ಮಾನ್ಯ ಮುಲೈ ಮುಗಿಲನ್‌ ನಿಮ್ಮದು ತಾರತಮ್ಯವೋ? ಅಥವಾ ಆರೆಸ್ಸೆಸ್‌ ಗುಪ್ತ ಅಜೆಂಡಾವೋ? ಜಿಲ್ಲಾಡಳಿತದಿಂದ ಭಟ್ಕಳಕ್ಕೊಂದು ನ್ಯಾಯ ಕಾರವಾರಕ್ಕೊಂದು!

Thumbnail image

ಕೊಂಕಣಿಯಲ್ಲಿ‌ನಾಮಫಲಕ ಹಾಕಲು ಠರಾವು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕಾರವಾರ ನಗರಸಭೆ ನಿರ್ಧಾರ!

ಸ್ಥಳೀಯ ವಾರ್ಡ್​​ಗಳ ನಾಮಫಲಕವನ್ನು ಕೊಂಕಣಿಯಲ್ಲಿ‌ ಹಾಕುವ ಬಗ್ಗೆ ಠರಾವು ಸಿದ್ಧಗೊಂಡಿದೆ. ಸರ್ಕಾರಕ್ಕೆ ಠರಾವು ಪ್ರಸ್ತಾಪ ಕಳುಹಿಸಲಾಗಿದೆ.

ಕಾರವಾರ: ಸ್ಥಳೀಯ ವಾರ್ಡ್​​ಗಳ ನಾಮಫಲಕವನ್ನು ಕೊಂಕಣಿಯಲ್ಲಿ ಬರೆದಿದ್ದಕ್ಕೆ ಕಾರವಾರದಲ್ಲಿ ಭಾಷಾ ವಿವಾದಕ್ಕೆ ಕಾರಣವಾಗಿತ್ತು. ಸರ್ಕಾರವೇ ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆಯನ್ನು ಹೇರುತ್ತಿದೆಯೆಂದು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೆ, ಇತ್ತ ಕೊಂಕಣಿ ಭಾಷಿಗರು ವಾರ್ಡ್​​ಗಳಿಗೆ ಕೊಂಕಣಿ ಬೋರ್ಡ್ ಬೇಕೆಂದು ಪಟ್ಟು ಹಿಡಿದಿದ್ದರು. ಇದೀಗ ಕಾರವಾರ ನಗರಸಭೆ ಸದಸ್ಯರು ಕನ್ನಡದ ಜೊತೆ ಕೊಂಕಣಿ ಭಾಷೆಯಲ್ಲೂ ಬೋರ್ಡ್​ ಹಾಕುವಂತೆ ಠರಾವು ಮಾಡಿದ್ದಾರೆ.

ಕೊಂಕಣಿಯಲ್ಲಿ‌ ನಾಮಫಲಕ ಹಾಕಲು ನಿರ್ಧಾರ

ನಗರಸಭೆ ವಾರ್ಡ್​ಗಳ ಹೆಸರನ್ನು ಕನ್ನಡದ ಜೊತೆ ಕೊಂಕಣಿ ಭಾಷಿಕರಿಗೂ ತಿಳಿಯಲೆಂದು ಕೊಂಕಣಿ ಭಾಷೆಯಲ್ಲಿ ಹೋಲಿಕೆಯಾಗುವಂತೆ ಬರೆಸಿದ್ದು ಇದು ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಕೊಂಕಣಿಯಲ್ಲಿ ಬರೆದಿದ್ದ ಬೋರ್ಡ್​​ಗೆ ಕಪ್ಪು ಮಸಿ ಬಳೆದು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು.

ಇತ್ತ ನಮ್ಮ ಮಾತೃ ಭಾಷೆ ಕೊಂಕಣಿಗೆ ಅವಮಾನ ಮಾಡಿದ್ದು, ಕಾರವಾರದಲ್ಲಿ ಕೊಂಕಣಿ ಬೋರ್ಡ್​​ ಸಹ ಬರೆಸಬೇಕು ಎಂದು ಕೊಂಕಣಿಯವರು ಪ್ರತಿಭಟನೆ ಮಾಡಿದ್ದರು. ಇದೀಗ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಈ ಭಾಷಾ ವಿವಾದ ಚರ್ಚೆಗೆ ಬಂದಿದ್ದು, ಸದಸ್ಯರುಗಳು ಕನ್ನಡದ ಜೊತೆ ಕೊಂಕಣಿ ಭಾಷೆಯಲ್ಲಿಯೂ ಬೋರ್ಡ್​ಗಳನ್ನು ಬರೆಯುವಂತೆ ಠರಾವು ಮಾಡಲಾಗಿದೆ.

ಇನ್ನು ಕೊಂಕಣಿಯಲ್ಲಿ ಬರೆದಿದ್ದ ಬೋರ್ಡಿಗೆ ಮಸಿ ಬಳೆದಿದ್ದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರ ವಿರುದ್ಧ ದೂರು ಸಹ ದಾಖಲಾಗಿತ್ತು. ಘಟನೆ ಖಂಡಿಸಿ ಸ್ವತಃ ಪ್ರವೀಣ್ ಶೆಟ್ಟಿಯವರೇ ಕಾರವಾರಕ್ಕೆ ಆಗಮಿಸಿ ನಗರಸಭೆ ವಿರುದ್ಧ ಪ್ರತಿಭಟನೆ ಮಾಡಿದ್ದಲ್ಲದೇ ಮುಂದೆ ಮತ್ತೆ ಕೊಂಕಣಿಯಲ್ಲಿ ಬೋರ್ಡ್ ಬರೆಯಲು ಮುಂದಾದರೆ ಬೋರ್ಡನ್ನು ಧ್ವಂಸ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.

ತಾವು ಹಿಂದಿ ಭಾಷೆಯಲ್ಲಿ ಬರೆದಿಲ್ಲ. ದೇವನಾಗರಿ ಲಿಪಿಯಲ್ಲಿ ಬರೆದಿದ್ದು ಸರ್ಕಾರಕ್ಕೆ ಈ ಬಗ್ಗೆ ಠರಾವು ಮಾಡಿರುವ ಪ್ರಸ್ತಾಪ ಕಳುಹಿಸಲಾಗಿದೆ. ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆಯೆಂಬುದನ್ನು ಕಾದು ನೋಡಬೇಕೆಂದು ನಗರಸಭೆ ಅಧ್ಯಕ್ಷರು ಹೇಳಿದ್ದಾರೆ.

ಇನ್ನೂ ಭಟ್ಕಳ ಪುರಸಭೆ ವ್ಯಾಪ್ತಿಯಲ್ಲೂ ಇದೇ ರೀತಿ ಭಾಷಾ ವಿವಾದ ಸೃಷ್ಟಿಯಾಗಿದ್ದು, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸರ್ಕಾರದ ನಾಮಫಲಕಗಳು ಕನ್ನಡ, ಇಂಗ್ಲಿಷ್​​ ಭಾಷೆ ಬಿಟ್ಟು ಬೇರೆ ಯಾವ ಭಾಷೆಯಲ್ಲೂ ಬರೆಯುವಂತಿಲ್ಲ ಎಂದು ಸೂಚಿಸಿದ್ದಾರೆ. ಇದರ ನಡುವೆ ಕಾರವಾರ ನಗರಸಭೆಯಲ್ಲಿ ಕೊಂಕಣಿಯಲ್ಲಿ ಬೋರ್ಡ್ ಬರೆಯುವಂತೆ ಠರಾವು ಮಾಡಿದ್ದು, ಜಿಲ್ಲಾಡಳಿತ, ಸರ್ಕಾರ, ನಗರಸಭೆಯ ಠರಾವಿಗೆ ಯಾವ ನಿರ್ಧಾರ ಕೈಗೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.

Thumbnail image

ಭಟ್ಕಳ ಪುರಸಭೆಗೆ ಅಳವಡಿಸಿದ್ದ ಉರ್ದು ನಾಮಫಲಕ ತೆರವು

ಭಟ್ಕಳ ಪುರಸಭೆಗೆ ಅಳವಡಿಸಿದ್ದ ಉರ್ದು ನಾಮಫಲಕವನ್ನು ತೆರವುಗೊಳಿಸುವ ಮೂಲಕ ಸೃಷ್ಟಿಯಾಗಿದ್ದ ಭಾಷಾ ವಿವಾದಕ್ಕೆ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ತೆರೆ ಎಳೆದಿದ್ದಾರೆ.

ಭಟ್ಕಳ(ಉತ್ತರ ಕನ್ನಡ): ಭಟ್ಕಳದ ಪುರಸಭೆಗೆ ಉರ್ದು ನಾಮಫಲಕ ಅಳವಡಿಸಿದ್ದಕ್ಕೆ ಉಂಟಾಗಿದ್ದ ಭಾಷಾ ವಿವಾದಕ್ಕೆ ಜಿಲ್ಲಾಧಿಕಾರಿಗಳ ಮಧ್ಯಪ್ರವೇಶದಿಂದ ತೆರೆ ಬಿದ್ದಿದೆ. ಕನ್ನಡ ಮತ್ತು ಇಂಗ್ಲಿಷ್ ಬಿಟ್ಟು ಬೇರಾವ ಭಾಷೆಗಳನ್ನೂ ಸರ್ಕಾರಿ ಕಚೇರಿಗಳ ಮೇಲೆ ಬಳಸದಂತೆ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಸೂಚಿಸಿದ್ದಾರೆ.

ಭಟ್ಕಳದಲ್ಲಿ ಕೆಲ ದಿನ ದಿನಗಳ ಹಿಂದೆ ಪುರಸಭೆ ಕಚೇರಿಯ ನಾಮಫಲಕವನ್ನು ಕನ್ನಡ, ಇಂಗ್ಲಿಷ್ ಹಾಗೂ ಉರ್ದು ಭಾಷೆಯಲ್ಲಿ ಅಳವಡಿಸಲು ಮುಂದಾಗಿತ್ತು. ಇದನ್ನು ವಿರೋಧಿಸಿ ಭುವನೇಶ್ವರಿ ಕನ್ನಡ ಸಂಘ ಹಾಗೂ ಇತರ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪುರಸಭೆಯ ಎದುರು ಸೇರಿ ಪ್ರತಿಭಟಿಸಿದ್ದರು. ಜೊತೆಗೆ ಉರ್ದು ಫಲಕವನ್ನು ತೆಗೆಯುವಂತೆ ಪಟ್ಟು ಹಿಡಿದಿದ್ದರು. ಇದಾದ ಮಾರನೇ ದಿನ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿ, ಉರ್ದು ಫಲಕವನ್ನು ಅಳವಡಿಸುವಂತೆ ಒತ್ತಾಯಿಸಿದ್ದರು.

ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಇಂದು ಭಟ್ಕಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿದರು. ಸಾಕಷ್ಟು ಚರ್ಚೆ, ಪರ- ವಿರೋಧಗಳನ್ನು ಆಲಿಸಿದ ಜಿಲ್ಲಾಧಿಕಾರಿ, ಅಂತಿಮವಾಗಿ ಪುರಸಭೆಗೆ ಆದೇಶವೊಂದನ್ನು ನೀಡಿದ್ದಾರೆ. ಕನ್ನಡ- ಇಂಗ್ಲಿಷ್ ಹೊರತುಪಡಿಸಿ ಬೇರಾವ ಭಾಷೆಯ ನಾಮಫಲಕಗಳನ್ನು ಅಳವಡಿಸುವಂತಿಲ್ಲ. ಹಾಗೇನಾದರೂ ಅವಶ್ಯವಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕೊಡಿ ಎಂದು ಸೂಚಿಸಿದ್ದಾರೆ.

ಈ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಪುರಸಭೆಗೆ ಅಳವಡಿಸಲಾಗಿದ್ದ ಉರ್ದು ನಾಮಫಲಕವನ್ನು ತೆರವುಗೊಳಿಸಲಾಗಿದೆ. ಸದ್ಯ ಕನ್ನಡ ಹಾಗೂ ಇಂಗ್ಲಿಷ್ ಬರಹಗಳನ್ನು ಮಾತ್ರ ಉಳಿಸಲಾಗಿದೆ. ಬಗ್ಗೆ ಸಭೆಯ ಬಳಿಕ ಪ್ರತಿಕ್ರಿಯೆ ನೀಡಿರುವ ಪುರಸಭೆಯ ಅಧ್ಯಕ್ಷ ಫರ್ವೇಜ್ ಕಾಶಿಂಜಿ, ಜಿಲ್ಲಾಧಿಕಾರಿಯವರ ಆದೇಶಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ತುರ್ತು ಸಾಮಾನ್ಯ ಸಭೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಹೇಳಿದ್ದಾರೆ ಎಂದರು.

ಒಂದೆಡೆ ಈವರೆಗೆ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಭಟ್ಕಳದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಭಾಷಾ ವಿವಾದಕ್ಕೆ ಜಿಲ್ಲಾಡಳಿತ ತೆರೆಯೇನೋ ಎಳೆದಿದೆ. ಆದರೂ ಮತ್ತೊಂದು ಕಡೆ ಈ ವಿವಾದ ಇಲ್ಲಿ ಬೂದಿಮುಚ್ಚಿದ ಕೆಂಡದಂತೆ ಕಾಣಿಸುತ್ತಿದೆ. ಹಾಗಾಗಿ ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ. ಉರ್ದು ಬೋರ್ಡ್ ತೆಗೆಯಿಸಿದ್ದಕ್ಕೆ ಅಸಮಾಧಾನಗೊಂಡಿರುವ ಮುಸ್ಲಿಮರು ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಿದ್ದು, ಪುರಸಭೆಯ ತುರ್ತು ಸಾಮಾನ್ಯ ಸಭೆಯ ಬಳಿಕ ಮುಂದೇನಾಗಲಿದೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *