ಕಸ್ತೂರಿ ರಂಗನ ವರದಿ.. ಉ.ಕನ್ನಡ ಜಿಲ್ಲೆ ಅಭಿವೃದ್ಧಿಗೆ ಮಾರಕ, ಅರಣ್ಯವಾಸಿಗಳಿಗೆ ಆತಂಕ

ಕಸ್ತೂರಿ ರಂಗನ್ ವರದಿಯಂತೆ ಉತ್ತರ ಕನ್ನಡ ಜಿಲ್ಲೆಯ ಶೇ. 35 ಭಾಗ ಸೂಕ್ಷ್ಮ ಪ್ರದೇಶ- ಜಿಲ್ಲೆಯ ಅಭಿವೃದ್ಧಿ ಕುಂಠಿತ- ಸಾರ್ವಜನಿಕರ ಆತಂಕ

ಶಿರಸಿ(ಉತ್ತರ ಕನ್ನಡ): ಕಸ್ತೂರಿ ರಂಗನ ವರದಿ ಕರಡು ಅಧಿಸೂಚನೆ ಹಾಗೂ ಶರಾವತಿ ಅಭಯಾರಣ್ಯ ಪರಿಸರ ಅತಿ ಸೂಕ್ಷ್ಮ ಪ್ರದೇಶ ನಿಗದಿಗೊಳಿಸಲು ಸುಪ್ರೀಂಕೋರ್ಟ್​​​​ನಿಂದ ಆದೇಶ ಬಂದಿದೆ. ಇದು ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವುದಲ್ಲದೇ, ಅರಣ್ಯ ಭೂಮಿ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ಆತಂಕ ಉಂಟಾಗಿದೆ.

ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ ಪರಿಸರ, ಅರಣ್ಯ ಸಚಿವಾಲಯವು ಕಸ್ತೂರಿ ರಂಗನ್​ ಅಧ್ಯಕ್ಷತೆಯಲ್ಲಿ ವರದಿ ತಯಾರಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಲ್ಲಿ ಕರ್ನಾಟಕದ ಹತ್ತು ಜಿಲ್ಲೆಗಳ 1,597 ಹಳ್ಳಿಗಳು ಒಳಪಡುತ್ತವೆ. ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ 9 ತಾಲೂಕುಗಳಿಂದ 704 ಹಳ್ಳಿಗಳು ಸೇರ್ಪಡೆಗೊಂಡಿವೆ.

ಇದು ಜಿಲ್ಲೆಯ ಸಂಪೂರ್ಣ ಜನಜೀವನದ ವ್ಯವಸ್ಥೆಯ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುವಂತಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ, ರಸ್ತೆ, ಕೇಂದ್ರ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರ್ಬಂಧಿಸಿದ ಕೈಗಾರಿಕೆಗಳಿಗೆ ಕಡಿವಾಣ, ಆಧುನಿಕ ಪ್ರವಾಸೋದ್ಯಮಕ್ಕೆ ಮಾರಕ, ಟೌನ್‌ಶಿಪ್​ ಮತ್ತು ಬಹುಮಡಿಗೆ ಕಟ್ಟಡಗಳಿಗೆ ನಿರ್ಬಂಧ , ವಾಣಿಜ್ಯಕರಣ ಮುಂತಾದ ನಿರ್ಬಂಧ ಗ್ರಾಮಸ್ಥರ ಜೀವನ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೇ ಅಭಿವೃದ್ಧಿಗೆ ಮಾರಕವಾಗಲಿದೆ.

https://c28674858bc528d6d7e59d1b60670622.safeframe.googlesyndication.com/safeframe/1-0-38/html/container.html

ಯಥಾಸ್ಥಿತಿಯಲ್ಲಿ ವರದಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ : ಈ ಬೆಳವಣಿಗೆ ಬಗ್ಗೆ ಮಾತನಾಡಿದ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಕಸ್ತೂರಿ ರಂಗನ್ ವರದಿಯ ಬಗ್ಗೆ ಮಲೆನಾಡು ಭಾಗದ ಶಾಸಕರುಗಳು ಹಾಗೂ ಸಚಿವರುಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಜೊತೆ ಸೋಮವಾರವಷ್ಟೇ ಸಭೆ ನಡೆಸಿದ್ದೇವೆ. ಇದು ಕೇಂದ್ರ ಸರ್ಕಾರದಿಂದ ಜಾರಿಗೆ ಬಂದ ಯೋಜನೆಯಾಗಿದೆ. ಆದರೂ ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

ಕಸ್ತೂರಿ ರಂಗನ ವರದಿಗೆ ಉತ್ತರ ಕನ್ನಡದಲ್ಲಿ ವಿರೋಧ

ಈಗಿರುವ ಅರಣ್ಯ ಸಮಸ್ಯೆಗಳೇ ಸಾಕಾಗಿದೆ. ಮುಂದಿನ ಪೀಳಿಗೆಗೆ ಅರಣ್ಯ ಸಂಪತ್ತನ್ನು ನಾವು ಇಟ್ಟು ಹೋಗಬೇಕು ನಿಜ ಆದರೆ ಇಲ್ಲಿನ ಜನರು ಸಹ ಬದುಕಬೇಕು. ತೂಗುಗತ್ತಿಯನ್ನು ತಲೆಮೇಲೆ ಇಟ್ಟು ಕೊಂಡು ಜೀವನ ನಡೆಸಲು ಸಾಧ್ಯವಿಲ್ಲ. ಯಥಾಸ್ಥಿತಿಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಜನಜೀವನಕ್ಕೆ ಅಭಿವೃದ್ಧಿಗೆ ಪೂರಕವಾಗುವಂತಹ ಅಂಶಗಳನ್ನು ಈಗಾಗಲೇ ತಿಳಿಸಲಾಗಿದೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮನವರಿಕೆ ಮಾಡುತ್ತೇವೆ ಎಂದು ಹೇಳಿದರು. (ಈಟಿಬಿಕೆ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *