ಶಿರಳಗಿ ಮತ್ತು ಬಾಳೇಸರಗಳಲ್ಲಿ ಅಮೃತಮಹೋತ್ಸವ ಆಚರಣೆ

ಶಿರಳಗಿ ಗ್ರಾಮಪಂಚಾಯತದಲ್ಲಿ ಅಮೃತಮಹೋತ್ಸವ
ಸಿದ್ದಾಪುರ
ಭಾರತದ ಸ್ವಾತಂತ್ರö್ಯದ ಅಮೃತಮಹೋತ್ಸವದ ನಿಮಿತ್ತ ತಾಲೂಕಿನ ಶಿರಳಗಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿರಳಗಿ ಗ್ರಾಮಪಂಚಾಯತ,ಸೇವಾ ಸಹಕಾರಿ ಸಂಘ, ಹಾಲು ಉತ್ಪಾದಕರ ಸಂಘ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಾಧಕರಿಗೆ ಸನ್ಮಾನ, ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಗ್ರಾಮಪಂಚಾಯತ ಅಧ್ಯಕ್ಷೆ ಲತಾ ಆರ್.ನಾಯ್ಕ ಅಧ್ಯಕ್ಷತೆವಹಿಸಿದ್ದರು. ನಿವೃತ್ತ ಸೇನಾಧಿಕಾರಿ ವಿನಾಯಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ರಾಮಚಂದ್ರ ಕೆ.ನಾಯ್ಕ, ನಾರಾಯಣ ಕೆ.ನಾಯ್ಕ, ರವೀಂದ್ರ ಆರ್.ಹೆಗಡೆ, ಗಂಗಾಧರ ಕೊಳಗಿ,ಈರ ಕೆ.ನಾಯ್ಕ, ಕೆರೆಸ್ವಾಮಿ ಎಂ.ಗೌಡರ್, ಸೋಮಶೇಖರ ಎಸ್.ಗೌಡರ್, ರಘುನಂದನ ಎಸ್.ಭಟ್ ಇವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ.ಯಲ್ಲಿ ಪ್ರೌಢಶಾಲೆಗೆ ಮೊದಲ ೩ ಸ್ಥಾನಗಳನ್ನು ಪಡೆದ ಜೀವನ ನಾಯ್ಕ, ಮಾನಸ ನಾಯ್ಕ, ಮಾನ್ಯ ಎನ್.ಚೆನ್ನಯ್ಯ ಇವರನ್ನುಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.


ಗ್ರಾಮಪಂಚಾಯತ ಅಧ್ಯಕ್ಷೆ ಲತಾ ಆರ್.ನಾಯ್ಕ, ಉಪಾಧ್ಯಕ್ಷ ಶ್ರೀಕಾಂತ ಎಲ್. ಭಟ್ಟ, ಮುಖ್ಯ ಅತಿಥಿ ಗಂಗಾಧರ ಕೊಳಗಿ ಮಾತನಾಡಿದರು. ಸನ್ಮಾನಿತರ ಪರವಾಗಿ ಈರ ಕೆ.ನಾಯ್ಕ ಮಾತನಾಡಿದರು. ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪರಶುರಾಮಕೆ.ನಾಯ್ಕ,ಎಸ್.ಡಿ.ಎಂ.ಸಿ.ಅಧ್ಯಕ್ಷ ಆರ್.ಜಿ.ನಾಯ್ಕ ಕೋಡ್ಸರ,ತಾಲೂಕು ಸೇವಾದಳದ ಅಧ್ಯಕ್ಷ ನಾಗರಾಜ ಭಟ್ಟ ಕೆಕ್ಕಾರ,ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪ್ರೇಮಲತಾ ಹಾಗೂ ಗ್ರಾಪಂ ಸದಸ್ಯರು, ಊರ ನಾಗರಿಕರು, ಶಿಕ್ಷಕರು ಉಪಸ್ಥಿತರಿದ್ದರು.
ಪಿ.ಡಿ.ಓ.ಗೌರೀಶ ಹೆಗಡೆ ಸ್ವಾಗತಿಸಿದರು.ಪ್ರೌಢಶಾಲಾ ಶಿಕ್ಷಕಿ ಉಷಾ ನಿರೂಪಿಸಿದರು. ಗೋವಿಂದಪ್ಪ ವಂದಿಸಿದರು.

ಬಾಳೇಸರದಲ್ಲಿ ಅಮೃತಮಹೋತ್ಸವ
ಸಿದ್ದಾಪುರ
ತಾಲೂಕಿನ ಬಾಳೇಸರದಲ್ಲಿ ಸ್ವಾತಂತ್ರೊö್ಯÃತ್ಸವದ ಅಮೃತಮಹೋತ್ಸವವನ್ನು ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಊರಿನ ಹಿರಿಯ, ಶಾಲಾ ಸಂಸ್ಥಾಪಕರಲ್ಲಿ ಓರ್ವರಾದ ಶಂಕರ ಭಟ್ಟ ಮಸಗುತ್ತಿ ದಂಪತಿಗಳು ಅಮೃತಮಹೋತ್ಸವದ ಸವಿ ನೆನಪಿಗೆ ಶಾಲೆಗೆ ಎರಡು ಸ್ಮಾರ್ಟ ಟಿ.ವಿ.ಗಳನ್ನು ದೇಣಿಗೆಯಾಗಿ ನೀಡಿ ಕಾರ್ಯಕ್ರಮ ಉದ್ಘಾಟಿಸಿದರು. ಶಂಕರ ಭಟ್ಟ ದಂಪತಿಗಳನ್ನು ಹಾಗೂ ಇನ್ನೊಂದು ಟಿ.ವಿ. ನೀಡಿದ ಸೀತಾರಾಮ ಎಮ್.ಭಟ್ಟ ತಂಗರ‍್ಮನೆಯವರನ್ನು ಸನ್ಮಾನಿಸಲಾಯಿತು.ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭಾಸ್ಕರ ಹೆಗಡೆ ತಂಗರ‍್ಮನೆ ಮಾತನಾಡಿದರು.ಸಿ.ಆರ್.ಪಿ.ಗಣೇಶ ಕೊಡಿಯಾ, ಗ್ರಾಪಂ ಸದಸ್ಯರಾದ ಶ್ರೀಲಕ್ಷಿö್ಮÃ ಹೆಗಡೆ, ಶ್ಯಾಮಲಾ ಹಸ್ಲರ್ ಮಾತನಾಡಿದರು. ಮುಖ್ಯಾಧ್ಯಾಪಕ ರಾಜು ನಾಯ್ಕ ಸ್ವಾಗತಿಸಿದರು. ಶಿಕ್ಷಕರಾದ ಚೇತನಾ ಹೆಗಡೆ, ಭಾರತಿ ಹೆಗಡೆ, ಕುಮಾರ ಎಂ.ನಿರ್ವಹಿಸಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *