ಟ್ರೈಲರ್ ವಿಚಾರದಲ್ಲಿ ದಾಖಲೆ ಬರೆದ ರವಿಚಂದ್ರನ್​ ಅಭಿನಯದ ‘ರವಿ ಬೋಪಣ್ಣ’!

ರವಿಚಂದ್ರನ್ ಅಭಿನಯಿಸಿ ನಿರ್ದೇಶಿಸಿರುವ ‘ರವಿ ಬೋಪಣ್ಣ’ ಸಿನಿಮಾದ ಟ್ರೈಲರ್ 7 ನಿಮಿಷವಿದ್ದು ಹೊಸ ದಾಖಲೆ ಪುಟ ಸೇರಲಿದೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯಿಸಿ ನಿರ್ದೇಶನ ಮಾಡಿರುವ ‘ರವಿ ಬೋಪಣ್ಣ’ ಸಿನಿಮಾ ಆಗಸ್ಟ್ 12ಕ್ಕೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಕೆಲ ದಿನಗಳ ಹಿಂದೆ ಪ್ರಿ ರಿಲೀಸ್ ಇವೆಂಟ್ ಮಾಡಿ ಗಮನ ಸೆಳೆದಿದ್ದ ನಟ ಇದೀಗ ಸಿನಿಮಾ ವಿಚಾರದಲ್ಲಿಯೂ ತಾನು ‘ದಿ ಶೋ ಮ್ಯಾನ್’ ಎಂದು ಪ್ರೂವ್‌ ಮಾಡಿದ್ದಾರೆ. ಇದಕ್ಕೆ ಸಾಕ್ಷಿ ಭಾರತೀಯ ಚಿತ್ರರಂಗದಲ್ಲಿಯೇ ಇದೇ ಮೊದಲ ಬಾರಿಗೆ ಬಿಡುಗಡೆಯಾದ ಈ ಸಿನಿಮಾದ 7 ನಿಮಿಷದ ಈ ಟ್ರೈಲರ್!​​​.

  • https://www.youtube.com/embed/RzqiWsGNdpk

ಸಾಮಾನ್ಯವಾಗಿ ಒಂದು ಸಿನಿಮಾದ ಟ್ರೈಲರ್ ಅಬ್ಬಬ್ಬಾ ಅಂದ್ರೆ 2.50 ರಿಂದ 3 ನಿಮಿಷ ಇರುತ್ತದೆ. ಆದ್ರೆ ಕ್ರೇಜಿಸ್ಟಾರ್ ನಟಿಸಿರುವ ಹೊಸ ಸಿನಿಮಾದ ಟ್ರೈಲರ್ ಏಳು ನಿಮಿಷ ಅವಧಿಯದ್ದು. ಟ್ರೈಲರ್‌ನಲ್ಲಿ ನಿಮಗೆ ಟಿಪಿಕಲ್ ರವಿಚಂದ್ರನ್ ಕಾಣಸಿಗ್ತಾರೆ. ಪ್ರೀತಿ, ಪ್ರೇಮ ಎಮೋಷನ್ ಎಲ್ಲವೂ ಇದರಲ್ಲಡಗಿದೆ.

ಹಠವಾದಿ ಸಿನಿಮಾ ಬಳಿಕ ರಾಧಿಕಾ ಕುಮಾರಸ್ವಾಮಿ ಕ್ರೇಜಿ ಸ್ಟಾರ್ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದಾರೆ. ಕಾವ್ಯ ಶೆಟ್ಟಿ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ. ಇವರು ತುಸು ಹೆಚ್ಚೆನಿಸುವ ಬೋಲ್ಡ್ ಅವತಾರದಲ್ಲಿ ದರ್ಶನ ಕೊಡುತ್ತಿದ್ದಾರೆ.

ಟ್ರೈಲರ್ ಕಥೆಯ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. ಇದು ಕ್ರೇಜಿಸ್ಟಾರ್ ಬುದ್ದಿವಂತಿಕೆಯೇನೋ ಎಂಬಂತಿದೆ. ಸಿನಿಮಾದಲ್ಲಿ ಸುದೀಪ್ ನಟಿಸಿದ್ದಾರೆ ಎಂಬುದು ಮತ್ತೊಂದು ವಿಶೇಷತೆ. ಲಾಯರ್ ಪಾತ್ರದಲ್ಲಿ ಕಿಚ್ಚ ಅತಿಥಿ ಪಾತ್ರ ಮಾಡಿದ್ದಾರೆ.

ನಿರ್ದೇಶನದ ಜೊತೆಗೆ ನಿರ್ಮಾಣ, ಚಿತ್ರಕಥೆ, ಸಾಹಿತ್ಯ, ಸಂಗೀತ, ಸಂಕಲನವೂ ರವಿಚಂದ್ರನ್‌ ಅವರದ್ದೇ ಆಗಿದೆ. ಕನಸುಗಾರನ ನೆಚ್ಚಿನ ಸಿನಿಮ್ಯಾಟೋಗ್ರಾಫರ್ ಜಿ.ಎಸ್.ವಿ ಸೀತಾರಾಮ್ ಕ್ಯಾಮರಾ ಕಣ್ಣಲ್ಲಿ ರವಿ ಬೋಪಣ್ಣ ಪ್ರಪಂಚ ಸೆರೆಯಾಗಿದೆ. ಸಂಗೀತ ಸಹಾಯಕ ನಿರ್ದೇಶಕನಾಗಿ ಗೌತಮ್ ಶ್ರೀವತ್ಸ ಕೆಲಸ ಮಾಡಿದ್ದಾರೆ. ರಾಮಕೃಷ್ಣ, ಜೈ ಜಗದೀಶ್, ರವಿಶಂಕರ್ ಗೌಡ, ಮೋಹನ್ ಮುಂತಾದವರು ತಾರಾಗಣದಲ್ಲಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *