ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಏರಿಸಿ ಸರ್ಕಾರದ ಆದೇಶ

Thumbnail image

ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕನಿಷ್ಠ 6 ವರ್ಷ, ಗರಿಷ್ಠ 7 ವರ್ಷದ ಮಿತಿ- ವಯೋಮಿತಿಯನ್ನು ಏರಿಸಿದ ರಾಜ್ಯ ಸರ್ಕಾರ- ನೂತನ ಆದೇಶ

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್.ಟಿ.ಇ ಕಾಯ್ದೆ ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್.ಕೆ.ಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಆಗಿರಬೇಕು. 1ನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ 6ವರ್ಷ ಆಗಿರಬೇಕು, ಗರಿಷ್ಠ 7 ವರ್ಷ ವಯೋಮಿತಿಯನ್ನು ನಿಗದಿಪಡಿಸಿ ನೂತನ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶ ಪ್ರತಿ

ಸರ್ಕಾರದ ಆದೇಶ ಪ್ರತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪೂರ್ವ ಪ್ರಾಥಮಿಕ ( ಎಲ್.ಕೆ.ಜಿ ) ಹಾಗೂ ಪ್ರಾಥಮಿಕ ಶಾಲೆಯ 1ನೇ ತರಗತಿ ಮಕ್ಕಳನ್ನು ದಾಖಲಾತಿ ಮಾಡಲು ಕರ್ನಾಟಕ ಶಿಕ್ಷಣ ಕಾಯ್ದೆ – 1983ರ ನಿಯಮ -20 ರನ್ವಯ ಆಯಾ ಶೈಕ್ಷಣಿಕ ವರ್ಷದ ಜೂ.1 ಕ್ಕೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ ) 3 ವರ್ಷ 10 ತಿಂಗಳು, 1 ನೇ ತರಗತಿಗೆ 5 ವರ್ಷ 10 ತಿಂಗಳು ಎಂಬುದಾಗಿ 2017 ರ ಜ.13ರಲ್ಲಿ ವಯೋಮಿತಿಯನ್ನು ನಿಗದಿಪಡಿಸಿದ್ದರು. ಅದೇ ತಿಂಗಳ 18 ರಂದು ಆದೇಶವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ನಿಗದಿಪಡಿಸಿದ್ದರು.

2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿವೆ. ಇವುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು / ಆದೇಶಗಳನ್ನು ರದ್ದುಪಡಿಸಿ, ಈ ಹೊಸ ಆದೇಶ ನೀಡಲಾಗಿದೆ.

2018 ರ ಮೇ ತಿಂಗಳಲ್ಲಿ ಹೊರಡಿಸಿದ ಆದೇಶದಲ್ಲಿ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಒಂದನೇ ತರಗತಿಗೆ ದಾಖಲಾಗಲು ಮಗುವಿಗೆ ಕನಿಷ್ಠ ವಯೋಮಿತಿಯನ್ನು 05 ವರ್ಷ 05 ತಿಂಗಳು ಹಾಗೂ ಗರಿಷ್ಠ 07 ವರ್ಷಗಳಿಗೆ ನಿಗದಿಪಡಿಸಲಾಗಿದೆ. ತತ್ಸಂಬಂಧಿ ರಾಜ್ಯ ಪತ್ರವನ್ನು ಹಾಗೂ ಸರ್ಕಾರದ ಆದೇಶವನ್ನು 2020 ರ ಮಾ. 20ರಲ್ಲಿ ಶೈಕ್ಷಣಿಕ ವರ್ಷದ ಜೂ.1ರಂದು ಅನ್ವಯವಾಗುವಂತೆ ಎಲ್.ಕೆ.ಜಿ. ದಾಖಲಾತಿ ಹೊಂದಲು 03 ವರ್ಷ 05 ತಿಂಗಳು ಹಾಗೂ ಒಂದನೇ ತರಗತಿಗೆ 05 ವರ್ಷ 05 ತಿಂಗಳು ವಯೋಮಿತಿ ನಿಗದಿಪಡಿಸಲಾಗಿತ್ತು. ಒಟ್ಟಾರೆ ಸಲ್ಲಿಕೆಯಾದ ಎಲ್ಲಾ ಪ್ರಸ್ತಾವನೆಯನ್ನು ಕೂಲಂಕಶವಾಗಿ ಪರಿಶೀಲಿಸಿ ಈ ನೂತನ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *