ತಮ್ಮಣ್ಣ ಬೀಗಾರ್ ರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹೊಸ ದೆಹಲಿ, ಆಗಸ್ಟ್ ೨೪:
ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿರ್ಶಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು ಐವತ್ತು ಸಾವಿರ ರುಪಾಯಿ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.

ದಾದಾಪೀರ್ ಅವರ ‘ನೀಲಕುರಿಂಜಿ ‘ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ ತಮ್ಮಣ್ಣ ಬೀಗಾರ ಅವರ ‘ ಬಾವಲಿ ಗುಹೆ ‘ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. ‘ನೀಲಕುರಿಂಜಿ ‘ ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದ್ದರೆ ‘ಬಾವಲಿ ಗುಹೆ ‘ ಯನ್ನು ಬೆಂಗಳೂರಿನ ಅಭಿನವ ಪ್ರಕಾಶನವು ಪ್ರಕಟಿಸಿದೆ.

ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಸ ಉಷಾ, ನಗರಗೆರೆ ರಮೇಶ್ ಹಾಗೂ ಎನ್ ಎಸ್ ಗುಂಡೂರ ಕೆಲಸ ನಿರ್ವಹಿಸಿದ್ದರೆ ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು , ಲೋಹಿತ್ ನಾಯ್ಕರ್ ಹಾಗೂ ಎಂ ಎಚ್ ನಾಗರಾಜ್ ಅವರು ಜ್ಯೂರಿಗಳಾಗಿದ್ದರು.ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆಯಿತು.

ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿ ವಿಜೇತರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ಡಾ ಸರಜೂ ಕಾಟ್ಕರ್
ಸಂಯೋಜಕರು
ಕೇಂದ್ರ ಸಾಹಿತ್ಯ ಅಕಾಡೆಮಿ
ಕನ್ನಡ ಭಾಷಾ ವಿಭಾಗ
ಹೊಸ ದೆಹಲಿ
ಮೊಬೈಲ್ ನಂಬರ್

9341029321


(ಹಸಿರೂರಿನ ಹುಡುಗ ಪುಸ್ತಕಕ್ಕೆ ಹೊಂಬಳ ಮಕ್ಕಳ ಸಾಹಿತ್ಯ ಪ್ರಶಸ್ತಿ, ಮಲ್ನಾಡೆ ಮಾತಾಡು ಕೃತಿಗೆ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಹಾಗೂ ಮರಬಿದ್ದಾಗ ಕೃತಿಗೆ ಬಾಲವಿಕಾಸ ಅಕಾಡೆಮಿ ಕೊಡುವ ಮಕ್ಕಳ ಚಂದ್ರ ಪ್ರಶಸ್ತಿ, ಫ್ರಾಗಿ ಮತ್ತು ಗೆಳೆಯರು ಕೃತಿಗೆ ಪುಸ್ತಕ ಸೊಗಸು ಬಹುಮಾನ ಬಂದಿವೆ. ಇದಲ್ಲದೇ ರಾಜ್ಯ ಉತ್ತಮ ಶಿಕ್ಷಕರ ಪ್ರಶಸ್ತಿ, ರಾಷ್ಟ್ರ  ಶಿಕ್ಷಕರ ಪ್ರಶಸ್ತಿ, ಪ್ರಜಾವಾಣಿ ಶಿಶುಕಾವ್ಯ ಸ್ಪರ್ಧಾ ಬಹುಮಾನ ಮುಂತಾದವು ದೊರೆತಿವೆ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *