ಉತ್ತರ ಕನ್ನಡದಲ್ಲಿ ಪತ್ತೆಯಾದ ಆಕರ್ಷಕ ದ್ವಿವರ್ಣ ಏಡಿ!

ಯಲ್ಲಾಪುರದಲ್ಲಿ ಹೊಸ ಏಡಿ ಪತ್ತೆ, ಇದು ದೇಶದ 75ನೇ ಪ್ರಭೇದ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ‘ದ್ವಿವರ್ಣ’ ಎಂಬ ಹೊಸ ಜಾತಿಯ ಏಡಿ ಪ್ರಭೇದ ಪತ್ತೆಯಾಗಿದ್ದು, ಕಾಕತಾಳೀಯವೆಂಬಂತೆ, ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ದಿನವಾದ ಆಗಸ್ಟ್ 15ರಂದು ಈ ದ್ವಿವರ್ಣಕ್ಕೆ…

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ‘ದ್ವಿವರ್ಣ’ ಎಂಬ ಹೊಸ ಜಾತಿಯ ಏಡಿ ಪ್ರಭೇದ ಪತ್ತೆಯಾಗಿದ್ದು, ಕಾಕತಾಳೀಯವೆಂಬಂತೆ, ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ದಿನವಾದ ಆಗಸ್ಟ್ 15ರಂದು ಈ ದ್ವಿವರ್ಣಕ್ಕೆ ವೈಜ್ಞಾನಿಕವಾಗಿ ದೇಶದ 75ನೇ ಏಡಿ ಪ್ರಬೇಧ ಎಂಬ ಮನ್ನಣೆ ಸಿಕ್ಕಿದೆ.

ಯಲ್ಲಾಪುರ ಸಮೀಪದ ಪುಟ್ಟ ಹಳ್ಳಿಯ ವನ್ಯಜೀವಿ ಉತ್ಸಾಹಿ ಹಾಗೂ ಛಾಯಾಗ್ರಾಹಕ ಗೋಪಾಲ ಕೃಷ್ಣ ಹೆಗಡೆ ಹಾಗೂ ಕದ್ರಾ ಮೂಲದ ಫಾರೆಸ್ಟ್ ಗಾರ್ಡ್ ಪರಶುರಾಮ ಭಜಂತ್ರಿ ಅವರು ಭರೆಯ ಅರಣ್ಯದಲ್ಲಿ ಈ ವಿಶಿಷ್ಟ, ಆಕರ್ಷಕ ಬಣ್ಣಗಳ ಸಿಹಿನೀರಿನ ಏಡಿಯನ್ನು ಪತ್ತೆ ಹಚ್ಚಿದ್ದಾರೆ. 

https://imasdk.googleapis.com/js/core/bridge3.525.0_en.html#goog_581530538

ಆವಿಷ್ಕಾರವಾದ ಒಂದು ವರ್ಷದ ನಂತರ, ಬಿಳಿ ತಲೆ ಮತ್ತು ನೇರಳೆ ದೇಹವನ್ನು ಹೊಂದಿರುವ ಡ್ಯುಯಲ್-ಟೋನ್ ಏಡಿಗೆ ಘಟಿಯಾನ ದ್ವಿವರ್ಣ ಎಂದು ಹೆಸರಿಸಲಾಗಿದೆ. 

ಸ್ಥಳೀಯ ತಜ್ಞರ ಪ್ರಕಾರ, ಏಡಿಯು ಪಶ್ಚಿಮ ಘಟ್ಟಗಳ ಕಲ್ಲಿನ ಹೊರಪದರದ ಜಲಮೂಲಗಳ ನಡುವೆ ವಾಸಿಸುತ್ತದೆ. “ಇದು ವಿಶಿಷ್ಟವಾದ ಏಡಿಗಳಲ್ಲಿ ಒಂದಾಗಿದೆ” ಎಂದು ಹೆಗ್ಡೆ ಮಾಧ್ಯಮಗಳಿ ಗೆ ತಿಳಿಸಿದ್ದಾರೆ.

ಈ ಅಪರೂಪದ ಏಡಿಯನ್ನು ಪತ್ತೆಹಚ್ಚಿದ್ದಕ್ಕಾಗಿ ಭಾರತೀಯ ಭೌಗೋಳಿಕ ಸಮೀಕ್ಷೆಯಿಂದ ಹೆಗಡೆ ಮತ್ತು ಭಜಂತ್ರಿ ಅವರಿಗೆ ‘ನಾಗರಿಕ ವಿಜ್ಞಾನಿಗಳು’ ಎಂಬ ಬಿರುದು ಪ್ರದಾನ ಮಾಡಲಾಗಿದೆ.

ಸುಮಾರು 3 ಇಂಚು ಉದ್ದ ಮತ್ತು 2 ಇಂಚು ಅಗಲವಿರುವ ಈ ದ್ವಿವರ್ಣ ಏಡಿ ಪಾಚಿ ಮತ್ತು ಸಣ್ಣಪುಟ್ಟ ಹುಳುಗಳನ್ನು ಸೇವಿಸುತ್ತದೆ, ಜೂನ್ 30, 2021 ರಂದು ನಾವು ಮೊದಲ ಬಾರಿಗೆ ಏಡಿಯನ್ನು ನೋಡಿದ್ದೇವೆ ಎಂದು ಹೆಗ್ಡೆ ಮತ್ತು ಭಜಂತ್ರಿ ಹೇಳಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *