ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್‌ ಮಂಕಾಗುತ್ತಿದೆಯೆ? ಭಾಗ-೦೧

ರಾಷ್ಟ್ರದಲ್ಲಿ ಮತೀಯವಾದಿ ಶಕ್ತಿಗಳ ಪ್ರಾಬಲ್ಯ, ಮನೋಪೊಲಿ ಎದುರು ಎದೆಒಡ್ಡಿ ನಿಲ್ಲಬಲ್ಲ ಬೆರಳೆಣಿಕೆಯ ನಾಯಕರನ್ನು ಅಧಿಕಾರದ ಬಲದಿಂದ ಸುಮ್ಮನಿರಿಸಲಾಗಿದೆ,ಕೆಲವರನ್ನು ಹೆದರಿಸಿ ಜೊತೆಗಿರಿಸಿಕೊಳ್ಳಲಾಗಿದೆ. ಕೆಲವರಿಗೆ ಜೈಲಿನೊಳಗೆ ಕೊಳೆಸಲಾಗುತ್ತಿದೆ. ಈ ಅಘೋಶಿತ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಬೆಳೆಸುತ್ತಿರುವ ಅಧಿಕಾರದಾಹಿ ನಕಲಿ ದೇಶಭಕ್ತರು ಎಲ್ಲರನ್ನೂ ಹೆದರಿಸಿ, ಬೆದರಿಸಿ ಬಾಯಿಮುಚ್ಚಿಸುತ್ತಿರುವ ಸಂದರ್ಭದಲ್ಲಿ ಸುಬ್ರಮಣ್ಯ ಸ್ವಾಮಿ ಕೆಲವೊಮ್ಮ ಕರ್ನಾಟಕದ ವಿಶ್ವನಾಥರಂತೆ ಸತ್ಯ ಹೇಳುತಿದ್ದಾರೆ.

ಯಶವಂತಸಿನ್ಹಾ,ಶರದ್‌ ಪವಾರ್‌ ಬಿಟ್ಟರೆ ದೇಶದಲ್ಲಿ ಈಗಲೂ ಎದೆಯುಬ್ಬಿಸಿ ಸತ್ಯ ಹೇಳುತ್ತಿರುವವರು ಇಬ್ಬರೇ ಅವರಲ್ಲಿ ಒಬ್ಬರು ಕಾಂಗ್ರೆಸ್‌ ನ ರಾಹುಲ್ಗಾಂಧಿ ಮತ್ತೊಬ್ಬರು ಬಿ.ಜೆ.ಪಿ.ಯ ವರುಣ್‌ ಗಾಂಧಿ! ಆದರೆ ಮತೀಯವಾದಿ ಅಧಿಕಾರದಾಹಿ ಕುತರ್ಕದ ರಾಷ್ಟ್ರೀಯವಾದಿಗಳು ಸುಬ್ರಮಣ್ಯ ಸ್ವಾಮಿ,ವರುಣ್‌ ಗಾಂಧಿ ಕಿಂತ ರಾಹುಲ್‌ ಬಗ್ಗೆ ತಲೆಕೆಡಿಸಿಕೊಳ್ಳಲು ಕಾರಣ ಅವರ ಧೈರ್ಯ ಮತ್ತು ನಾಯಕತ್ವ ಈ ಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಸಿದ್ಧರಾಮಯ್ಯ ಬಿಟ್ಟರೆ ಮತ್ತ್ಯಾರೂ ಮತಾಂಧ ಸುಳ್ಳುಕೋರರನ್ನು ಎದುರುಹಾಕಿಕೊಳ್ಳುತ್ತಿಲ್ಲ ಇದಕ್ಕೆ ಅನೇಕ ಕಾರಣಗಳಿವೆ. ಈ ದುಸ್ಥಿತಿಯಲ್ಲಿ ರಾಜ್ಯಕ್ಕೆ ಸಿಕ್ಕ ಇನ್ನೊಬ್ಬ ನೇರ ನುಡಿಯ ಸಮರ್ಥ ನಾಯಕ ಬಿ.ಕೆ. ಹರಿಪ್ರಸಾದ್.‌ ಈ ಹರಿಪ್ರಸಾದ್‌ ಈಗ ರಾಹುಲ್‌ ಗಾಂಧಿ ಟೀಮಿನ ಪ್ರಮುಖರಲ್ಲೊಬ್ಬರಾಗಿ ಮುಂದಿನ ದಿನಗಳಲ್ಲಿ ರಾಜ್ಯ ಅಥವಾ ಕೇಂದ್ರದಿಂದ ಪ್ರಮುಖ ಸಚಿವರಾಗುವ ಪಟ್ಟಿಯಲ್ಲಿದ್ದಾರೆ. ಹರಿಪ್ರಸಾದ್‌ ಈಗಲೇ ತಾವು ಉತ್ತರ ಕನ್ನಡದಿಂದ ಕಾಂಗ್ರೆಸ್‌ ನ ಲೋಕಸಭೆಯ ಅಭ್ಯರ್ಥಿ ಎಂದು ಹೇಳಿಕೊಂಡಿರುವುದರಿಂದ ಉತ್ತರ ಕನ್ನಡದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್‌ ಬಲವರ್ಧನೆಗೆ ಶ್ರಮಿಸಲು ಹೆಣಗಾಡುತಿದ್ದಾರೆ.

ಹೀಗೆ ಕಾಂಗ್ರೆಸ್‌ ನಲ್ಲಿ ರಾಹುಲ್‌ ಗಾಂಧಿ ಟೀಮ್‌ ಬಂಡವಾಳಶಾಹಿ ಬಲಪಂಥೀಯ ಕಾಲಾಳುಗಳ ವಿರುದ್ಧ ಬಡವರ ಧ್ವನಿಯಾಗುತಿದ್ದರೆ ಕಾಂಗ್ರೆಸ್‌ ನ ಕೆಲವು ಪ್ರಮುಖ ಮೃಧು ಹಿಂದುತ್ವವಾದಿಗಳು ಕಾಂಗ್ರೆಸ್‌ ಗೇ ಕಂಟಕವಾಗಿ ಪರೋಕ್ಷವಾಗಿ ಮತಾಂಧರಿಗೆ ನೆರವಾಗುತ್ತಿರುವ ವಿದ್ಯಮಾನ ಹೊಸತೇನಲ್ಲ. ಕಾಂಗ್ರೆಸ್‌ ನಲ್ಲಿರುವ ಕೆಲವು ಮೇಲ್ವರ್ಗದ ನಾಯಕರಿಗೆ ಇ.ಡಿ.ಆಯ್.ಟಿ.ಗಳಿಂದ ವಿನಾಯಿತಿ ನೀಡಿರುವ ಬ್ರಷ್ಟ ಕೋಮುವಾದಿ ಪರಿವಾರದ ನಾಯಕರು ಕಾಂಗ್ರೆಸ್‌ ವಿರುದ್ಧ ಕಾಂಗ್ರೆಸ್‌ ನಲ್ಲೇ ಕೋಟೆ ಕಟ್ಟುತಿದ್ದಾರೆ. ಇದರ ಪರಿಣಾಮ ದೇಶ ಈಗ ಪ್ರಬಲ ವಿರೋಧ ಪಕ್ಷವನ್ನೂ ಕಳೆದುಕೊಳ್ಳುವ ಅಪಾಯದಲ್ಲಿದೆ. ಈ ಸ್ಥಿತಿಯಲ್ಲಿ ರಾಜ್ಯದಲ್ಲಿ ಕೆಲವು ಕಡೆ ಕಾಂಗ್ರೆಸ್‌ ಪಕ್ಷಕ್ಕೆ ಕಾಂಗ್ರೆಸ್‌ ನಾಯಕರೇ ಮಾರಕವಾಗಿದ್ದಾರೆ ಅವರಲ್ಲಿ ಬಹುತೇಕರು ಹಳೆ ತಲೆಗಳಾಗಿರುವುದು ವಿಶೇಶ.

ಈ ವಿದ್ಯಮಾನಗಳ ಹಿನ್ನೆಲೆಯಲ್ಲಿ ಶಿವಮೊಗ್ಗ, ಮಂಗಳೂರು, ಉಡುಪಿಗಳಲ್ಲೂ ಹಿರಿಯ ಕಾಂಗ್ರೆಸ್‌ ಮುಖಂಡರೇ ಕಾಂಗ್ರೆಸ್‌ ಗೆ ಮಾರಕವಾಗಿದ್ದು ಇದರ ಲಾಭ ಮತೀಯವಾದಿ ಶಕ್ತಿಗಳಿಗಾಗುತ್ತಿದೆ ಎನ್ನುವ ಗುರುತರ ಆರೋಪಗಳಿವೆ ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ ಗೆ ಮಾರಕವಾಗಿರುವ ನಾಯಕರ್ಯಾರು? ಎನ್ನುವ ಪ್ರಶ್ನೆಗೆ ಉತ್ತರ ಮುಂದಿನ ಕಂತಿನಲ್ಲಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *