿರಂತರವಾಗಿ ವಿಶ್ವಶಾಂತಿ ಸಂದೇಶ ಸಾರುವ ಯಕ್ಷ ನೃತ್ಯ ಮಾಡುತ್ತಿದ್ದರು. ಈ ನೃತ್ಯದ ಮೂಲಕ ಇದೀಗ ಇವರು ಪ್ರತಿಷ್ಟಿತ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. ಈ ಮೂಲಕ ದೇಶದ ಅತೀ ಕಿರಿಯ ವಯಸ್ಸಿನ ವಿಶ್ವಶಾಂತಿ ಸಂದೇಶ ಸಾರುವ ಏಕೈಕ ಬಾಲಕಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದಾರೆ.
ಮಾರಿಕಾಂಬ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಈಕೆಯ ಸಾಧನೆಗೆ ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ ಲಭಿಸಿದೆ. ಪೂನಾದ ಸಂಸ್ಥೆಯೊಂದು ನೀಡುವ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್ ಕೂಡ ಲಭಿಸಿದ್ದು, ಹಲವು ಪ್ರಶಸ್ತಿಗಳಿಗೆ ಬಾಲಕಿ ಬಾಜನಳಾಗಿದ್ದಾಳೆ. ತುಳಸಿ ಹೆಗಡೆಯು ಒಂದು ಗಂಟೆಗೂ ಅಧಿಕ ಕಾಲದ ಯಕ್ಷನೃತ್ಯ ರೂಪಕವನ್ನು ಪ್ರಸ್ತುತಗೊಳಿಸುತ್ತಿದ್ದಾಳೆ.




13 ವರ್ಷದ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಗೊಳಿಸುತ್ತಿದ್ದು, ಯಕ್ಷಗಾನದ ಬಡಗುತಿಟ್ಟು ಪ್ರಕಾರದಲ್ಲಿ ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದೆ. ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣಿತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರದರ್ಶಿಸುತ್ತಾಳೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






