ಸಿದ್ದಾಪುರ: ತಾಲೂಕು ಬೇಡ ಜಂಗಮದ ಸಮಾಜದ ವತಿಯಿಂದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿದ ಮನವಿಯನ್ನು ತಹಶಿಲ್ದಾರ ಸಂತೋಷ ಭಂಡಾರಿ ಯವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರಯ್ಯ ಕಾನಳ್ಳಿಮಠ
ಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಆಗ್ರಹಿಸಿ ವಕೀಲರಾದ ಬಿ.ಡಿ ಹಿರೇಮಠ್ ರವರ ನೇತೃತ್ವದಲ್ಲಿ 21 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸತ್ಯ ಪ್ರತಿಪಾದನಾ ಸತ್ಯಾಗ್ರಹ ನಡೆಯುತ್ತಿದೆ. ಇದನ್ನು ತಾಲೂಕು ಬೇಡ ಜಂಗಮ ಸಮುದಾಯವು ಸಹ ಬೆಂಬಲಿಸುತ್ತದೆ. ನಮ್ಮ ಬೇಡಿಕೆ ನ್ಯಾಯಸಮ್ಮತವಾದುದ್ದಾಗಿದೆ. ಬೇಡ ಜಂಗಮ ಸಮುದಾಯವು ಆರ್ಥಿಕವಾಗಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿರುವ ಸಮಾಜವಾಗಿದ್ದು ಹಿಂದಿನಿಂದಲೂ ಬೇಡ ಜಂಗಮ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿತ್ತಾ ಬಂದಿದ್ದೇವೆ. ಇದು ಸಂವಿಧಾನಾತ್ಮಕವಾಗಿ ಸಿಗಬೇಕಾದ ಹಕ್ಕು. ಈ ಹಿಂದೆ ಸರಕಾರದ ಕೆಲವು ಸೂತ್ತೋಲೆಗಳು ಹಾಗೂ ಕರ್ನಾಟಕ ಸರಕಾರ ದ ಮುಖ್ಯ ಗೆಜೆಟಿಯರ್ ಸೂರ್ಯನಾಥ ಕಾಮತ್ ರವರ ವರದಿಯಂತೆ ನಮಗೆ ಜಾತಿಪ್ರಮಾಣ ಪತ್ರ ಸಿಗಬೇಕು. ಬೇಡಜಂಗಮ, ಬುಡ್ಗು ಜಂಗಮ, ಮಾಲ ಜಂಗಮರಾದ ನಮಗೆ ಸರಕಾರದ ಸುತ್ತೋಲೆಗಳನ್ನು ಪರಿಶೀಲಿಸಿ ಸಂವಿಧಾನಾತ್ಮಕವಾಗಿ ಜಾತಿ ಪ್ರಮಾಣಪತ್ರ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಚಂದ್ರಶೇಖರಯ್ಯ ಕಾನಳ್ಳಿಮಠ, ಸಂಗಮೇಶ, ರಾಜಶೇಖರ ಸ್ವಾಮಿ, ವೀರಭದ್ರ ಸ್ವಾಮಿ, ಅರುಣ ತೆಂಗಿನಮಠ, ಶಿವಕುಮಾರ ಹಿರೇಮಠ, ಪುಟ್ಟಯ್ಯ ಅಲಳ್ಳಿಮಠ, ಮಹಾಲಿಂಗಯ್ಯ ಕುಂದುಗೋಳ ಮಠ, ರಾಜು ಕುಂದಗೋಳ್ಳಮಠ, ಸೋಮಶೇಖರ ಸೋಗೆಮಠ, ಶಂವುಲಿಂಗಯ್ಯ ಹಂಚಿನ ಮಠ ಮೊದಲಾದವರು ಉಪಸ್ಥಿತರಿದ್ದರು.