‘ಬಫರ್ ಜೋನ್’ ಎಂದು ಪಶ್ಚಿಮ ಘಟ್ಟ ಪ್ರದೇಶಗಳನ್ನು ಘೋಷಿಸಿರುವುದರ ಮಧ್ಯೆ ಅರಣ್ಯ ಇಲಾಖೆಯಿಂದ ರಹಸ್ಯ ಕರಡು ತಯಾರಿಕೆ!

ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ವಿರುದ್ಧ ಹಲವು ರಾಜಕಾರಣಿಗಳು, ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Representational image

ಬೆಂಗಳೂರು: ಪಶ್ಚಿಮ ಘಟ್ಟಗಳ ಸೂಕ್ಷ್ಮ ಪ್ರದೇಶಗಳ ಘೋಷಣೆಗೆ ಸಂಬಂಧಿಸಿದಂತೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ವಿರುದ್ಧ ಹಲವು ರಾಜಕಾರಣಿಗಳು, ಪರಿಸರವಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿರುವುದರ ಮಧ್ಯೆ, ಅರಣ್ಯಗಳ ಸುತ್ತ 10 ಕಿಮೀ ವ್ಯಾಪ್ತಿಯನ್ನು ಸೂಕ್ಷ್ಮ ಪರಿಸರ ವಲಯ (Buffer Zone) ಎಂದು ಘೋಷಿಸಲು ಸದ್ದಿಲ್ಲದೆ ಕರಡು ಸಿದ್ಧವಾಗುತ್ತಿದೆ. 

ಸುಪ್ರೀಂ ಕೋರ್ಟ್ ನ ಆದೇಶಗಳು ಇದುವರೆಗೆ ಬಹುತೇಕರ ಗಮನಕ್ಕೆ ಬಂದಿಲ್ಲ. ಸುಪ್ರೀಂ ಕೋರ್ಟ್ ನ ಕೆಲವು ಆದೇಶಗಳು ಕಠಿಣವಾಗಿದ್ದು ಅವುಗಳ ಪ್ರಾಯೋಗಿಕ ಜಾರಿ ಸವಾಲಾಗಿರುವುದರಿಂದ ರಾಜ್ಯ ಸರ್ಕಾರಕ್ಕೆ ಇದು ಸರಿಯಾಗುವುದಿಲ್ಲ ಎಂದು ಪರಿಸರವಾದಿಗಳು, ಪರಿಸರ ಸಂರಕ್ಷಣಕಾರರು ವಾದಿಸುತ್ತಿದ್ದಾರೆ. 

https://imasdk.googleapis.com/js/core/bridge3.522.0_en.html#goog_467528318

ಈ ಆದೇಶವನ್ನು ಪ್ರಶ್ನಿಸಿ ಈಗಾಗಲೇ ಕೆಲವು ನಾಗರಿಕರು ಮತ್ತು ಪರಿಸರ ಕಾರ್ಯಕರ್ತರು ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದಾರೆ. 

10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬಫರ್ ಜೋನ್ ಎಂದು ಘೋಷಿಸಿದರೆ ಮಾನವಪರ ಅಭಿವೃದ್ಧಿ ಕೆಲಸಗಳು, ಹಳ್ಳಿಗರಿಗೆ ಬೇಕಾದ ರಸ್ತೆ, ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಇದು ಜನಜೀವನಕ್ಕೆ ಕಷ್ಟವಾಗುತ್ತದೆ. ಅರಣ್ಯ ಪ್ರದೇಶಗಳು, ರಾಷ್ಟ್ರೀಯ ಉದ್ಯಾನವನ, ಅಭಯಾರಣ್ಯಗಳ 1 ಕಿಲೋ ಮೀಟರ್ ವ್ಯಾಪ್ತಿ ಪ್ರದೇಶವನ್ನು ಆರ್ಥಿಕವಾಗಿ ಸೂಕ್ಷ್ಮ ಪ್ರದೇಶ (ESZ) ಅಥವಾ ಬಫರ್ ವಲಯ ಎಂದು ಘೋಷಿಸಿ ನಿಯಮ ಪಾಲಿಸುವ ಕ್ರಮ ಜಾರಿಯಲ್ಲಿದೆ. 10 ಕಿಲೋ ವ್ಯಾಪ್ತಿ ಎಂದು ಹೇಳುವ ಸುಪ್ರೀಂ ಕೋರ್ಟ್ ಆದೇಶ ಜಾರಿ ಕಷ್ಟ ಎಂದು ಪರಿಸರವಾದಿಗಳು ಹೇಳುತ್ತಿದ್ದಾರೆ. 

ಸಂಪನ್ಮೂಲ ಸಂಗ್ರಹದಲ್ಲಿ ಸಮಸ್ಯೆ: ಪರಿಸರ, ಅರಣ್ಯ ಸಚಿವಾಲಯ ಹೊರಡಿಸಿದ ಕರಡಿಗೆ ಸಮಾನವಾಗಿ ಸುಪ್ರೀಂ ಕೋರ್ಟ್ ಆದೇಶವಿದೆ ಎಂಬುದು ಪರಿಸರ ಸಂರಕ್ಷಣಕಾರರ ವಾದವಾಗಿದೆ. ಕಸ್ತೂರಿರಂಗನ್ ವರದಿ ಪಶ್ಚಿಮ ಘಟಕ್ಕೆ ಸಂಬಂಧಿಸಿದ್ದಾಗಿದ್ದರೆ ಸುಪ್ರೀಂ ಕೋರ್ಟ್ ಆದೇಶವು ರಾಜ್ಯದ ಎಲ್ಲಾ ಅರಣ್ಯಗಳಿಗೆ ಸಂಬಂಧಪಟ್ಟದ್ದಾಗಿದೆ. 

ಕರ್ನಾಟಕದಲ್ಲಿ ಅಭಿವೃದ್ಧಿ, ಕೃಷಿ ಮತ್ತು ದೊಡ್ಡ ಮಟ್ಟದಲ್ಲಿ ಏಕ ಬೆಳೆ ವ್ಯವಸಾಯ ಹೆಚ್ಚಾಗಿರುವುದರಿಂದ ಅರಣ್ಯ ಪ್ರದೇಶಗಳು ಕಡಿಮೆಯಾಗಿವೆ ಎಂದು ಅಧ್ಯಯನವೊಂದು ಹೇಳುತ್ತದೆ. ಈ ವರದಿ ಜುಲೈ 19ರಂದು ಬಿಡುಗಡೆಯಾಗಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *