ಮಳೆ ಅವಾಂತರ..ಅಲ್ಲಲ್ಲಿ ಗುಡ್ಡ ಕುಸಿತ

Thumbnail image

ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ರಾಜ್ಯ ಹೆದ್ದಾರಿ ಸಂಚಾರ ಬಂದ್

ಕಾರವಾರದ ಅಣಶಿ ಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಪರಿಣಾಮ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಅಣಶಿ ಘಟ್ಟದಲ್ಲಿ ಭಾೀರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಇದರ ಪರಿಣಾಮ ಕಾರವಾರದ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಕಳೆದ ನಾಲ್ಕು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿತವಾಗಿದೆ. ಕಳೆದ ತಿಂಗಳು ಗುಡ್ಡ ಕುಸಿತವಾಗಿದ್ದರಿಂದ ವಾರಕ್ಕೂ ಹೆಚ್ಚು ಕಾಲ ಈ ರಾಜ್ಯ ಹೆದ್ದಾರಿ ಬಂದ್​ ಮಾಡಲಾಗಿತ್ತು.

ಬಳಿಕ ಹಗಲಿನ ವೇಳೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇದೀಗ ಮತ್ತೆ ಅದೇ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದ್ದು, ಜೋಯಿಡಾ, ದಾಂಡೇಲಿ ಹಾಗೂ ಕಾರವಾರಕ್ಕೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ.

ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ

ತಕ್ಷಣ ಕಾರ್ಯ ಪ್ರವೃತ್ತವಾದ ಸ್ಥಳೀಯ ಆಡಳಿತ ಜೆಸಿಬಿ ಮೂಲಕ ಮಣ್ಣನ್ನು ತೆರವು ಮಾಡುತ್ತಿದೆ. ಕಂದಾಯ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Thumbnail image

ಹೊನ್ನಾವರದ ಅಪ್ಸರಕೊಂಡದಲ್ಲಿ ಗುಡ್ಡ ಕುಸಿತದ ಭೀತಿ: ಕಾಳಜಿ ಕೇಂದ್ರಕ್ಕೆ ಜನರ ಸ್ಥಳಾಂತರ

ವಾರದ ಹಿಂದೆ ಭಟ್ಕಳ ತಾಲೂಕಿನಲ್ಲಿ ಸುರಿದ ರಣಭೀಕರ ಮಳೆಗೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ಆದರೆ ಈ ಕರಾಳ ನೆನಪು ಮಾಸುವ ಮುನ್ನವೇ ಇದೀಗ ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ಮತ್ತೆ ಗುಡ್ಡ ಬಾಯ್ತೆರೆದುಕೊಂಡಿದೆ. ಇದೀಗ ಸ್ಥಳೀಯರಲ್ಲಿ ಗುಡ್ಡ ಕುಸಿತ ಭೀತಿ ಕಾಡತೊಡಗಿದೆ.

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಹೊನ್ನಾವರದ ಕೆಳಗಿನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಸರಕೊಂಡದಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಗುಡ್ಡ ಕುಸಿತದ ಭೀತಿ ಎದುರಿಸಿದ್ದ ಜನಕ್ಕೆ ಇದೀಗ ಮತ್ತೊಂದು ಭೀತಿ ಎದುರಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಕಾಳಜಿ ಕೇಂದ್ರದಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗುಡ್ಡ ಪ್ರದೇಶದ ಕೆಳಗೆ 60ಕ್ಕೂ ಹೆಚ್ಚಿನ ಕುಟುಂಬಗಳು ವಾಸ ಮಾಡುತ್ತಿವೆ. ಈಗಾಗಲೇ ಬಹುತೇಕ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಂತರಿಸಲಾಗಿದೆ. ಗುಡ್ಡದ ಮೇಲೆ ಬೃಹದಾಕಾರದ ಬಂಡೆಗಳಿದ್ದು, ಸ್ವಲ್ಪ ಎಚ್ಚರ ತಪ್ಪಿದ್ರೂ ಅದರ ಕೆಳಗಿರುವ ನಿವಾಸಿಗಳಿಗೆ ಅಪಾಯ ತಪ್ಪಿದ್ದಲ್ಲ. ಅಪ್ಸರಕೊಂಡದಲ್ಲಿ ಗುಡ್ಡ ಕುಸಿಯುವ ಭೀತಿ ಇರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್ ನಾಯ್ಕರೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ರು.

ಮಳೆಗಾಲದ ಸಂದರ್ಭದಲ್ಲಿ ಗುಡ್ಡವನ್ನು ತೆರವುಗೊಳಿಸುವುದು ಇನ್ನೊಂದು ಅಪಾಯಕ್ಕೆ ದಾರಿ ಮಾಡಿಕೊಡಬಹುದು ಎಂಬ ಭಯವೂ ಇದೆ. ಈಗ ಕಣ್ಣಳತೆಯಲ್ಲಿ ಕಾಮಗಾರಿ ನಡೆಸುವುದು ಕಷ್ಟಸಾಧ್ಯ ಎಂಬ ಪರಿಸ್ಥಿತಿ ಇರುವುದರಿಂದ ಗುಡ್ಡ ತೆರವಿನಿಂದ ಆಗಬಹುದಾದ ಪರಿಣಾಮಗಳ ಬಗ್ಗೆ ಮಾಹಿತಿ ಪಡೆದು, ಸರ್ವೇ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಆದೇಶಿಸಿದ್ದಾರೆ.

ಅಲ್ಲದೇ ಆ ಭಾಗದ ನಿವಾಸಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಚಿವರಿಗೆ ಗುಡ್ಡ ಕುಸಿತದ ಸ್ಥಳ ಹಾಗೂ ಸುತ್ತಲಿನ ಮನೆ ಮತ್ತು ರೈತರ ಭೂಮಿಯಲ್ಲಿ ಬೆಳೆದ ಬೆಳೆಗಳ ಬಗ್ಗೆ ಶಾಸಕ ಸುನೀಲ್ ನಾಯ್ಕ ವಿವರಿಸಿದರು. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *