ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಏರಿಸಿ ಸರ್ಕಾರದ ಆದೇಶ

Thumbnail image

ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕನಿಷ್ಠ 6 ವರ್ಷ, ಗರಿಷ್ಠ 7 ವರ್ಷದ ಮಿತಿ- ವಯೋಮಿತಿಯನ್ನು ಏರಿಸಿದ ರಾಜ್ಯ ಸರ್ಕಾರ- ನೂತನ ಆದೇಶ

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್.ಟಿ.ಇ ಕಾಯ್ದೆ ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್.ಕೆ.ಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಆಗಿರಬೇಕು. 1ನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ 6ವರ್ಷ ಆಗಿರಬೇಕು, ಗರಿಷ್ಠ 7 ವರ್ಷ ವಯೋಮಿತಿಯನ್ನು ನಿಗದಿಪಡಿಸಿ ನೂತನ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶ ಪ್ರತಿ

ಸರ್ಕಾರದ ಆದೇಶ ಪ್ರತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪೂರ್ವ ಪ್ರಾಥಮಿಕ ( ಎಲ್.ಕೆ.ಜಿ ) ಹಾಗೂ ಪ್ರಾಥಮಿಕ ಶಾಲೆಯ 1ನೇ ತರಗತಿ ಮಕ್ಕಳನ್ನು ದಾಖಲಾತಿ ಮಾಡಲು ಕರ್ನಾಟಕ ಶಿಕ್ಷಣ ಕಾಯ್ದೆ – 1983ರ ನಿಯಮ -20 ರನ್ವಯ ಆಯಾ ಶೈಕ್ಷಣಿಕ ವರ್ಷದ ಜೂ.1 ಕ್ಕೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ ) 3 ವರ್ಷ 10 ತಿಂಗಳು, 1 ನೇ ತರಗತಿಗೆ 5 ವರ್ಷ 10 ತಿಂಗಳು ಎಂಬುದಾಗಿ 2017 ರ ಜ.13ರಲ್ಲಿ ವಯೋಮಿತಿಯನ್ನು ನಿಗದಿಪಡಿಸಿದ್ದರು. ಅದೇ ತಿಂಗಳ 18 ರಂದು ಆದೇಶವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ನಿಗದಿಪಡಿಸಿದ್ದರು.

2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿವೆ. ಇವುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು / ಆದೇಶಗಳನ್ನು ರದ್ದುಪಡಿಸಿ, ಈ ಹೊಸ ಆದೇಶ ನೀಡಲಾಗಿದೆ.

2018 ರ ಮೇ ತಿಂಗಳಲ್ಲಿ ಹೊರಡಿಸಿದ ಆದೇಶದಲ್ಲಿ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಒಂದನೇ ತರಗತಿಗೆ ದಾಖಲಾಗಲು ಮಗುವಿಗೆ ಕನಿಷ್ಠ ವಯೋಮಿತಿಯನ್ನು 05 ವರ್ಷ 05 ತಿಂಗಳು ಹಾಗೂ ಗರಿಷ್ಠ 07 ವರ್ಷಗಳಿಗೆ ನಿಗದಿಪಡಿಸಲಾಗಿದೆ. ತತ್ಸಂಬಂಧಿ ರಾಜ್ಯ ಪತ್ರವನ್ನು ಹಾಗೂ ಸರ್ಕಾರದ ಆದೇಶವನ್ನು 2020 ರ ಮಾ. 20ರಲ್ಲಿ ಶೈಕ್ಷಣಿಕ ವರ್ಷದ ಜೂ.1ರಂದು ಅನ್ವಯವಾಗುವಂತೆ ಎಲ್.ಕೆ.ಜಿ. ದಾಖಲಾತಿ ಹೊಂದಲು 03 ವರ್ಷ 05 ತಿಂಗಳು ಹಾಗೂ ಒಂದನೇ ತರಗತಿಗೆ 05 ವರ್ಷ 05 ತಿಂಗಳು ವಯೋಮಿತಿ ನಿಗದಿಪಡಿಸಲಾಗಿತ್ತು. ಒಟ್ಟಾರೆ ಸಲ್ಲಿಕೆಯಾದ ಎಲ್ಲಾ ಪ್ರಸ್ತಾವನೆಯನ್ನು ಕೂಲಂಕಶವಾಗಿ ಪರಿಶೀಲಿಸಿ ಈ ನೂತನ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *