local news…. ವಿಶೇಷ ಅನುದಾನದಲ್ಲಿ ಶಾಸಕರ ತಾರತಮ್ಯ ಸ್ವಪಕ್ಷೀಯ ಸದಸ್ಯರಿಂದ ಬಹಿರಂಗ ಅಸಮಧಾನ


ಸಿದ್ದಾಪುರ: ಸಿದ್ದಾಪುರ ಪಟ್ಟಣ ಪಂಚಾಯತ ವಿಶೇಷ ಅನುದಾನದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೇವಲ ಮೂರು ಸದಸ್ಯರ ವಾರ್ಡಿಗೆ ಮಾತ್ರ ಅನುದಾನ ನೀಡಿ ಉಳಿದವರನ್ನು ಕಡೆಗಣಿಸಿದ್ದಾರೆ. ಹಾಗಾದರೆ ನಾವೇನು ಬಿಜೆಪಿ ಸದಸ್ಯರಲ್ಲವಾ ಎಂದು ಸ್ವಪಕ್ಷೀಯ ಸದಸ್ಯರು ಬಹಿರಂಗವಾಗಿ ಪ್ರಶ್ನಿಸಿದ ಘಟನೆ ಪಟ್ಟಣ ಪಂಚಾಯತ ಸಭೆಯಲ್ಲಿ ನಡೆದಿದೆ.
ಪಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟಣ ಪಂಚಾಯತನ ಬಿಜೆಪಿ ಬಹುತೇಕ ಸದಸ್ಯರು ಶಾಸಕರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಪಪಂನ ೧೫ ಸದಸ್ಯರಲ್ಲಿ ೧೪ ಜನ ಬಿಜೆಪಿಯಿಂದ ಆಯ್ಕೆಯಾದವರಿದ್ದೇವೆ. ೩ ಕೋಟಿ ವಿಶೇಷ ಅನುದಾನದಲ್ಲಿ ಮೂರು ಜನ ಸದಸ್ಯರ ವಾರ್ಡಿಗೆ ಮಾತ್ರ ೫೦-೯೦ ಲಕ್ಷ ಅನುದಾನ ನೀಡಿ ಉಳಿದವರಿಗೆ ಬಿಡಿಗಾಸು ನೀಡದೇ ಬೇಧಭಾವ ಮಾಡಿದ್ದಾರೆ. ಹಾಗಾದರೆ ನಾವು ಬಿಜೆಪಿ ಪರವಾಗಿ ಕೆಲಸ ಮಾಡಲಿಲ್ಲವಾ? ಶಾಸಕರೇನು ಬೇರೆ ಪಕ್ಷದವರಾ? ಮುಂದಿನ ಅನುದಾನದಲ್ಲಿ ಬಹುಮತದ ಆಧಾರದ ಮೇಲೆ ಅನುದಾನ ಹಂಚಿಕೆಯಾಗಲಿ ಎಂದು ವಾಗ್ವಾದ ನಡೆಸಿದರು.

೩ ಕೋಟಿ ಎಸ್.ಎಫ್.ಸಿ ವಿಶೇಷ ಅನುದಾನದಲ್ಲಿ ಸದಸ್ಯರಾದ ಮಾರುತಿ ನಾಯ್ಕ, ಗುರುರಾಜ ಶಾನಭಾಗ ಹಾಗೂ ನಂದನ ಬೋರಕರ್ ರ ವಾರ್ಡಿಗೆ ಮಾತ್ರ ಅನುದಾನ ನೀಡಿದ್ದರು, ಈಗಿರುವ ಅನುದಾನದಲ್ಲಿ ಬಹುಮತದ ಮೇರೆಗೆ ಅನುದಾನ ಹಂಚಬೇಕು ಎಂದು ಒತ್ತಾಯಿಸಿದರು.
ಪಟ್ಟಣ ಪಂಚಾಯತನಲ್ಲಿ ೧೪-೧೫ ಹುದ್ದೆಗಳ ಕೊರತೆಯಿದ್ದು, ಉತ್ತಮವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಯನ್ನು ಬಾಗಲಕೋಟೆಗೆ ವರ್ಗಾವಣೆಗೊಳಿಸಿದ್ದಾರೆ. ಒಳ್ಳೆ ಕೆಲಸ ಮಾಡುವ ನೌಕರರನ್ನು ಇಲ್ಲಿಗೆ ತರುವ ಬದಲು ಇಲ್ಲಿರುವವರನ್ನೆ ಬೇರೆ ಕಡೆ ವರ್ಗ ಮಾಡಿಸುತ್ತಿದ್ದಾರೆ. ಒಟ್ಟಿನಲ್ಲಿ ಸಿದ್ದಾಪುರ ಪಟ್ಟಣ ಪಂಚಾಯತಗೆ ಕೆಟ್ಟ ಹೆಸರು ತರುವ ಕೆಲಸ ಕಾಣದ ಕೈಗಳಿಂದ ನಡೆಯುತ್ತಿದೆ ಎಂದು ಪಪಂ ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಅಸಮಧಾನ ವ್ಯಕ್ತಪಡಿಸಿದರು.


ಜುಲೈ ೧ ರಿಂದ ಪಟ್ಟಣದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ಬ್ಯಾನ್ ಮಾಡಲು ಚಿಂತನೆ ನಡೆಸಿದ್ದು, ಪ್ರಕಟಣೆ ಹಾಗೂ ಕರಪತ್ರದ ಮೂಲಕ ವ್ಯಾಪಕ ಪ್ರಚಾರ ನಡೆಸಲಾಗುವುದು ಎಂದು ಮುಖ್ಯಾಧಿಕಾರಿ ಕುಮಾರ ನಾಯ್ಕ ತಿಳಿಸಿದರು.
ಸಭೆಯಲ್ಲಿ ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೆಗುಂಡಿ ಉಪಸ್ಥಿತರಿದ್ದರು.

ಸಿದ್ದಾಪುರ: ಯುವಕರ ವೈಯಕ್ತಿಕ ಜೀವನ ಉತ್ತಮವಾಗಿ ರೂಪಿಸಿಕೊಂಡರೆ ಅದು ರಾಷ್ಟ್ರದ ಅಭಿವೃದ್ಧಿಗೆ ಸಹಾಯಕವಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೇಳಿದರು.
ಅವರು ತಾಲೂಕಿನ ಅವರಗುಪ್ಪದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟಿಸಿ ಮಾತನಾಡಿದರು.



ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು. ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಜವಾಬ್ದಾರಿ. ತಮ್ಮ ಜವಾಬ್ದಾರಿಯನ್ನು ಶಿಕ್ಷಕರು ಸರಿಯಾಗಿ ನಿಭಾಯಿಸಬೇಕು. ಅದರಂತೆ ಮಕ್ಕಳು ತಮ್ಮ ಜವಾಬ್ದಾರಿಯನ್ನು ಅರಿತು ಕೊಳ್ಳಬೇಕು. ಎಲ್ಲಾ ಉದ್ಯೋಗಗಳಲ್ಲಿ ಹಾಗೂ ಜೀವನ ನಿರ್ವಹಣೆ ಗೆ ಇಂಗ್ಲಿಷ್ ಅವಶ್ಯಕತೆ ಇದೆ. ಇಲ್ಲಿ ಪ್ರಾರಂಭಿಸಿರುವ ಇಂಗ್ಲೀಷ್ ತರಬೇತಿ ನಿಮಗೆ ಮುಂದೆ ಅನುಕೂಲವಾಗಲಿದೆ ಎಂದರು
ಕಾಲೇಜಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇನ್ನು ಕೆಲವು ಅಭಿವೃದ್ಧಿ ಕೆಲಸಗಳಾಗಬೇಕು ಸರಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೊಲ್ ಸಿರ್ಸಿ ಗ್ರಾಮ ಪಂಚಾಯತ ಉಪಾಧ್ಯಕ್ಷ ವಿನಾಯಕ ಕೆ ಆರ್, ಸದಸ್ಯರಾದ ಗೋವಿಂದ ನಾಯ್ಕ ಆನಂದ ಮಡಿವಾಳ ಕುಣಜಿ, ಮಹಾಬಲೇಶ್ವರ ನಾಯ್ಕ, ಗಣಪತಿ ಗೊಂಡ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಚಾರ್ಯ ಎಂ ಎ ಹೆಗಡೆ ಸ್ವಾಗತಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *