ಬಾಯಲ್ಲಿ ರಾಷ್ಟ್ರೀಯತೆ, ಆದರೆ ಭಯೋತ್ಪಾದಕ ಆರೋಪಿಗಳೊಂದಿಗೆ ಬಿಜೆಪಿಗೆ ನಂಟು: ಕಾಂಗ್ರೆಸ್ ಗಂಭೀರ ಆರೋಪ

ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದಯಪುರದಲ್ಲಿ ನಡೆದ ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ರಿಯಾಜ್ ಅಟ್ಟಾರಿ ಬಿಜೆಪಿ ಕಾರ್ಯಕರ್ತ ಅಂತಾ ಗೊತ್ತಾಗಿದೆ. ಸ್ಥಳೀಯ ಹಿರಿಯ ಮುಖಂಡರೊಬ್ಬರ ಸಮ್ಮುಖದಲ್ಲಿ ಬಿಜೆಪಿಗೆ  ಮೊಹಮ್ಮದ್ ರಿಯಾಜ್ ಅಟ್ಟಾರಿ ಸೇರ್ಪಡೆಯಾಗಿದ್ದ. ರಾಜಸ್ಥಾನ ಬಿಜೆಪಿಯ ವಿಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರ ಅಳಿಯ ಅಟ್ಟಾರಿ ಅವರನ್ನು ನೇಮಿಸಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳು‌ ಸಹ ವರದಿ ಮಾಡಿವೆ ಎಂದು ತಿಳಿಸಿದರು.

ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಅವರು ಪಕ್ಷದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಇತ್ತೀಚೆಗಷ್ಟೇ ಸ್ಥಳೀಯರಿಂದ ಲಷ್ಕರ್-ಎ-ತೊಯ್ಬಾ ಉಗ್ರ ತಾಲಿಬ್ ಹುಸೇನ್ ಷಾ ಸೆರೆ ಸಿಕ್ಕಿದ್ದ. ಈತ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಪದಾಧಿಕಾರಿ ಅಂತಾ ತಿಳಿದುಬಂದಿದೆ. ತಾಲಿಬ್ ಹುಸೇನ್ ಶಾ ಈ ಹಿಂದೆ ಗೃಹ ಸಚಿವ ಅಮಿತ್ ಶಾ ಜೊತೆಯೂ‌ ಕಾಣಿಸಿಕೊಂಡಿದ್ದರು. ಅಷ್ಟೇ ಅಲ್ಲ ಇತರೆ ಹಿರಿಯ ಬಿಜೆಪಿ ನಾಯಕರೊಂದಿಗೆ ಫೋಟೋಗಳಲ್ಲಿ ಕಾಣಿಸಿಕೊಂಡಿದ್ದರು. ಈ‌ ಬಗ್ಗೆ ಆರೋಪಿ ಜೊತೆ ಬಿಜೆಪಿ‌ ಲೀಡರ್ ಗಳ ಫೋಟೋ ಇರೋ ಸ್ಕ್ರೀನ್ ಶಾಟ್ ಗಳನ್ನ ಬಹಿರಂಗಪಡಿಸಿದ್ದೇನೆ. ಬಂಧನಕ್ಕೊಳಗಾದಾಗ ಈತ ಅಮರನಾಥ ಯಾತ್ರೆ ಮೇಲೂ ದಾಳಿ ನಡೆಸಲು ಈತ ಯೋಜನೆ ರೂಪಿಸಿದ್ದ ಎಂದು ಹೇಳಿದರು.

ಅಮರಾವತಿಯ ಕೆಮಿಸ್ಟ್ ಉಮೇಶ್ ಕೋಲ್ಹೆ ಹತ್ಯೆಯ ಮಾಸ್ಟರ್ ಮೈಂಡ್ ಇರ್ಫಾನ್ ಖಾನ್ ಆಗಿದ್ದಾನೆ. ಈತ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ರವಿ ರಾಣಾ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ. ರಾಣಾ ಮತ್ತು ಬಿಜೆಪಿ ನಡುವಿನ ಸಂಬಂಧ ಎಲ್ಲರಿಗೂ ತಿಳಿದಿದೆ. ಇರ್ಫಾನ್ ಖಾನ್ ಅವರು ರಾಣಾ ಪರ ಪ್ರಚಾರ ನಡೆಸಿ ಮತ ಯಾಚಿಸಿದ್ದಾನೆ. 2017ರಲ್ಲಿ ಬಿಜೆಪಿ ಐಟಿ ಸೆಲ್ ಸದಸ್ಯ ದ್ರುವ ಸಕ್ಸೇನಾ ಸೇರಿ 10 ಮಂದಿಯನ್ನು ಬಂಧಿಸಲಾಗಿತ್ತು.

ಭಯೋತ್ಪಾದಕ ನಿಗ್ರಹ ದಳ ದಾಳಿ‌ ನಡೆಸಿತ್ತು. ಇವರ ವಿರುದ್ಧ ಕಾನೂನುಬಾಹಿರ ಟೆಲಿಫೋನ್ ಎಕ್ಸ್ ಚೇಂಜ್ ಹೊಂದಿದ್ದ ಆರೋಪ ಇದೆ. ಈ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ಕೂಡ ಫೋಟೋ ವೈರಲ್ ಮಾಡಿದ್ದರು. ಎರಡು ವರ್ಷದ ಬಳಿಕ ಬಲರಾಮ್ ಸಿಂಗ್ ಎಂಬಾತನನ್ನ ಬಂಧಿಸಿದ್ದರು. ಈತ ಮಧ್ಯಪ್ರದೇಶದ ಬಜರಂಗದಳದ ಮುಖ್ಯಸ್ಥ. ಭಯೋತ್ಪಾದಕರಿಗೆ ಹಣ ಒದಗಿಸಿದ ಆರೋಪ ಈತನ‌ ಮೇಲಿದೆ ಎಂದು ಅಜಯ್ ಕುಮಾರ್ ತಿಳಿಸಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *