ಲೋಕಲ್ news – ಕಾಗೇರಿ ಜಾತಿಪ್ರೇಮ,ಮಡಿವಾಳರಿಗೆ ಅನ್ಯಾಯ ಆರೋಪ

ಸಿದ್ದಾಪುರ: ತಾಲೂಕು ಬೇಡ ಜಂಗಮದ ಸಮಾಜದ ವತಿಯಿಂದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿದ ಮನವಿಯನ್ನು ತಹಶಿಲ್ದಾರ ಸಂತೋಷ ಭಂಡಾರಿ ಯವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರಯ್ಯ ಕಾನಳ್ಳಿಮಠ
ಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಆಗ್ರಹಿಸಿ ವಕೀಲರಾದ ಬಿ.ಡಿ ಹಿರೇಮಠ್ ರವರ ನೇತೃತ್ವದಲ್ಲಿ 21 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸತ್ಯ ಪ್ರತಿಪಾದನಾ ಸತ್ಯಾಗ್ರಹ ನಡೆಯುತ್ತಿದೆ. ಇದನ್ನು ತಾಲೂಕು ಬೇಡ ಜಂಗಮ ಸಮುದಾಯವು ಸಹ ಬೆಂಬಲಿಸುತ್ತದೆ. ನಮ್ಮ ಬೇಡಿಕೆ ನ್ಯಾಯಸಮ್ಮತವಾದುದ್ದಾಗಿದೆ. ಬೇಡ ಜಂಗಮ ಸಮುದಾಯವು ಆರ್ಥಿಕವಾಗಿ ಶೈಕ್ಷಣಿಕವಾಗಿ ಮತ್ತು ಔದ್ಯೋಗಿಕವಾಗಿ ಹಿಂದುಳಿದಿರುವ ಸಮಾಜವಾಗಿದ್ದು ಹಿಂದಿನಿಂದಲೂ ಬೇಡ ಜಂಗಮ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿತ್ತಾ ಬಂದಿದ್ದೇವೆ. ಇದು ಸಂವಿಧಾನಾತ್ಮಕವಾಗಿ ಸಿಗಬೇಕಾದ ಹಕ್ಕು. ಈ ಹಿಂದೆ ಸರಕಾರದ ಕೆಲವು ಸೂತ್ತೋಲೆಗಳು ಹಾಗೂ ಕರ್ನಾಟಕ ಸರಕಾರ ದ ಮುಖ್ಯ ಗೆಜೆಟಿಯರ್ ಸೂರ್ಯನಾಥ ಕಾಮತ್ ರವರ ವರದಿಯಂತೆ ನಮಗೆ ಜಾತಿಪ್ರಮಾಣ ಪತ್ರ ಸಿಗಬೇಕು. ಬೇಡಜಂಗಮ, ಬುಡ್ಗು ಜಂಗಮ, ಮಾಲ ಜಂಗಮರಾದ ನಮಗೆ ಸರಕಾರದ ಸುತ್ತೋಲೆಗಳನ್ನು ಪರಿಶೀಲಿಸಿ ಸಂವಿಧಾನಾತ್ಮಕವಾಗಿ ಜಾತಿ ಪ್ರಮಾಣಪತ್ರ ನೀಡಬೇಕು ಎಂದು ಅವರು ಆಗ್ರಹಿಸಿದರು.


ಈ ಸಂದರ್ಭದಲ್ಲಿ ಚಂದ್ರಶೇಖರಯ್ಯ ಕಾನಳ್ಳಿಮಠ, ಸಂಗಮೇಶ, ರಾಜಶೇಖರ ಸ್ವಾಮಿ, ವೀರಭದ್ರ ಸ್ವಾಮಿ, ಅರುಣ ತೆಂಗಿನಮಠ, ಶಿವಕುಮಾರ ಹಿರೇಮಠ, ಪುಟ್ಟಯ್ಯ ಅಲಳ್ಳಿಮಠ, ಮಹಾಲಿಂಗಯ್ಯ ಕುಂದುಗೋಳ ಮಠ, ರಾಜು ಕುಂದಗೋಳ್ಳಮಠ, ಸೋಮಶೇಖರ ಸೋಗೆಮಠ, ಶಂವುಲಿಂಗಯ್ಯ ಹಂಚಿನ ಮಠ ಮೊದಲಾದವರು ಉಪಸ್ಥಿತರಿದ್ದರು.

ಸಿದ್ದಾಪುರ:- ಸ್ಥಳೀಯ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಯವರು ಪ್ರಕೃತಿ ವಿಕೋಪದಲ್ಲಿ ಪರಿಹಾರ ನೀಡುವಲ್ಲಿ ನಮ್ಮ ಮಡಿವಾಳ ಜಾತಿಯವರಿಗೆ ತಾರತಮ್ಯ ಮಾಡಿದ್ದಾರೆ. ತಮ್ಮ ಹವ್ಯಕ ಜಾತಿಯವರಿಗೆ ಮುತುವರ್ಜಿ ವಹಿಸಿ ತಕ್ಷಣದಲ್ಲಿ ಪರಿಹಾರ ನೀಡಿದ್ದಾರೆ. ಶಾಸಕರು ಆಯ್ಕೆಯಾಗಲು ನಮ್ಮ ಮಡಿವಾಳರು ಮತ ಹಾಕಿದ್ದಾರೆ. ಆದರೆ ತಮ್ಮ ಜಾತಿಯವರಿಗೆ ಇರುವ ಕಾಳಜಿ ನಮಗೇ ಕಿಲ್ಲಾ ಎಂದು ಡಿಸಿಸಿ ಸದಸ್ಯ ಶ್ರೀನಿವಾಸ್ ಜಿಡ್ಡಿ ಪ್ರಶ್ನಿಸಿದ್ದಾರೆ.
ಅವರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ
ಈ ವರ್ಷ ಸರಕಾರ ಪ್ರಕೃತಿ ವಿಕೋಪ ಪೀಡಿತ ತಾಲೂಕು ಎಂದು ಘೋಷಣೆ ಮಾಡದಿದ್ದರೂ, ಆ ಸಂದರ್ಭದಲ್ಲಿ ಮಳೆ ಹೆಚ್ಚಾಗದಿದ್ದರೂ, ಹಳ್ಳದಲ್ಲಿ ಅತ್ಯಂತ ಕಡಿಮೆ ನೀರು ಹರಿಯುತ್ತಿರುವ ಸಂದರ್ಭದಲ್ಲಿ ತೋಟ ಕಾಲುಸಂಕದಿಂದ ಕಾಲು ಜಾರಿ ಹೊಳೆಯಲ್ಲಿ ಬಿದ್ದು ಮೃತಪಟ್ಟ ತಾರೀಸರ ಗ್ರಾಮದ ಪರಮೇಶ್ವರ ಕೃಷ್ಣಪ್ಪ ಹೆಗಡೆ ಯವರ ಕುಟುಂಬಕ್ಕೆ ಕಾಗೇರಿಯವರು ಮುತವರ್ಜಿ ವಹಿಸಿ ಸರ್ಕಾರದಿಂದ ತಕ್ಷಣ 5 ಲಕ್ಷ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಿಸಿದ್ದಾರೆ.
ಕಾಗೇರಿಯವರು ಸ್ವತಃ ಮುತವರ್ಜಿ ವಹಿಸಿ ಪರಿಹಾರ ಕೊಡಿಸಿದ್ದಾರೆ. ಇದಕ್ಕೆ ನಮ್ಮ ಸ್ವಾಗತವಿದೆ.
ಆದರೆ ಕಳೆದ ವರ್ಷದಲ್ಲಿ ಪ್ರಕೃತಿ ವಿಕೋಪ ತಾಲೂಕು ಎಂದು ಘೋಷಣೆ ಯಾಗಿದ್ದಾಗ ಮುಟ್ಟಳ್ಳಿ ಗ್ರಾಮದ ಕಂಚಿ ಮನೆ ಭಂಡಾರ ಕೇರಿಯ ನಿವಾಸಿ ನಾಗರಾಜ್ ಮಡಿವಾಳರವರ ಮನೆಗೆ ಧರೆ ಕುಸಿತವಾಗಿ ಬಾಗಿಲು ಚೌಕಟ್ಟು ಜಾರಿ ಅವರ ಮಗಳಾದ ಕುಮಾರಿ ದೀಕ್ಷಾ ನಾಗರಾಜ್ ಮಡಿವಾಳ ರವರ ಮೇಲೆ ಬಿದ್ದು ಬಾಲಕಿ ಮೃತಪಟ್ಟಿದ್ದರು. ಮಾನವೀಯತೆಯಿಂದ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಇದೇ ಕಾಳಜಿಯಿಂದ ತಕ್ಷಣದಲ್ಲಿ ಅವಳಿಗೆ ಪ್ರಕೃತಿ ವಿಕೋಪ ಅಡಿಯಲ್ಲಿ ಪರಿಹಾರ ನೀಡಬಹುದಾಗಿತ್ತು. ಆದರೆ ಅವರಿಗೆ ಪರಿಹಾರವಾಗಲಿ, ಮನೆ ಕಟ್ಟಿಕೊಳ್ಳಲು ಅವರ ಮನೆಯವರಿಗಾಗಲಿ ಪ್ರಕೃತಿ ವಿಕೋಪ ದಡಿಯಲ್ಲಿ ಇನ್ನೂ ತನಕ ಪರಿಹಾರ ನೀಡಲಿಲ್ಲ. ಇದರಲ್ಲಿ ಜಾತಿ ರಾಜಕಾರಣ ಎದ್ದು ಕಾಣುತ್ತಿದೆ.




ಶಾಸಕರು ಮುತುವರ್ಜಿ ವಹಿಸಿ ಪುನರ್ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಬೇಕಿತ್ತು. ಅವಳು ಧರೆ ಕುಸಿದಿದ್ದರಿಂದ ಬಾಗಿಲು ಬಡಿದು ಮೃತಪಟ್ಟಿದ್ದಾಳೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಅಧಿಕಾರಿಗಳ ಸಭೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಪರಿಹಾರ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸುವ ಶಾಸಕರ ಮಾನವೀಯತೆ ಸಭೆಯಲ್ಲಿ ಮಾತ್ರವೇ?. ತಮ್ಮ ಜಾತಿಯವರಿಗೆ ಮಾತ್ರವೇ ಮಾನವೀಯತೆ ದೃಷ್ಟಿಯಿಂದ ಪರಿಹಾರ ನೀಡಬೇಕು ಎಂದರ್ಥವೇ?. ಎಂದು ದೂರಿದ ಅವರು ಎಲ್ಲಾ ಜಾತಿಯವರಿಗೂ ಇದೇ ಕಾಳಜಿ ಮಾನವೀಯತೆ ಇರಬೇಕು. ಶಾಸಕರು ಈ ಪ್ರಕರಣವನ್ನು ಪುನರ್ ಪರಿಶೀಲಿಸಿ ಕುಮಾರಿ ದೀಕ್ಷಾ ನಾಗರಾಜ್ ಮಡಿವಾಳ ಕುಟುಂಬಕ್ಕೆ ಪ್ರಕೃತಿ ವಿಕೋಪ ದಡಿಯಲ್ಲಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸುರೇಂದ್ರ ಗೌಡ, ಗಂಗಾಧರ ಮಡಿವಾಳ, ವಿಶ್ವ ಮಡಿವಾಳ, ಮುಂತಾದವರು ಇದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *