ಬಡವರ ಮನೆ ಮಕ್ಕಳ ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ!: ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು,‌ಈ ಎರಡು ಬಾರಿ ಆಪರೇಷನ್ ಕಮಲವೆಂಬ ಅನೈತಿಕ ಮಾರ್ಗದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದೆ, ನಡುರಸ್ತೆಗಳಲ್ಲಿ ಅಮಾಯಕರ ನೆತ್ತರು ಹರಿಸಿ ಪಾಪದ ಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಹೊಂಚು ಹಾಕಿದೆ ಎಂದರು.

ಹಿಂದೂ ಯುವಕರ ಸಾವುಗಳಾದರೆ ರಾಜಕೀಯ ಫಸಲು ಚೆನ್ನಾಗಿ ಬರುತ್ತದೆ ಎಂದು ಬಿಜೆಪಿ ನಂಬಿದೆ. ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ರೀತಿಯ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವವೇ ಅದಕ್ಕೆ ಮತ ಗಳಿಸುವವ ಮಾರ್ಗ. ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳಲು ಬಿಜೆಪಿಗೆ ಯೋಗ್ಯತೆ ಇಲ್ಲ. ಹೆಚ್ಚೆಚ್ಚು ಯುವಕರ ಕೊಲೆಗಳು ನಡೆದಷ್ಟೂ ಅವರಿಗೆ ಅನುಕೂಲ. ಆದ್ದರಿಂದಲೇ ಕೊಲೆಯಾದಾಗ ಬಿಜೆಪಿ ನಾಯಕರು ʼಕೃತಕ ಸಂತಾಪʼ ಸೂಚಿಸುತ್ತಾರೆ. ಸಾವಿನ ಮನೆಗಳ ಮುಂದೆ ಪರೇಡ್ ಮಾಡುತ್ತಾರೆ. ಆ ಯುವಕನ ತಾಯಿ ರೋದನೆ ನೋಡಿ ನೋವಾಗಿದೆ ಎಂದು ಸಿಎಂ ಹೇಳಿದ್ದಾರೆ. ವಾರದ ಹಿಂದೆಯೇ ಎಚ್ಚೆತ್ತುಕೊಂಡಿದ್ದಿದ್ದರೆ ಅವರಿಗೆ ಆ ತಾಯಿಯ ರೋದನೆ ತಪ್ಪಿಸಲು ಸಾಧ್ಯವಿತ್ತು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಉತ್ತರ ಪ್ರದೇಶದಲ್ಲಿಯೂ ಇದೇ ರೀತಿ ನರಮೇಧ ನಡೆಸಿ ಬಿಜೆಪಿ ಅಧಿಕಾರಕ್ಕೆ ಬಂತು. ಮುಜಾಫರ್ ನಗರದಲ್ಲಿ ದೊಡ್ಡ ಹಿಂಸಾಕಾಂಡವೇ ನಡೆಯಿತು. ನೂರಾರು ಕುಟುಂಬಗಳು ಬೀದಿಗೆ ಬಿದ್ದವು. ಹೋಗಲಿ, ಆ ಹಿಂಸಾಚಾಋ ಯಾಕೆ ನಡೆಯಿತು ಎಂಬ ಬಗ್ಗೆ ತನಿಖೆಯಾದರೂ ನಡೆಯಿತಾ? ಅದರ ಹಿಂದೆ ಯಾರಿದ್ದರು? ಸತ್ಯ ಹೊರಗೆ ಬಂತಾ? ಇಲ್ಲ. ಆದರೆ, ಬಣ್ಣ ಬಣ್ಣದ ಜಾಹೀರಾತುಗಳಿಂದ ಜನರಿಗೆ ಮಂಕುಬೂದಿ ಎರಚುತ್ತಿದೆ ಎಂದು ಅವರು ಹೇಳಿದರು.

ನಾನು ಕೂಡ ಎರಡು ಸಲ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ. ಒಮ್ಮೆಯೇ ಇಂಥ ಕೊಲೆ ಆಯಿತಾ? ಯಾವುದೇ ಪಕ್ಷದ ಕಾರ್ಯಕರ್ತನ ಪ್ರಾಣ ಹೋಯಿತಾ? ಸಾವಿನ ಮನೆಯಲ್ಲಿ ಸಂಭ್ರಮ ಮಾಡುವ ಕೆಲಸ ನಾನು ಮಾಡಲಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈ ಹಿಂಸಾಕಾಂಡವನ್ನು ಹತ್ತಿಕ್ಕಲು ಕೂಡಲೇ ಸರಕಾರ ಮುಂದಾಗಬೇಕು. ಸರ್ವಧರ್ಮ ಗುರುಗಳ ಸಭೆಯನ್ನು ಕರೆದು ಅವರ ಮಾರ್ಗದರ್ಶನದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ನಾಲ್ಕೈದು ತಿಂಗಳ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಆದರೆ ಸರಕಾರಕ್ಕೆ ಶಾಂತಿ ನೆಲೆಸುವುದು ಬೇಕಿಲ್ಲ ಎಂದು ಅವರು ಕಿಡಿಕಾರಿದರು.

ತೇಜಸ್ವಿ ಸೂರ್ಯ ಕೊಡುಗೆ ಏನು?

ಪ್ರತಿಯೊಬ್ಬರಿಗೂ ಗನ್‌ ಮ್ಯಾನ್ ನೀಡಲು ಸಾಧ್ಯವೇ ಎಂದು ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ ಅವರು, ಬೆಂಗಳೂರು ನಗರಕ್ಕೆ ಹಾಗೂ ರಾಜ್ಯಕ್ಕೆ ತೇಜಸ್ವಿ ಸೂರ್ಯ ಅವರ ಕೊಡುಗೆ ಏನು ಎಂಬುದು ಗೊತ್ತಿಲ್ಲ. ಜನರು ಅಂಥವರಿಗೆ ಮತ ಕೊಟ್ಟು ಗೆಲ್ಲಿಸಿ ಅಂಥವರಿಂದ ಇಂಥ ಮಾತುಗಳನ್ನು ಕೇಳಬೇಕಾಗಿ ಬಂದಿದೆ. ಜನರಿಗೆ ಇದೆಲ್ಲವನ್ನು ಸಹಿಸಿಕೊಳ್ಳದೇ ಬೇರೆ ವಿಧಿ ಇಲ್ಲ. ಇಲ್ಲಿ ಯಾರಿಗೂ ಗನ್ʼಮ್ಯಾನ್ ಬೇಕಿಲ್ಲ. ಆದರೆ ನೆಮ್ಮದಿಯಾಗಿ ಬದುಕಲು ನೆಮ್ಮದಿಯ ವಾತಾವರಣ ಬೇಕಷ್ಟೇ. ಸರಕಾರ ಅಷ್ಟು ಮಾಡಿದರೆ ಸಾಕು ಎಂದರು.

ವರ್ಗಾವಣೆಗೂ ಪೇಮೆಂಟ್ ಕೋಟಾ:

ಅಧಿಕಾರಿಗಳ ವರ್ಗಾವರ್ಗಿಯಲ್ಲಿ ಹಣದ ಹೊಳೆಯೇ ಹರಿಯುತ್ತಿದೆ ಎಂದು ದೂರಿದ ಮಾಜಿ ಮುಖ್ಯಮಂತ್ರಿಗಳು; ಒಬ್ಬ ಸರ್ಕಲ್ ಇನ್ಸ್ಪೆಕ್ಟರ್ 75 ಲಕ್ಷದಿಂದ 1 ಕೋಟಿ ರೂ.ವರೆಗೂ ಲಂಚ ನೀಡಿ ಹುದ್ದೆಗೆ ಬರುತ್ತಾರೆ. ಹಾಗೆ ಬರುವ ಅಧಿಕಾರಿಯಿಂದ ಉತ್ತಮ ಕರ್ತವ್ಯ ನಿರ್ವಹಣೆ ನಿರೀಕ್ಷಿಸಲು ಸಾಧ್ಯವೇ? ನೀವು ಸರಿಯಾಗಿ ಆಡಳಿತ ಮಾಡಿದ್ದರೆ ಯಾಕೆ ಸಾವುಗಳು ಸಂಭವಿಸುತ್ತಿದ್ದವು? ಎಂದು ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ನಾನು ಮುಖ್ಯಮಂತ್ರಿ ಆಗಿದ್ದಾಗ ʼಹಣಕ್ಕಾಗಿ ಹುದ್ದೆʼ ಎನ್ನುವುದು ಇರಲಿಲ್ಲ. ನನ್ನ ಸರಕಾರ ತೆಗೆದು ಬಿಜೆಪಿ ಸರಕಾರ ಬಂದ ಕೂಡಲೇ ಆ ಪರಿಕಲ್ಪನೆ ಹುಟ್ಟಿಕೊಂಡಿತು. ಯಲಹಂಕದ ತಹಸೀಲ್ದಾರ್ ಹುದ್ದೆ ಪೋಸ್ಟಿಂಗ್ ಕೇಳಿಕೊಂಡು ಒಬ್ಬ ಅಧಿಕಾರಿ 1.5 ಕೋಟಿ ರೂ. ಆಫರ್ ಕೊಟ್ಟಿದ್ದ. ಆಮೇಲೆ ಬಿಡಿಎ ಆಯುಕ್ತರಾಗಲು ಅಧಿಕಾರಿ ಮಹಾಶಯನೊಬ್ಬ 15 ಕೋಟಿ ರೂ. ಆಮಿಷ ಒಡ್ಡಿದ್ದರು. ಅವರೆಲ್ಲರಿಗೂ ಚಳಿ ಬಿಡಿಸಿ ಕಳಿಸಿದ್ದೆ. ಆಮೇಲೆ ಯಡಿಯೂರಪ್ಪ ಮುಖ್ಯಮಂತ್ರಿ ಬಂದ ಕೂಡಲೇ ಅಧಿಕಾರಿಗಳಿಬ್ಬರು ಅದೇ ಜಾಗಳಲ್ಲಿ ಬಂದು ಕೂತಿದ್ದರು ಎಂದು ಮಾಹಿತಿ ಬಿಚ್ಚಿಟ್ಟರು ಕುಮಾರಸ್ವಾಮಿ ಅವರು.

ಮಾಜಿ ಸಚಿವ ಸಾ.ರಾ.ಮಹೇಶ್, ಶಾಸಕ ಅಶ್ವಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. (sudditv)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *