ಜಿ.ಪಂ.,ತಾ.ಪಂ. ಚುನಾವಣೆ ಮತ್ತಷ್ಟು ವಿಳಂಬ

Thumbnail image

ತಾಪಂ, ಜಿಪಂ ಕ್ಷೇತ್ರ ಜನಸಂಖ್ಯೆ ನಿಗದಿಗೊಳಿಸಿ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ.. ಚುನಾವಣೆ ಇನ್ನಷ್ಟು ವಿಳಂಬ?

ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕವನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

ಬೆಂಗಳೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಆ ಮೂಲಕ ತಾಪಂ ಹಾಗೂ ಜಿಲ್ಲಾ ಪಂಚಾಯತ್‌ ಚುನಾವಣೆ ಮತ್ತಷ್ಟು ವಿಳಂಬವಾಗಲಿದೆ.

ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕವನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್‌ 121 ಮತ್ತು ಸೆಕ್ಷನ್‌ 160ರ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ತಿದ್ದುಪಡಿ ಅಧ್ಯಾದೇಶಕ್ಕೆ ಆ. 20ರಂದು ರಾಜ್ಯಪಾಲರಿಂದ ಅಂಕಿತ ಬಿದ್ದಿದ್ದು, ಇದೀಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಅಧಿಸೂಚನೆ ಹೊರಡಿಸಿದೆ.

ತಿದ್ದುಪಡಿ ಕಾಯ್ದೆಗೆ ತರುತ್ತಿರುವ ಸುಗ್ರೀವಾಜ್ಞೆಯಂತೆ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 25 ಜಿ.ಪಂ. ಸದಸ್ಯರಿರಲಿದ್ದಾರೆ. ಇನ್ನು 7 ರಿಂದ 9.5 ಲಕ್ಷ ಜನಸಂಖ್ಯೆಗೆ ಕನಿಷ್ಠ 28 ಜಿ.ಪಂ ಸದಸ್ಯರು ಇರಲಿದ್ದಾರೆ. ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕ-2022 ತರಲಾಗಿತ್ತು.

ಅದರಂತೆ, ಸೆಕ್ಷನ್‌ 121 ಪ್ರಕಾರ 2 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 12 ಸಾವಿರಕ್ಕೆ ಕಡಿಮೆಯಿಲ್ಲದ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯ ಇರಬೇಕು. ಅದೇ ರೀತಿ 1 ಲಕ್ಷ ಮೀರಿದ ಹಾಗೂ 2 ಲಕ್ಷ ಮೀರದ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯರಂತೆ ಕನಿಷ್ಠ 11 ಚುನಾಯಿತ ಸದಸ್ಯರು ಇರಬೇಕು.

50 ರಿಂದ 1 ಲಕ್ಷ ಜನಸಂಖ್ಯೆಗೆ ಒಂಬತ್ತು ಸದಸ್ಯರು. 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆಗೆ ಏಳು ಮಂದಿ ಸದಸ್ಯರು ಇರಬೇಕು. ಅದೇ ರೀತಿ ಸೆಕ್ಷನ್‌ 160 ಪ್ರಕಾರ, ಒಂದು ಜಿಲ್ಲೆಯಲ್ಲಿ 35 ರಿಂದ 45 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಒಂದು ಜಿಲ್ಲೆಯಲ್ಲಿ 20 ಜಿ.ಪಂ. ಸದಸ್ಯರು ಇರಬೇಕು.

2022ರ ಮಾರ್ಚ್‌ನಲ್ಲಿ ತರಲಾದ ತಿದ್ದುಪಡಿಯಲ್ಲಿ 2 ಲಕ್ಷ ಮೇಲ್ಪಟ್ಟ ಜನಸಂಖ್ಯೆಗೆ 12 ತಾ.ಪಂ ಸ್ಥಾನಗಳು ಎಂದು ಇತ್ತು. ಆದರೆ, 2 ಲಕ್ಷದ ಮೇಲೆ ಸ್ವಲ್ಪ ಪ್ರಮಾಣದ ಜನಸಂಖ್ಯೆ ಹೆಚ್ಚಿರುವ ಕಡೆ ಸ್ಥಾನಗಳ ನಿಗದಿಗೆ ಸಮಸ್ಯೆ ಆಗುತ್ತಿತ್ತು. ಅದಕ್ಕಾಗಿ ಸುಗ್ರೀವಾಜ್ಞೆಯಲ್ಲಿ 2 ಲಕ್ಷದ ಬದಲಾಗಿ 2.30 ಲಕ್ಷ ಜನಸಂಖ್ಯೆ ನಿಗದಿ ಪಡಿಸಲಾಗಿದೆ.

ಅದೇ ರೀತಿ ಹಿಂದಿನ ತಿದ್ದುಪಡಿಯಲ್ಲಿ ಒಂದು ಜಿಲ್ಲೆಯಲ್ಲಿ ತಾಲೂಕುಗಳಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಪ್ರತಿ ಜಿಲ್ಲೆಯಲ್ಲಿ 20 ಇರಬೇಕು ಎಂದಿತ್ತು. ಇಲ್ಲಿಯೂ ಸಹ ಕಡಿಮೆ ಜನಸಂಖ್ಯೆ ಇರುವ ಜಿಲ್ಲೆಗಳಲ್ಲಿ ಸ್ಥಾನ ನಿಗದಿ ಸಮಸ್ಯೆ ಆಗುತಿತ್ತು. ಅದಕ್ಕಾಗಿ, ಸುಗ್ರೀವಾಜ್ಞೆಯಲ್ಲಿ ಜಿಲ್ಲೆಗಳಿಗೆ ಜನಸಂಖ್ಯೆ ನಿಗದಿಪಡಿಸಲು ಈ ಸುಗ್ರೀವಾಜ್ಞೆ ತರಲಾಗಿದೆ.

ಈ ಸುಗ್ರೀವಾಜ್ಞೆ ಮೂಲಕ ಇದೀಗ ಸರ್ಕಾರ ತಾಪಂ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಇನ್ನಷ್ಟು ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ. ಕಾರಣ ಸುಗ್ರಿವಾಜ್ಞೆಯ ಪ್ರಕಾರ ತಾ.ಪಂ. ಹಾಗೂ ಜಿ.ಪಂ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಲಿದೆ. ಇದು ಮುಂದೆ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ‌.‌ (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *