ಆರ್​ಎಸ್​​ಎಸ್​ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೆ? : ಕಾಂಗ್ರೆಸ್​ ತಿರುಗೇಟು

Thumbnail image

ಬಿಜೆಪಿ ಹಾಗೂ ಆರ್​ಎಸ್​ಎಸ್ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ ಎಂದು ಕಾಂಗ್ರೆಸ್​ ಕಿಡಿಕಾರಿದೆ.

ಬೆಂಗಳೂರು: ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ವ್ಯಕ್ತಿಯ ಕಾಂಗ್ರೆಸ್ ಕಾರ್ಯಕರ್ತ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಆ ವ್ಯಕ್ತಿ ಗಣ ವೇಷಧಾರಿಯಾಗಿರುವ ಭಾವಚಿತ್ರವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಆರೋಪಿ ಆರೋಪಿ ಸಂಪತ್‌, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ನೀಡಿದ್ದರು. ಇದು ಭಾರಿ ಚರ್ಚೆಗೆ ಎಡೆಮಾಡಿಕೊಟ್ಟ ಬೆನ್ನಲ್ಲೇ ಟ್ವೀಟ್​ ಮಾಡಿರುವ ಕಾಂಗ್ರೆಸ್​, ಆರ್​ಎಸ್​ಎಸ್​ ಶಾಖೆಯಲ್ಲಿ ಗಣವೇಷಧಾರಿಯಾಗಿ ಸಂಪತ್‌ ಇರುವ ಫೋಟೋವನ್ನು ಬಿಡುಗಡೆ ಮಾಡಿ ತಿರುಗೇಟು ನೀಡಿದೆ.

ಬಿಜೆಪಿ ಹಾಗೂ ಆರ್​ಎಸ್​ಎಸ್ ತಮ್ಮ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ. ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ. ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ. ಆರ್​ಎಸ್​ಎಸ್ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

  • xಬಿಜೆಪಿ & RSS ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ.

    RSS ‘ಪ್ಯಾಂಟು’ ತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ?! pic.twitter.com/88tLhMNeGN— Karnataka Congress (@INCKarnataka) August 20, 2022

ಇತ್ತ, ತಮ್ಮ ಮೇಲೆ ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಂಡು ವಿಡಿಯೋ ಬಿಡುಗಡೆ ಮಾಡಿರುವುದನ್ನು ಗಮನಿಸಿದ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿ, ಆರೋಪಿ ಯಾರೇ ಆಗಿದ್ದರೂ ಅಥವಾ ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೂ ಕಠಿಣ ಕ್ರಮ ಕೈಗೊಳ್ಳಿ. ರಾಜ್ಯ ಬಿಜೆಪಿ ಶಾಸಕರ ನಂತರ ಇದೀಗ ಬೀದಿಪುಂಡರ ಆಪರೇಷನ್​ಗೂ ಮುಂದಾಗಿದೆ ಎಂದು ಲೇವಡಿ ಮಾಡಿದ್ದರು.

ಅಲ್ಲದೇ, ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *