nk express today- ಮಳೆ, ಕಾಡುಪ್ರಾಣಿಯಿಂದ ಹಾನಿ

ನೆಲೆಮಾವ್ ನಲ್ಲಿ ಕುಸಿದ ಬಾವಿ ಸ್ಥಳೀಯ ಸಾರ್ವಜನಿಕ ರಲ್ಲಿ ಹೆಚ್ಚಿದ ಆತಂಕ
ಸಿದ್ದಾಪುರ ತಾಲೂಕಿನ ಅಣಲೇ ಬೈಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲೆಮಾವ್ ಎಸ್ ಸಿ ಕೆರಿಯಲ್ಲಿರುವ ಬಾವಿಯು ಕುಸಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲೂ ಸಹ ಕುಸಿತ ಉಂಟಾಗಿದೆ ಈ ಘಟನೆ ಯಿಂದ ಸ್ಥಳೀಯ ಸಾರ್ವಜನಿಕ ರಲ್ಲಿ ಆತಂಕ ಉಂಟಾಗಿದ್ದು ಘಟನೆ ನಡೆಯಲು ಕಾರಣ ಹಾಗೂ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.


ಇದು ಸ್ವಲ್ಪ ಹಳೆಯ ಮಣ್ಣಿನ ಬಾವಿ ಯಾಗಿದ್ದು ಕುಸಿದಿದೆ ಬಾವಿಯ ಸುತ್ತಲೂ ಸುರಕ್ಷತೆಗೆ ಬೇಲಿ ಮಾಡಲಾಗಿದೆ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಮಳೆಗಾಲ ಮುಗಿದ ನಂತರ ಅಲ್ಲಿ ಬಾವಿ ನಿರ್ಮಿಸಿ ಕೊಡಲಾಗುವುದು ಎಂದು ಸ್ಥಳೀಯ ಪಂಚಾಯತ್ ಪಿಡಿಓ ಸುಬ್ರಮಣ್ಯ ಹೆಗಡೆ ಮಾಹಿತಿ ನೀಡಿದ್ದಾರೆ.

VARA

Thumbnail image

ಉತ್ತರಕನ್ನಡ: ಪತ್ನಿಗೆ ಚಾಕುವಿನಿಂದ ಇರಿದ ಪತಿ

ಪತ್ನಿಯ ಮೇಲೆ ಅನುಮಾನಗೊಂಡ ಪತಿ ಆಕೆಯ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಹೊನ್ನಾವರದಲ್ಲಿ ನಡೆದಿದೆ.

ಕಾರವಾರ(ಉತ್ತರಕನ್ನಡ): ಪತ್ನಿಯ ಮೇಲೆ ಸಂಶಯಗೊಂಡ ಪತಿಯೋರ್ವ ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡತೋಕಾದಲ್ಲಿ ನಡೆದಿದೆ. ಮಂಜುನಾಥ ಶೆಟ್ಟಿ ಎಂಬಾತನೆ ಹಲ್ಲೆ ಮಾಡಿರುವ ಆರೋಪಿಯಾಗಿದ್ದಾನೆ.

ಡತೋಕಾದ ಆಶಾ ಶೆಟ್ಟಿ (50) ಹಲ್ಲೆಗೊಳಗಾದ ಮಹಿಳೆ. ಪತ್ನಿ ಮೇಲೆ ಸಂಶಯಗೊಂಡು ಸಿಟ್ಟಿಗೆದ್ದ ಮಂಜುನಾಥ ಚಾಕುವಿನಿಂದ ಕೈ, ಹೊಟ್ಟೆ, ಮುಖದ ಭಾಗಗಳಿಗೆ ಗಾಯಗೊಳಿಸಿದ್ದು ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದ ಮಹಿಳೆಯನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

husband-attacked-with-knife-on-wife-in-honnavara

ಚಾಕುವಿನಿಂದ ಇರಿತಕ್ಕೊಳಗಾದ ಪತ್ನಿ

ಜೋಯಿಡಾದಲ್ಲಿ ರೈತನ ಮೇಲೆ ಕರಡಿ ದಾಳಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನೋರ್ವನ ಮೇಲೆ ಕರಡಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬರಪಾಲಿ ಗ್ರಾಮದಲ್ಲಿ ನಡೆದಿದೆ. ಬರಪಾಲಿಯ ಸಂದೀಪ ಅಣಶಿಕರ (32) ಗಾಯಗೊಂಡ ರೈತ.

bear attack on farmer in joida

ಕರಡಿ ದಾಳಿಯಿಂದ ಗಾಯಗೊಂಡ ರೈತ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿಯಾಗಿ ಎರಗಿದ ಕರಡಿ, ಸಂದೀಪ ಮೇಲೆ ದಾಳಿ ನಡೆಸಿದೆ. ಗಾಬರಿಗೊಂಡು ಕರಡಿಯಿಂದ ತಪ್ಪಿಸಿಕೊಳ್ಳಲು ಕೂಗಾಡಿ ಸಾಕಷ್ಟು ಪ್ರಯತ್ನ ನಡೆಸಿದರೂ ಸಹ ಸಾಧ್ಯವಾಗಿಲ್ಲ. ಕೊನೆಗೂ ತಪ್ಪಿಸಿಕೊಂಡಿದ್ದು ಮೈ ಮೇಲೆ ಸಾಕಷ್ಟು ಗಾಯಗಳಾಗಿವೆ. ರೈತನನ್ನು ತಕ್ಷಣ ಸ್ಥಳೀಯರು ಜೋಯಿಡಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *