ಮಾಜಿ ಯೋಧರಿಗೆ ಸನ್ಮಾನ-
ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಿದ್ಧಾಪುರ ತಾಲೂಕಿನ ಮಾ.ಹಿ.ಪ್ರಾ.ಶಾಲೆ ಬಾಲಿಕೊಪ್ಪಮತ್ತು ಹಿ.ಪ್ರಾ.ಶಾಲೆ ಅವರಗುಪ್ಪಾಗಳಲ್ಲಿ ಮಾಜಿ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು.ಬಾಲಿಕೊಪ್ಪ ಎಮ್.ಎಚ್.ಪಿ.ಎಸ್. ನಲ್ಲಿ ಮಾಜಿಯೋಧ ಕುಮಾರಗೌಡರ್ ಮತ್ತು ಕರಾಟೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದ ಆನಂದ ನಾಯ್ಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅವರಗುಪ್ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಯೋಧರಾದ ದಿನೇಶ್ ಕುಮಾರ್ ತರಳಿ ಮತ್ತು ಕೃಷ್ಣ ನಾಯ್ಕ ರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕು.ಸುಹಾಸ್ ಮಾಳ್ಕೋಡಗೆ ಅಸಾಧಾರಣ ಪ್ರತಿಭಾ ಪುರಸ್ಕಾರ
ಸಿದ್ದಾಪುರ; ಪಟ್ಟಣದ ಐತಿಹಾಸಿಕ ನೆಹರು ಮೈದಾನದಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ತಾಲೂಕಿನ ಕೋಲಶಿರ್ಸಿಯ ಕು.ಸುಹಾಸ್ ನಾಗರಾಜ ನಾಯ್ಕ ಮಾಳ್ಕೋಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೂ.೧೦ ಸಾವಿರ ನಗದು ಪುರಸ್ಕಾರದೊಂದಿಗೆ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಯಿತು.
೨೦೨೦-೨೧ ನೇ ಸಾಲಿನ ಪುರಸ್ಕಾರಕ್ಕೆ ಆಯ್ಕೆಯಾದ ಕು.ಸುಹಾಸ್ ನಾಯ್ಕಗೆ ಜಿಲ್ಲಾಡಳಿತ ಪರವಾಗಿ ತಹಶೀಲ್ದಾರ ಸಂತೋಷ ಕೆ.ಭಂಡಾರಿ ಪ್ರಶಸ್ತಿ ಪ್ರದಾನ ಮಾಡಿದರು. ತಾಲೂಕ ಪಂಚಾಯತ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ ವಿ.ರಾವ್, ಪೊಲೀಸ್ ನಿರೀಕ್ಷರಾದ ಕುಮಾರ.ಲೆ, ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ಸುರೇಶ ನಾಯ್ಕ, ಕ್ಷೇತ್ರ ಶೀಕ್ಷಣಾಧಿಕಾರಿ ಸದಾನಂದ ಸ್ವಾಮಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಓ ಪೂರ್ಣಿಮ ಆರ್.ದೊಡ್ಮನಿ, ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಕುಮಾರ ಡಿ.ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.