ಸತ್ಯ ಹೇಳುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ -ಅಮೀನ್‌ ಮಟ್ಟು

ಸತ್ಯ ಹೇಳುವುದು,ಸತ್ಯ ಶೋಧಿಸುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ ಎಂದು ಪ್ರತಿಪಾದಿಸಿರುವ ಖ್ಯಾತ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಇಂದು ಮಾಧ್ಯಮಗಳ ಆದ್ಯತೆ ಬದಲಾಗಿರುವುದರಿಂದ ಮಾಧ್ಯಮಗಳ ಮೇಲಿನ ಭರವಸೆ ಕುಸಿಯುತ್ತಿದೆ ಎಂದರು.

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಉತ್ತರ ಕನ್ನಡ ಜಿಲ್ಲಾ ಘಟಕ ನೀಡುವ ಹರ್ಮನ್‌ ಮೊಗ್ಲಿಂಗ್‌ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ಮತಪ್ರಚಾರಕ್ಕಾಗಿ ಬಂದಿದ್ದ ಹರ್ಮನ್‌ ಮೊಗ್ಲಿಂಗ್‌ ಕನ್ನಡದಲ್ಲಿ ಮೊದಲ ಪತ್ರಿಕೆ ಪ್ರಾರಂಭಿಸಬೇಕಾಯಿತು.ಹಲವು ವಿಚಾರಗಳನ್ನು ತಿಳಿಸಿದವರು,ಸಂಶೋಧಿಸಿದವರು ಹೊರಗಿನವರು ನಮ್ಮ ವಿದ್ಯೆ ನಮಗೆ ಸತ್ಯ ಹೇಳುವ ಧೈರ್ಯ ಕೊಡದಿದ್ದರೆ ಹೇಗೆ? ಪಠ್ಯಕ್ರಮದ ಅಸಂಬಧ್ಧತೆ ನೋಡಿದ್ದೀರಿ ಶಿಕ್ಷಕರು ಗಾಂಧಿ,ಅಂಬೇಡ್ಕರ್‌,ಕುವೆಂಪು, ಬಸವಣ್ಣನವರ ಬಗ್ಗೆ ವಾಸ್ತವ ಸತ್ಯ ಹೇಳುವಂತಾದರೆ ಪಠ್ಯ ರಾಜಕೀಯದ ಬಗ್ಗೆ ಮಾತನಾಡುವ ಅನಿವಾರ್ಯತೆ ಉದ್ಭವಿಸುವುದಿಲ್ಲ ಎಂದು ಶಿಕ್ಷಕರ ಜವಾಬ್ಧಾರಿ ನೆನಪಿಸಿದರು.

ಪ್ರಶಸ್ತಿಪ್ರದಾನ,ಸನ್ಮಾನ,ಅಭಿನಂದನಾ ಕಾರ್ಯಕ್ರಮವನ್ನು ಪುಸ್ತಕ ವಿತರಿಸುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದ ಅಂಕಣಕಾರ ಡಿ. ರಾಮಪ್ಪ ಮಾತನಾಡಿ ಕನ್ನಡದ ಸಾಕ್ಷಿಪ್ರಜ್ಞೆಗಳಾಗಿರುವ ದಿನೇಶ್‌ ಅಮೀನ್‌ ಮಟ್ಟು, ದೇವನೂರು ಮಹಾದೇವರಂಥವರು ಈಗ ಹೆಚ್ಚು ಕಾಡುತಿದ್ದಾರೆ. ಇಂದಿನ ಭಾರತದ ಪ್ರಕ್ಷುಬ್ದತೆಗೂ ಇವರಲ್ಲೇ ಪರಿಹಾರವಿದೆ ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟುಗಳ ಸಬಲೀಕರಣಕ್ಕೆ ಶ್ರಮಿಸಿದ ಡಾ.ಮಹೇಂದ್ರ ಕುಮಾರ್‌, ಕಾರವಾರ ಆಕಾಶವಾಣಿ ಕೇಂದ್ರದ ಮುಖ್ಯಸ್ಥ ಹೇಮಂತ ರಾಮಡಗಿ, ಡಿ.ಎಸ್.ಎಸ್.‌ ಪ್ರಮುಖ,ನಿವೃತ್ತ ಶಿಕ್ಷಕ ಶಂಕರ್‌ ಸಿ.ಎ. ರನ್ನು ಸನ್ಮಾನಿಸಿ,ಗೌರವಿಸಲಾಯಿತು.

ಯುವ ಪ್ರತಿಭೆಗಳಾದ ಲೋಹಿತ್‌ ನಾಯಕ,ಪ್ರಥ್ವಿ ಪಾಟೀಲ್‌ ಮತ್ತು ಗಣೇಶ್‌ ನಾಯ್ಕ ರನ್ನು ಸನ್ಮಾನಿಸಿ,ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆ.ಜೆ.ಡಬ್ಲೂ ರಾಜ್ಯಾಧ್ಯಕ್ಷ ಬಿ.ನಾರಾಯಣ ಮಾತನಾಡಿ ಸಮಾಜದಲ್ಲಿ ಪತ್ರಕರ್ತನ ಪ್ರಾಮುಖ್ಯತೆ ಮತ್ತು ಮಾಧ್ಯಮ ಕ್ಷೇತ್ರದ ಶೋಷಣೆಗಳ ಬಗ್ಗೆ ವಿವರವಾಗಿ ಮಾತನಾಡಿ ಮಾಧ್ಯಮ,ಪತ್ರಕರ್ತರಿಂದ ಎಲ್ಲವನ್ನೂ ನಿರೀಕ್ಷಿಸುವ ಸಮಾಜ ಪತ್ರಕರ್ತರ ಹಿತಾಸಕ್ತಿಗೆ ಕೊಟ್ಟ ಕೊಡುಗೆ ಏನು ಎಂದು ಪ್ರಶ್ನಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *