ಕನ್ನಡಕ್ಕೆ ಮೂರು ನ್ಯಾಷನಲ್​ ಅವಾರ್ಡ್​​: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ!

Thumbnail image

ಕನ್ನಡಕ್ಕೆ ಮೂರು ನ್ಯಾಷನಲ್​ ಅವಾರ್ಡ್​​: ಡೊಳ್ಳು, ತಲೆದಂಡ, ನಾದದ ನವನೀತ ಚಿತ್ರಕ್ಕೆ ಪ್ರಶಸ್ತಿಯ ಗರಿ!

ಕನ್ನಡ ಮೂರು ಚಿತ್ರಗಳಿಗೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಬಂದಿವೆ. ಪ್ರಶಸ್ತಿ ಪುರಸ್ಕೃತ ಸಿನಿಮಾದ ನಿರ್ದೇಶಕರು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಇಂದು ಪ್ರಕಟವಾದ 2020ನೇ ಸಾಲಿನ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡದ ಸಿನಿಮಾಗಳು ಕಮಾಲ್​ ಮಾಡಿದ್ದು, ಕನ್ನಡ ಚಿತ್ರರಂಗಕ್ಕೆ ಮೂರು ​ಗಳು ಸಿಕ್ಕಿವೆ. ‘ಡೊಳ್ಳು’, ‘ತಲೆದಂಡ’ ಹಾಗೂ ‘ನಾದದ ನವನೀತ’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ ಮುಡಿಗೇರಿದೆ.

ಸಾಗರ್ ಪುರಾಣಿಕ್ ನಿರ್ದೇಶನ ಮತ್ತು ಪವನ್ ಒಡೆಯರ್ ನಿರ್ಮಾಣದ ‘ಡೊಳ್ಳು’ ಸಿನಿಮಾ ಕನ್ನಡ ಅತ್ಯುತ್ತಮ ಪ್ರಾದೇಶಿಕ ಚಿತ್ರ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ದಿ.ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದ್ದು, ಪ್ರವೀಣ್ ಕೃಪಾಕರ್ ನಿರ್ದೇಶನದ ‘ತಲೆದಂಡ’ ಚಿತ್ರಕ್ಕೆ ಅತ್ಯುತ್ತಮ ಪರಿಸರ ಕಾಳಜಿ ಪ್ರಶಸ್ತಿ ಲಭಿಸಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರಕ್ಕೂ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿ ಚಿತ್ರದ ವಿಭಾಗದಲ್ಲಿ ಪ್ರಶಸ್ತಿ ಸಿಕ್ಕಿದೆ.

ಕನ್ನಡಕ್ಕೆ ಮೂರು ನ್ಯಾಷನಲ್ ಅವಾರ್ಡ್​​

ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾದ ‘ಡೊಳ್ಳು’ ಸಿನಿಮಾದ ನಿರ್ದೇಶಕ ಸಾಗರ್ ಪುರಾಣಿಕ್ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಪ್ರಶಸ್ತಿಗೆ ಬಂದಿರುವುದಕ್ಕೆ ತುಂಬಾ ಖುಷಿಯಾಗುತ್ತಿದೆ. ಒಂದು ಒಳ್ಳೆಯ ತಂಡ ಸೇರಿದರೆ ಆ ತಂಡ ಗುರಿಯನ್ನು ಬೇಕಾದರೂ ತಲುಪಬಹುದು ಎಂದು ‘ಡೊಳ್ಳು’ ಸಿನಿಮಾದಿಂದ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಮುಖ್ಯವಾಗಿ ಚಿತ್ರಕ್ಕೆ ಪವನ್​ ಒಡೆಯರ್​ ಮತ್ತು ಅಪೇಕ್ಷಾ ಪುರೋಹಿತ್ ಅಂತಹ ಉತ್ತಮವಾದ ನಿರ್ಮಾಪಕರು ಸಿಕ್ಕರು. ದೊಡ್ಡ ಹಿಟ್​ ಸಿನಿಮಾಗಳನ್ನು ಕೊಟ್ಟಿರುವ ಪವನ್​ ಒಡೆಯರ್​ ಮತ್ತೊಬ್ಬ ನಿರ್ದೇಶಕನ ಮೇಲೆ ನಂಬಿಕೆ ಇಟ್ಟು, ಪ್ರೋತ್ಸಾಹಿಸಿದರು. ಬರಹಗಾರರು ಸೇರಿ ಇಡೀ ಚಿತ್ರತಂಡ ಒಂದೊಳ್ಳೆ ಸಿನಿಮಾದ ಖುಷಿ ಇದೆ ಎಂದು ಎಂದು ಸಾಗರ್ ಪುರಾಣಿಕ್ ಹೇಳಿದರು.

ದಿ.ಸಂಚಾರಿ ವಿಜಯ್ ಅಭಿನಯದ ಹಾಗೂ ಪ್ರವೀಣ್ ಕೃಪಾಕರ್ ನಿರ್ದೇಶನದ ‘ತಲೆದಂಡ’ ಸಿನಿಮಾಗೆ ರಾಷ್ಟ್ರೀಯ ಪ್ರಶಸ್ತಿ ಬಂದಿರುವ ಬಗ್ಗೆ ನಿರ್ದೇಶಕ ಪ್ರವೀಣ್​ ಕೃಪಾಕರ್ ಖುಷಿಯಾಗಿದ್ದಾರೆ. ನನ್ನ ಪ್ರಥಮ ನಿರ್ದೇಶನದ ಸಿನಿಮಾ. ಪ್ರಶಸ್ತಿಯ ಸಿಗಬೇಕೆಂದು ತಲೆಯಲ್ಲಿಟ್ಟುಕೊಂಡು ಸಿನಿಮಾ ಮಾಡಲಿಲ್ಲ. ಭವಿಷ್ಯದಲ್ಲಿ ಪರಿಸರವನ್ನ ಉಳಿಸುವ ಪ್ರಯತ್ನದಿಂದ ಮನದಲ್ಲಿಟ್ಟುಕೊಂಡು ‘ತಲೆದಂಡ’ ಸಿನಿಮಾ ಮಾಡಿದ್ದು ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸಂಚಾರಿ ವಿಜಯ್ ಅವರನ್ನು ಸ್ಮರಿಸಿರುವ ಅವರು, ಸಂಚಾರಿ ವಿಜಯ್ ನಮ್ಮ ಜೊತೆ ಇಲ್ಲ. ಆದರೆ, ಈ ಸಿನಿಮಾದಲ್ಲಿ ಸಂಚಾರಿ ವಿಜಯ್ ಮಾಡಿರುವ ಪಾತ್ರಕ್ಕೆ ಪ್ರಶಸ್ತಿ ಬರುತ್ತೆ ಅಂತಾ ಅಂದುಕೊಂಡಿದ್ವು. ಆದರೆ, ಈಗ ವಿಜಯ್ ಗೆ ಬರಲಿಲ್ಲ. ಒಟ್ಟಾರೆ ಸಿನಿಮಾಗೆ ಪ್ರಶಸ್ತಿ ಬಂದಿರೋದು ಖುಷಿಯ ವಿಚಾರ ಎಂದು ತಿಳಿಸಿದರು.

ಕನ್ನಡ ಚಿತ್ರಗಳಿಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿರುವುದಕ್ಕೆ ನಟಿ ರಮ್ಯಾ ಟ್ವೀಟ್​ ಮಾಡಿ, ಪ್ರಶಸ್ತಿ ಪುರಷ್ಕೃತರಿಗೆ ಹಾಗೂ ಸಿನಿಮಾ ತಂಡಗಳಿಗೆ ಶುಭ ಹಾರೈಯಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *