ವಿವಿಧ ಯೋಜನೆಗಳಡಿ ರೈತರಿಗೆ ಭರ್ಜರಿ ಸಬ್ಸಿಡಿ.. ಈಗಲೇ ಅರ್ಜಿ ಸಲ್ಲಿಸಿ

Thumbnail image

ಕೃಷಿ ಹೊಂಡ ಸೇರಿದಂತೆ ವಿವಿಧ ಯೋಜನೆಗಳಡಿ ರೈತರಿಗೆ ಭರ್ಜರಿ ಸಬ್ಸಿಡಿ.. ಈಗಲೇ ಅರ್ಜಿ ಸಲ್ಲಿಸಿ

ಕೃಷಿ ಹೊಂಡ ನಿರ್ಮಾಣಕ್ಕೆ ಕೃಷಿಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನವನ್ನು ಇದೀಗ ನರೇಗಾ ಯೋಜನೆಯಡಿ ನೀಡಲಾಗುತ್ತಿದೆ. ಶೇ.80 ರಷ್ಟು ಸಹಾಯಧನವನ್ನು ರೈತರು ಪಡೆಯಬಹುದಾಗಿದೆ.

ಬೆಂಗಳೂರು: ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಶೇ.80 ರಷ್ಟು ಸಹಾಯಧನ ಪಡೆಯಬಹುದು. ಕೃಷಿಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನವನ್ನು ಇದೀಗ ನರೇಗಾ ಯೋಜನೆಯಡಿ ಕೊಡಲಾಗುತ್ತಿದೆ.

ರೈತರ ಕೃಷಿ ಚಟುವಟಿಕೆಗೆ ಮತ್ತು ನೀರಿನ ಅಭಾವ ನೀಗಿಸಲು ಮಳೆಯ ನೀರನ್ನು ಸಂಗ್ರಹಿಸಿ ಅದನ್ನು ಕೃಷಿ ಚಟುವಟಿಕೆಯಲ್ಲಿ ಬಳಸಿಕೊಳ್ಳುವುದು ಇದರ ಉದ್ದೇಶ. ಕೃಷಿ ಹೊಂಡ ರಚನೆ ನಂತರ ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ ಅಳವಡಿಕೆ, ಹೊಂಡದಿಂದ ನೀರೆತ್ತಲು ಡೀಸೆಲ್ ಪಂಪ್ ಸೆಟ್, ತುಂತುರು ನೀರಾವರಿ ಅಳವಡಿಕೆಗೆ ಈ ಯೋಜನೆಯಡಿ ಅವಕಾಶವಿದೆ. ಕೃಷಿಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಗನುಗುಣವಾಗಿ ಶೇ.80 ಸಬ್ಸಿಡಿ ನೀಡಲಾಗುತ್ತದೆ.

ಕೃಷಿ ಹೊಂಡ ನಿರ್ಮಾಣಕ್ಕೆ ರೈತರಿಗೆ ಸಿಗುವ ಸಹಾಯಧನ ಎಷ್ಟು ಗೊತ್ತಾ?

ಕೃಷಿ ಹೊಂಡ ನಿರ್ಮಾಣಕ್ಕೆ ರೈತರಿಗೆ ಸಿಗುವ ಸಹಾಯಧನ ಎಷ್ಟು ಗೊತ್ತಾ?

ಯಾವ ದಾಖಲೆ ಬೇಕು: ಕೃಷಿ ಹೊಂಡ ನಿರ್ಮಾಣಕ್ಕೆ ಜಮೀನಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಇರಬೇಕು. ಸಂಬಂಧಿಸಿದ ಅಧಿಕಾರಿಗಳು ರೈತರ ಜಮೀನಿಗೆ ಭೇಟಿ ನೀಡಿ ತಾಂತ್ರಿಕವಾಗಿಯೂ ಕೃಷಿ ಹೊಂಡ ಎಲ್ಲಿ ನಿರ್ಮಿಸಬೇಕು ಎಂಬುದನ್ನು ಸ್ಥಳ ಗುರುತಿಸುತ್ತಾರೆ. ಕೃಷಿ ಹೊಂಡದ ಸುತ್ತ ನೆರಳು ಪರದೆ ರಚಿಸಲು ಹಾಗೂ ಹೊಂಡದ ಸುತ್ತ ಬದು ನಿರ್ಮಾಣಕ್ಕೆ ಅವಕಾಶವಿದೆ.

https://c28674858bc528d6d7e59d1b60670622.safeframe.googlesyndication.com/safeframe/1-0-38/html/container.html

ಇತ್ತೀಚೆಗೆ ಕೃಷಿ ಹೊಂಡದಲ್ಲಿ ಜಾನುವಾರುಗಳು, ಜನರಿಗೆ ಅನಾಹುತ ಆಗುವುದನ್ನು ತಪ್ಪಿಸಲು ಹೊಂಡಗಳ ಸುತ್ತಮುತ್ತ ಬೇಲಿ ನಿರ್ಮಾಣವನ್ನು ಕಡ್ಡಾಯಗೊಳಿಸಲಾಗಿದೆ. ಬೇಲಿ ಹಾಕಿಸಿಕೊಳ್ಳಲು ಶೇ.50 ರಷ್ಟು ಸಹಾಯಧವೂ ಸಿಗಲಿದೆ.

ಉಪಯೋಗವೇನು?: ಹೊಲದಲ್ಲಿ ಮಳೆ ನೀರು ಹರಿದು ಹೋಗಿ ಮಣ್ಣಿನ ಸವಕಳಿಯನ್ನು ತಡೆಯಬಹುದು. ಇದರಿಂದ ಅಂತರ್ಜಲ ವೃದ್ಧಿಯೂ ಸಾಧ್ಯ. ರೈತರು ಕೃಷಿ ಹೊಂಡ ನಿರ್ಮಿಸಿಕೊಳ್ಳಬೇಕಾದರೆ ಉದ್ಯೋಗ ಖಾತ್ರಿ ಯೋಜನೆಯ ಜಾಬ್ ಕಾರ್ಡ್ ಹೊಂದಿರಬೇಕು. ಈ ಕಾರ್ಡ್ ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹಾಗೂ ರೈತ ಮಹಿಳೆಯರು ಅರ್ಹರಾಗಿರುತ್ತಾರೆ. ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲಿಚ್ಚಿಸಿದರೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಅಥವಾ ತಾಲೂಕಿನ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬೇಕು.

ವೈಯಕ್ತಿಕ ಕೃಷಿ ಹೊಂಡ, ಸಾಮೂಹಿಕ ಕೃಷಿ ಹೊಂಡದೊಂದಿಗೆ ಯಾಂತ್ರೀಕರಣ, ಪ್ಯಾಕ್ ಹೌಸ್, ಒಣದ್ರಾಕ್ಷಿ ಘಟಕ, ತಳ್ಳುವ ಗಾಡಿ, ಈರುಳ್ಳಿ ಶೇಖರಣಾ ಘಟಕ ಹಾಗೂ ಅರಿಶಿಣ ಸಂಸ್ಕರಣಾ ಘಟಕಗಳಿಗೆ ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಜುಲೈ 25 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *