local news – ಭುವನೇಶ್ವರಿ ತಾಳಮದ್ದಲೆ ಕೂಟ @೩೪

34ನೇ ವರ್ಷಕ್ಕೆ ಕಾಲಿಟ್ಟ ಭುವನೇಶ್ವರಿ ತಾಳಮದ್ದಳೆ ಕೂಟ.
ಸಿದ್ದಾಪುರ. ತಾಲೂಕಿನ ಗುಂಜುಗೋಡು ಜಯರಾಮ್ ಭಟ್ ಅವರ ಮನೆಯಲ್ಲಿ ರವಿವಾರ ಪ್ರಥಮ ಏಕಾದಶಿಯ ನಿಮಿತ್ತ ತಾಳಮದ್ದಳೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭುವನಗಿರಿ ಭುವನೇಶ್ವರಿ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಶ್ರೀಧರ ಭಟ್ ಮುತ್ತಿಗೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಭುವನಗಿರಿಯ ಭುವನೇಶ್ವರಿ ತಾಯಿ ಹೆಸರಿನಲ್ಲಿ 33 ವರ್ಷಗಳ ಹಿಂದೆ ಸ್ಥಾಪಿತವಾದ ಭುವನೇಶ್ವರಿ ತಾಳಮದ್ದಳೆ ಕೂಟ 34ನೇ ವರ್ಷಕ್ಕೆ ಕಾಲಿಡುತ್ತಿರುವುದು ಹರ್ಷದ ಸಂಗತಿ .ಈ ಕೂಟವು ಇದೇ ರೀತಿ ಮುಂದುವರೆಯಲಿ ಎಂದು ಆಶಿಸಿದರು . ನಂತರ ಕಚ ದೇವಯಾನೆ ಎಂಬ ಆಖ್ಯಾನದ ತಾಳಮದ್ದಳೆ ನಡೆಯಿತು.

ಹಿಮ್ಮೇಳದಲ್ಲಿ ಭಾಗವತರಾಗಿ ತ್ರಯಂಬಕ ಹೆಗಡೆ ಇಡುವಾಣಿ ಮತ್ತು ಮಾಧವ ಭಟ್ ಕೊಳಗಿ ಮಧುರ ಕಂಠದ ಗಾಯನದಿಂದ ರಂಜಿಸಿದರು. ಮದ್ದಳೆ ವಾದಕರಾಗಿ ಮಂಜುನಾಥ ಹೆಗಡೆ ಕಂಚಿಮನೆ ಉತ್ತಮ ಸಾತ್ ನೀಡಿದರು. ಅರ್ಥಧಾರಿಗಳಾಗಿ ಶ್ರೀಧರ ಭಟ್ ಮುತ್ತಿಗೆ (ಇಂದ್ರ) ಎಂ.ಕೆ. ಹೆಗಡೆ ಹಳದೋಟ (ಬೃಹಸ್ಪತಿ) ವಿ.ಶೇಷಗಿರಿ ಭಟ್ಟ ಗುಂಜಗೋಡು (ಕಚ ),ಜಿ.ಕೆ. ಭಟ್ ಕಶಿಗೆ( ಶುಕ್ರಾಚಾರ್ಯ), ಗಣಪತಿ ಹೆಗಡೆ ಗುಂಜಗೋಡ( ದೇವಯಾನೆ), ಎಂ.ಕೆ.ನಾಯ್ಕ ಹೊಸಳ್ಳಿ (ವೃಷಪರ್ವ), ವಿನೀತ ಹೆಗಡೆ ಗುಂಜಗೋಡ (ನಾರದ), ಜೈರಾಮ ಭಟ್ಟ ಗುಂಜಗೋಡ (ದೇವಯಾನೆ ಮತ್ತು ಧೂಮಕೇತು), ಪಾತ್ರಗಳನ್ನು ಸುಂದರವಾಗಿ ನಿರ್ವಹಿಸಿದರು. ಜೈರಾಮ ಭಟ್ಟ ಸ್ವಾಗತಿಸಿ, ವಂದಿಸಿದರು.

ಸಿದ್ದಾಪುರ: ಹೊಸೂರು ಶ್ರೀ ಬಂಕೇಶ್ವರ ಪ್ರೌಢಶಾಲೆಯಲ್ಲಿ 2022-23 ನೇ ಸಾಲಿನ 8ನೇ ತರಗತಿಯ ವಿದ್ಯಾರ್ಥಿಗಳ ಸ್ವಾಗತ ಹಾಗೂ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಯಿತು
ವಿಜಯ ಆರ್ಥಿಕ ಸಾಕ್ಷರತಾ ಕೇಂದ್ರಸಮಾಲೋಚಕರಾದ ಶಿವಶಂಕರ್ ಎನ್. ಕೆ.ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ಮೋಬೈಲ್ ಗಳನ್ನು ಹೆಚ್ಚೆಚ್ಚು ಬಳಸುವುದಕ್ಕಿಂತ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಓದಿನ ಕಡೆಗೆ ಹೆಚ್ಚಿನ ಗಮನವನ್ನು ನೀಡಿ ಜೀವನದ ಮುಂದಿನ ಗುರಿ ಮುಟ್ಟುವಲ್ಲಿ ಪ್ರಯತ್ನಿಸಿಲ ರಾಗಬೇಕು ಎಂದ ಅವರು
ವಿದ್ಯಾರ್ಥಿಗಳಿಗೆ ಉಳಿತಾಯ ಮತ್ತು ಶೈಕ್ಷಣಿಕ ಸಾಲ ಸೌಲಭ್ಯಗಳು ಉದ್ಯೋಗ ತರಬೇತಿಗಳು ಸೇರಿದಂತೆ ಆರ್ಥಿಕ ಸಾಕ್ಷರತೆ ಕುರಿತು ಮಾಹಿತಿಯನ್ನು ನೀಡಿದರು.

ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡುವುದರ ಮೂಲಕ ಸ್ವಾಗತಿಸಲಾಯಿತು
ಅಧ್ಯಕ್ಷ ತೆ ವಹಿಸಿದ್ದ ಮುಖ್ಯೋಧ್ಯಾಪ ಕರಾದ ಲೊಕೇಶ ನಾಯ್ಕ ಮಾತನಾಡಿ ಶಾಲೆಯ ನಿಯಮದಂತೆ ನಡೆದು ಮಾದರಿಯಾಗಬೇಕು.ನಿಮ್ಮ ಆದರ್ಶ ಇತರರು ಪಾಲಿಸುವಂತಾಗಬೇಕು. ಮಕ್ಕಳು ಪಠ್ಯ ಪಠ್ಯೇತರ ಚಟುವಟಿಕೆ ಯಲ್ಲಿ ತೋಡಗಿಕೊಳ್ಳಬೇಕು. ಶಾಲೆಯ ಹಿರಿಮೆ ಹೆಚ್ಚಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ದೇವೇಂದ್ರ ನಾಯ್ಕ, ರವೀಂದ್ರ ನಾಯ್ಕ, ಶ್ರೀ ಮತಿ ಕಮಲಾಕ್ಷಿ ಆರ್, ಉಪಸ್ಥಿತರಿದ್ದರು.

ಕುಮಾರಿ ನಯನ ಸಂಗಡಿಗರು ಪ್ರಾರ್ಥನೆ ಗೀತೆಹಾಡಿದರು. ಶಿಕ್ಷಕರಾದ ಟಿ ಸಿ ನಾಯ್ಕ ಸ್ವಾಗತಿಸಿದರು .ಎಂ ಬಿ ನಾಯ್ಕ ನಿರೂಪಿಸಿದರು ವಿ ಟಿ ನಾಯ್ಕ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *