nk express today- ಮಳೆ, ಕಾಡುಪ್ರಾಣಿಯಿಂದ ಹಾನಿ

ನೆಲೆಮಾವ್ ನಲ್ಲಿ ಕುಸಿದ ಬಾವಿ ಸ್ಥಳೀಯ ಸಾರ್ವಜನಿಕ ರಲ್ಲಿ ಹೆಚ್ಚಿದ ಆತಂಕ
ಸಿದ್ದಾಪುರ ತಾಲೂಕಿನ ಅಣಲೇ ಬೈಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲೆಮಾವ್ ಎಸ್ ಸಿ ಕೆರಿಯಲ್ಲಿರುವ ಬಾವಿಯು ಕುಸಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲೂ ಸಹ ಕುಸಿತ ಉಂಟಾಗಿದೆ ಈ ಘಟನೆ ಯಿಂದ ಸ್ಥಳೀಯ ಸಾರ್ವಜನಿಕ ರಲ್ಲಿ ಆತಂಕ ಉಂಟಾಗಿದ್ದು ಘಟನೆ ನಡೆಯಲು ಕಾರಣ ಹಾಗೂ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.


ಇದು ಸ್ವಲ್ಪ ಹಳೆಯ ಮಣ್ಣಿನ ಬಾವಿ ಯಾಗಿದ್ದು ಕುಸಿದಿದೆ ಬಾವಿಯ ಸುತ್ತಲೂ ಸುರಕ್ಷತೆಗೆ ಬೇಲಿ ಮಾಡಲಾಗಿದೆ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಮಳೆಗಾಲ ಮುಗಿದ ನಂತರ ಅಲ್ಲಿ ಬಾವಿ ನಿರ್ಮಿಸಿ ಕೊಡಲಾಗುವುದು ಎಂದು ಸ್ಥಳೀಯ ಪಂಚಾಯತ್ ಪಿಡಿಓ ಸುಬ್ರಮಣ್ಯ ಹೆಗಡೆ ಮಾಹಿತಿ ನೀಡಿದ್ದಾರೆ.

VARA

Thumbnail image

ಉತ್ತರಕನ್ನಡ: ಪತ್ನಿಗೆ ಚಾಕುವಿನಿಂದ ಇರಿದ ಪತಿ

ಪತ್ನಿಯ ಮೇಲೆ ಅನುಮಾನಗೊಂಡ ಪತಿ ಆಕೆಯ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಹೊನ್ನಾವರದಲ್ಲಿ ನಡೆದಿದೆ.

ಕಾರವಾರ(ಉತ್ತರಕನ್ನಡ): ಪತ್ನಿಯ ಮೇಲೆ ಸಂಶಯಗೊಂಡ ಪತಿಯೋರ್ವ ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡತೋಕಾದಲ್ಲಿ ನಡೆದಿದೆ. ಮಂಜುನಾಥ ಶೆಟ್ಟಿ ಎಂಬಾತನೆ ಹಲ್ಲೆ ಮಾಡಿರುವ ಆರೋಪಿಯಾಗಿದ್ದಾನೆ.

ಡತೋಕಾದ ಆಶಾ ಶೆಟ್ಟಿ (50) ಹಲ್ಲೆಗೊಳಗಾದ ಮಹಿಳೆ. ಪತ್ನಿ ಮೇಲೆ ಸಂಶಯಗೊಂಡು ಸಿಟ್ಟಿಗೆದ್ದ ಮಂಜುನಾಥ ಚಾಕುವಿನಿಂದ ಕೈ, ಹೊಟ್ಟೆ, ಮುಖದ ಭಾಗಗಳಿಗೆ ಗಾಯಗೊಳಿಸಿದ್ದು ತೀವ್ರ ರಕ್ತಸ್ರಾವದಿಂದ ನಿತ್ರಾಣಗೊಂಡಿದ್ದ ಮಹಿಳೆಯನ್ನು ಹೊನ್ನಾವರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

husband-attacked-with-knife-on-wife-in-honnavara

ಚಾಕುವಿನಿಂದ ಇರಿತಕ್ಕೊಳಗಾದ ಪತ್ನಿ

ಜೋಯಿಡಾದಲ್ಲಿ ರೈತನ ಮೇಲೆ ಕರಡಿ ದಾಳಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತನೋರ್ವನ ಮೇಲೆ ಕರಡಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಬರಪಾಲಿ ಗ್ರಾಮದಲ್ಲಿ ನಡೆದಿದೆ. ಬರಪಾಲಿಯ ಸಂದೀಪ ಅಣಶಿಕರ (32) ಗಾಯಗೊಂಡ ರೈತ.

bear attack on farmer in joida

ಕರಡಿ ದಾಳಿಯಿಂದ ಗಾಯಗೊಂಡ ರೈತ

ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿಯಾಗಿ ಎರಗಿದ ಕರಡಿ, ಸಂದೀಪ ಮೇಲೆ ದಾಳಿ ನಡೆಸಿದೆ. ಗಾಬರಿಗೊಂಡು ಕರಡಿಯಿಂದ ತಪ್ಪಿಸಿಕೊಳ್ಳಲು ಕೂಗಾಡಿ ಸಾಕಷ್ಟು ಪ್ರಯತ್ನ ನಡೆಸಿದರೂ ಸಹ ಸಾಧ್ಯವಾಗಿಲ್ಲ. ಕೊನೆಗೂ ತಪ್ಪಿಸಿಕೊಂಡಿದ್ದು ಮೈ ಮೇಲೆ ಸಾಕಷ್ಟು ಗಾಯಗಳಾಗಿವೆ. ರೈತನನ್ನು ತಕ್ಷಣ ಸ್ಥಳೀಯರು ಜೋಯಿಡಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *