ಮಳೆಹಾನಿಯಿಂದ ಕಂಗೆಟ್ಟ ರೈತ,ವಿಶೇಶ ಪ್ಯಾಕೇಜ್‌ ಗೆ ಆಗ್ರಹ

ಅರ್ಧಕ್ಕರ್ಧ ನಾಟಿ ಮಾಡದ ಭತ್ತದ ಪ್ರದೇಶ, ಮದ್ದು ಕಾಣದ ಅಡಿಕೆ ತೋಟ, ಮಳೆಯಿಂದ ಆನೆ ಹೊಕ್ಕಂತಾದ ಬಾಳೆ ಬೆಳೆಯುವ ಪ್ರದೇಶ ಈ ವಿಚಿತ್ರ ಸನ್ನಿವೇಶಕ್ಕೆ ಮೂಖಾಮುಖಿಯಾದ ರೈತ ಸರ್ಕಾರದ ಬೆಳೆವಿಮೆ,ಹವಾಮಾನ ಆಧಾರಿತ ಬೆಳೆವಿಮೆಯ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ.

ತುಸು ಕಡಿಮೆಯಾದ ಕರಾವಳಿ,ಮಲೆನಾಡಿನ ಮಳೆ ಸ್ಥಳಿಯರಿಗೆ ಹಿತಾನುಭವ ನೀಡತೊಡಗಿದೆ. ಈ ವರ್ಷಾವಧಿಗೆ ಮೊದಲೇ ಪ್ರಾರಂಭವಾಗಿದ್ದ ಮುಂಗಾರು ಮಳೆ ಕೃಷಿಕರಿಗೆ ಗೊಂದಲ ಹುಟ್ಟಿಸಿತ್ತು. ಬಿತ್ತನೆಗೆ ಅನುಕೂಲವಾಗದೆ ನಂತರ ಮಳೆಯ ಆರ್ಭಟದಲ್ಲಿ ಕೃಷಿಕ್ಷೇತ್ರ ಹಸನು ಮಾಡಲಾರದೆ ಕಂಗೆಟ್ಟಿದ್ದ ರೈತನಿಗೆ ಜುಲೈ,ಆಗಸ್ಟ್‌ ನ ಮಳೆ ಸಂಕಷ್ಟ ತಂದಿಟ್ಟಿತ್ತು.ಜುಲೈ ತಿಂಗಳಲ್ಲಿ ಭತ್ತದ ಬಿತ್ತನೆ, ನಾಟಿ ಕೆಲಸ ಮಾಡುತಿದ್ದ ರೈತರಿಗೆ ಈ ವರ್ಷದ ಮಳೆ ಈ ಕೆಲಸಗಳಿಗೆ ಅನುಕೂಲ ಮಾಡಿಕೊಡಲಿಲ್ಲ.


ಇದೇ ಅವಧಿಯಲ್ಲಿ ಅಡಿಕೆ ಗೊನೆಗಳಿಗೆ ಕೊಳೆ ಮದ್ದು ಸಿಂಪಡಿಸುತಿದ್ದ ಅಡಿಕೆ ಬೆಳೆಗಾರರಿಗೆ ಅವಶ್ಯ ಸಮಯದಲ್ಲಿ ಅಡಿಕೆಗೆ ಮದ್ದು ಸಿಂಪಡನೆ ಮಾಡಲು ಅನುಕೂಲವಾಗಲಿಲ್ಲ. ಆಗಸ್ಟ್‌ ತಿಂಗಳ ಮಧ್ಯಾಂತರದ ನಂತರ ನಿಂತು ನೋಡಿದರೆ ಈ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ೨೫ ಶೇ ಕಡಾ ಹೆಚ್ಚುವರಿ ಮಳೆ ಈಗಾಗಲೇ ಸುರಿದಿದೆ. ಪ್ರತಿವರ್ಷ ಈ ಅವಧಿಯಲ್ಲಿ ನೂರಕ್ಕೆ ಪ್ರತಿಶತ ೯೦ ರಷ್ಟು ಬಿತ್ತನೆಯಾಗುತಿದ್ದ ಭತ್ತದ ಬೆಳೆ ಪ್ರದೇಶದಲ್ಲಿ ಈ ವರ್ಷ ಅರ್ಧಕ್ಕರ್ಧ ಬಿತ್ತನೆ,ನಾಟಿ ಕೆಲಸ ಮುಗಿದಿಲ್ಲ.


ಆಗಷ್ಟ್‌ ತಿಂಗಳಲ್ಲಿ ನೂರಕ್ಕೆ ನೂರರಷ್ಟು ಕೊಳೆ ಮದ್ದು ಸಿಂಪಡಿಸುತಿದ್ದ ಅಡಿಕೆ ಬೆಳೆಗಾರ ಈ ವರ್ಷ ಸೂಕ್ತ ಸಮಯದಲ್ಲಿ ಮದ್ದು ಸಿಂಪಡಣೆ ಮಾಡದೆ ಅಡಿಕೆಗೊನೆಗಳು ಕೊಳೆಗೆ ತುತ್ತಾಗಿವೆ.


ಅವಶ್ಯ,ಅಗತ್ಯ ಸಮಯದಲ್ಲಿ ಕೃಷಿ ಚಟುವಟಿಕೆಗಳಿಗೆ ಅಡ್ಡಿ ಮಾಡಿದ ಮಳೆ ಈಗ ತುಸು ನಿಂತಿದೆ. ಆದರೆ ವಿಳಂಬವಾದ ಕೃಷಿ ಚಟುವಟಿಕೆ ಈ ವರ್ಷಕ್ಕೆ ಹಾನಿಯ ಮುನ್ಸೂಚನೆ ನೀಡಿದೆ.
ಬಿತ್ತನೆಯಾಗದ ಭತ್ತ ದ ಗದ್ದೆಗಳು, ಮದ್ದು ಹೊಡೆಯದ  ಅಡಿಕೆ ತೋಟಗಳು ಈ ವರ್ಷ ರೈತನ ಕೈ ಹಿಡಿಯುವ ಸಾಧ್ಯತೆ ಕ್ಷೀಣಿಸಿದೆ.ಹಿಂಗಾರು ಮಳೆಯ ಈ ಅವಧಿಯಲ್ಲಿ ಪ್ರತಿವರ್ಷ ಖುಷಿಯಿಂದ ಇರುತಿದ್ದ ರೈತ ಈ ವರ್ಷ ಮುಂದೇನು ಎನ್ನುವ ಆತಂಕದಲ್ಲಿದ್ದಾನೆ. ವಾರ್ಷಿಕ ಕೃಷಿ ಚಟುವಟಿಕೆಗಳ ಸರಾಸರಿ ಪ್ರಗತಿ ಲೆಕ್ಕದಲ್ಲಿ ಕೂಡಾ ಸರ್ಕಾರದ ವರದಿ ನಿರಾಶಾದಾಯಕವಾಗಿದೆ.


ಅರ್ಧಕ್ಕರ್ಧ ನಾಟಿ ಮಾಡದ ಭತ್ತದ ಪ್ರದೇಶ, ಮದ್ದು ಕಾಣದ ಅಡಿಕೆ ತೋಟ, ಮಳೆಯಿಂದ ಆನೆ ಹೊಕ್ಕಂತಾದ ಬಾಳೆ ಬೆಳೆಯುವ ಪ್ರದೇಶ ಈ ವಿಚಿತ್ರ ಸನ್ನಿವೇಶಕ್ಕೆ ಮೂಖಾಮುಖಿಯಾದ ರೈತ ಸರ್ಕಾರದ ಬೆಳೆವಿಮೆ,ಹವಾಮಾನ ಆಧಾರಿತ ಬೆಳೆವಿಮೆಯ ಪರಿಹಾರದ ನಿರೀಕ್ಷೆಯಲ್ಲಿದ್ದಾನೆ. ಆದರೆ ಈ ವಿಮಾ ಪರಿಹಾರಗಳು ಸಿಗುವುದು ಮುಂದಿನ ವರ್ಷಕ್ಕೆ ಈ ಅನಿವಾರ್ಯತೆಯಲ್ಲಿ ಸರ್ಕಾರ ಬೆಳೆನಷ್ಟದ ಸರ್ಕಾರದ ವಿಶೇಶ ಪ್ಯಾಕೇಜ್‌ ಗೆ ಆಗ್ರಹಿಸಿದ್ದಾನೆ.ಸರ್ಕಾರ ರೈತನ ಸಂಕಷ್ಟ ಅರಿತುಪ್ಯಾಕೇಜ್‌ ನ ಪರಿಹಾರದ ಭರವಸೆ ನೀಡುವುದೇ ಈಗಿರುವ ತಾತ್ಕಾಲಿಕ ಪರಿಹಾರವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *