ಭಟ್ಕಳದಲ್ಲಿ ಮನೆ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರು ಸಾವು

ಇಂದು ಬೆಳಗ್ಗೆ 4 ಘಂಟೆಯ ಸುಮಾರಿಗೆ ದುರ್ಘಟನೆ ನಡೆದಿದೆ. ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯಕ್ಕೂ ಅಡಚಣೆಯಾಯಿತು.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇಘ ಸ್ಫೋಟದಿಂದ ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದ ತಾಲೂಕಿನ ಹಲವು ಭಾಗದಲ್ಲಿ ನೀರು ತುಂಬಿ ಅಪಾರ ಪ್ರಮಾಣದ ಹಾನಿ ಸಂಭವಿಸಿದರೆ, ಇನ್ನೊಂದೆಡೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

ಒಂದೇ ಕುಟುಂಬದ ನಾಲ್ವರು ಸಾವು

ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಕಳೆದ ರಾತ್ರಿಯಿಂದ ಭಟ್ಕಳದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಇಂದು ಬೆಳಗಿನ ಜಾವ ಮುಟ್ಟಳ್ಳಿ ಗ್ರಾಮದಲ್ಲಿನ ಮನೆ ಕುಸಿಯಿತು. ಮನೆಯಲ್ಲಿದ್ದ ಲಕ್ಷ್ಮಿ ನಾಯ್ಕ (48), ಮಗಳು ಲಕ್ಷ್ಮಿ (33), ಮಗ ಅನಂತ ನಾರಾಯಣ ನಾಯ್ಕ (32) ಹಾಗೂ ನಿನ್ನೆ ರಾತ್ರಿಯಷ್ಟೇ ತಂಗಲು ಬಂದಿದ್ದ ಸಂಬಂಧಿ ಪ್ರವೀಣ್ (20) ಸಾವಿಗೀಡಾಗಿದ್ದಾರೆ. ಬೆಳಗ್ಗೆ 4 ಘಂಟೆಯ ವೇಳೆ ಘಟನೆ ನಡೆದಿದೆ. ಧಾರಾಕಾರಿ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯ ತಡವಾಗಿದೆ. ಬೆಳಿಗ್ಗೆ 8 ಘಂಟೆಯ ಸುಮಾರಿಗೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದು, ಮಧ್ಯಾಹ್ನ ಒಂದು ಘಂಟೆಗೆ ನಾಲ್ಕು ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಯಿತು.

ಭಟ್ಕಳದಲ್ಲಿ ಮನೆ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರು ಸಾವು

ಇನ್ನೊಂದೆಡೆ, ನೆರೆಯಿಂದ ಜಿಲ್ಲೆಯಲ್ಲಿ ಕೋಟ್ಯಂತರ ರೂಪಾಯಿ ಹಾನಿ ಸಂಭವಿಸಿದೆ ಎನ್ನಲಾಗಿದೆ. ತಾಲೂಕಿನ ಮುಟ್ಟಳ್ಳಿ, ಮುಂಡಳ್ಳಿ, ಚೌಥಿನಿ, ಶಿರಾಲಿ, ಪಟ್ಟಣದ ಸಂಶುದ್ದೀನ್ ವೃತ್ತ ಸೇರಿ ಅರ್ಧಕ್ಕಿಂತ ಹೆಚ್ಚಿನ ಭಟ್ಕಳದ ಪ್ರದೇಶಗಳು ನೆರೆಗೆ ತುತ್ತಾಗಿದೆ. ಚೌಥಿನಿ ಹಾಗೂ ವೆಂಕಟಾಪುರ ನದಿ ಉಕ್ಕಿ ಹರಿದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಹಲವರು ನೆರೆಗೆ ಸಿಲುಕಿ ಅಪಾಯಕ್ಕೊಳಗಾಗಿದ್ದರು. ವಿಷಯ ತಿಳಿದ ತಕ್ಷಣ ತಾಲೂಕು ಆಡಳಿತ, ಎನ್ ಡಿ ಆರ್ ಎಫ್ ತಂಡ ಅಪಾಯಕ್ಕೆ ಸಿಲುಕಿದವರನ್ನು ರಕ್ಷಣೆ ಮಾಡುವ ಕಾರ್ಯ ಮಾಡಿತ್ತು. ಬೋಟ್​​ಗಳ ಮೂಲಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಬರುವ ಕೆಲಸವನ್ನು ರಕ್ಷಣಾ ಸಿಬ್ಬಂದಿ ಮಾಡಿದರು.

ರಾತ್ರಿ ಹನ್ನೆರಡು ಘಂಟೆಯ ನಂತರ ಜೋರಾಗಿ ಮಳೆಯಾಗಿದ್ದು ಮೂರು ಘಂಟೆ ವೇಳೆಗೆ ಭಟ್ಕಳದಲ್ಲಿ ನೀರಿನ ಮಟ್ಟ ಏರತೊಡಗಿದೆ. ರಸ್ತೆಯಲ್ಲಿ ನಿಲ್ಲಿಸಿದ್ದ ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರೆ ಇತ್ತ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ನೆರೆ ಕಡಿಮೆಯಾಗುವ ಮೂಲಕ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *