ಸತ್ಯ ಹೇಳುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ -ಅಮೀನ್‌ ಮಟ್ಟು

ಸತ್ಯ ಹೇಳುವುದು,ಸತ್ಯ ಶೋಧಿಸುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ ಎಂದು ಪ್ರತಿಪಾದಿಸಿರುವ ಖ್ಯಾತ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಇಂದು ಮಾಧ್ಯಮಗಳ ಆದ್ಯತೆ ಬದಲಾಗಿರುವುದರಿಂದ ಮಾಧ್ಯಮಗಳ ಮೇಲಿನ ಭರವಸೆ ಕುಸಿಯುತ್ತಿದೆ ಎಂದರು.

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಉತ್ತರ ಕನ್ನಡ ಜಿಲ್ಲಾ ಘಟಕ ನೀಡುವ ಹರ್ಮನ್‌ ಮೊಗ್ಲಿಂಗ್‌ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ಮತಪ್ರಚಾರಕ್ಕಾಗಿ ಬಂದಿದ್ದ ಹರ್ಮನ್‌ ಮೊಗ್ಲಿಂಗ್‌ ಕನ್ನಡದಲ್ಲಿ ಮೊದಲ ಪತ್ರಿಕೆ ಪ್ರಾರಂಭಿಸಬೇಕಾಯಿತು.ಹಲವು ವಿಚಾರಗಳನ್ನು ತಿಳಿಸಿದವರು,ಸಂಶೋಧಿಸಿದವರು ಹೊರಗಿನವರು ನಮ್ಮ ವಿದ್ಯೆ ನಮಗೆ ಸತ್ಯ ಹೇಳುವ ಧೈರ್ಯ ಕೊಡದಿದ್ದರೆ ಹೇಗೆ? ಪಠ್ಯಕ್ರಮದ ಅಸಂಬಧ್ಧತೆ ನೋಡಿದ್ದೀರಿ ಶಿಕ್ಷಕರು ಗಾಂಧಿ,ಅಂಬೇಡ್ಕರ್‌,ಕುವೆಂಪು, ಬಸವಣ್ಣನವರ ಬಗ್ಗೆ ವಾಸ್ತವ ಸತ್ಯ ಹೇಳುವಂತಾದರೆ ಪಠ್ಯ ರಾಜಕೀಯದ ಬಗ್ಗೆ ಮಾತನಾಡುವ ಅನಿವಾರ್ಯತೆ ಉದ್ಭವಿಸುವುದಿಲ್ಲ ಎಂದು ಶಿಕ್ಷಕರ ಜವಾಬ್ಧಾರಿ ನೆನಪಿಸಿದರು.

ಪ್ರಶಸ್ತಿಪ್ರದಾನ,ಸನ್ಮಾನ,ಅಭಿನಂದನಾ ಕಾರ್ಯಕ್ರಮವನ್ನು ಪುಸ್ತಕ ವಿತರಿಸುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದ ಅಂಕಣಕಾರ ಡಿ. ರಾಮಪ್ಪ ಮಾತನಾಡಿ ಕನ್ನಡದ ಸಾಕ್ಷಿಪ್ರಜ್ಞೆಗಳಾಗಿರುವ ದಿನೇಶ್‌ ಅಮೀನ್‌ ಮಟ್ಟು, ದೇವನೂರು ಮಹಾದೇವರಂಥವರು ಈಗ ಹೆಚ್ಚು ಕಾಡುತಿದ್ದಾರೆ. ಇಂದಿನ ಭಾರತದ ಪ್ರಕ್ಷುಬ್ದತೆಗೂ ಇವರಲ್ಲೇ ಪರಿಹಾರವಿದೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟುಗಳ ಸಬಲೀಕರಣಕ್ಕೆ ಶ್ರಮಿಸಿದ ಡಾ.ಮಹೇಂದ್ರ ಕುಮಾರ್‌, ಕಾರವಾರ ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಹೇಮಂತ ರಾಮಡಗಿ, ಡಿ.ಎಸ್.ಎಸ್.‌ ಪ್ರಮುಖ,ನಿವೃತ್ತ ಶಿಕ್ಷಕ ಶಂಕರ್‌ ಸಿ.ಎ. ರನ್ನು ಸನ್ಮಾನಿಸಿ,ಗೌರವಿಸಲಾಯಿತು.

ಯುವ ಪ್ರತಿಭೆಗಳಾದ ಲೋಹಿತ್‌ ನಾಯಕ,ಪ್ರಥ್ವಿ ಪಾಟೀಲ್‌ ಮತ್ತು ಗಣೇಶ್‌ ನಾಯ್ಕ ರನ್ನು ಸನ್ಮಾನಿಸಿ,ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆ.ಜೆ.ಡಬ್ಲೂ ರಾಜ್ಯಾಧ್ಯಕ್ಷ ಬಿ.ನಾರಾಯಣ ಮಾತನಾಡಿ ಸಮಾಜದಲ್ಲಿ ಪತ್ರಕರ್ತನ ಪ್ರಾಮುಖ್ಯತೆ ಮತ್ತು ಮಾಧ್ಯಮ ಕ್ಷೇತ್ರದ ಶೋಷಣೆಗಳ ಬಗ್ಗೆ ವಿವರವಾಗಿ ಮಾತನಾಡಿ ಮಾಧ್ಯಮ,ಪತ್ರಕರ್ತರಿಂದ ಎಲ್ಲವನ್ನೂ ನಿರೀಕ್ಷಿಸುವ ಸಮಾಜ ಪತ್ರಕರ್ತರ ಹಿತಾಸಕ್ತಿಗೆ ಕೊಟ್ಟ ಕೊಡುಗೆ ಏನು ಎಂದು ಪ್ರಶ್ನಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *