ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ತಮ್ಮಣ್ಣ ಬೀಗಾರ್ ಪರಿಚಯ

ತಮ್ಮಣ್ಣ ಬೀಗಾರರ ಪರಿಚಯ

‘ತಮ್ಮಣ್ಣ ಬೀಗಾರ’ ಎಂಬ ಕಾವ್ಯ ನಾಮದಿಂದ ಮೂರು ದಶಕಗಳಿಂದ ಬರೆಯತ್ತಿರುವ ತಮ್ಮಣ್ಣ ಕೋಮಾರ ಅವರು ನವೆಂಬರ ೨೨, ೧೯೫೯ ರಂದು ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀಗಾರ ಗ್ರಾಮದಲ್ಲಿ ಜನಿಸಿದವರು. ಇವರು ಸ್ನಾತಕೋತ್ತರ ಪದವೀಧರರಾಗಿದ್ದು  ಶಿಕ್ಷಕರಾಗಿ ಮೂವತ್ತೇಳು ವರ್ಷ ಸೇವೆ ಸಲ್ಲಿಸಿ ಈಗ ನಿವೃತ್ತರಾಗಿರುತ್ತಾರೆ. ಸಿದ್ದಾಪುರದಲ್ಲಿ ವಾಸಿಸಿರುವ ಇವರು ಸಾಹಿತ್ಯ ರಚನೆ, ಚಿತ್ರ ಹಾಗೂ ವ್ಯಂಗ್ಯ ಚಿತ್ರ ರಚನೆ ಮುಂತಾದವುಗಳಲ್ಲಿ ನಿರತರು.  
ಮಕ್ಕಳ ಸಾಹಿತ್ಯಕ್ಕೆ ಮಲೆನಾಡಿನ ಸೊಗಸನ್ನು ಅದರ ಹಚ್ಚಹಸಿರಿನ ಹೊದಿಕೆಯನ್ನು ಯಾವುದೇ ಸಾಂಪ್ರದಾಯಿಕ-ನೀತಿಗಳ ಹಂಗಿಲ್ಲದೆ ಕಟ್ಟಿಕೊಟ್ಟವರು ತಮ್ಮಣ್ಣ ಬೀಗಾರ ಅವರು. ಪ್ರಕೃತಿಯ ಪ್ರಶಾಂತ ಪಾಠಗಳು ತುಂಬಾ ಕುತೂಹಲಕರವಾಗಿ ಅವರ ಗದ್ಯ ಹಾಗೂ ಕವಿತೆಗಳಲ್ಲಿ ಅಡಕವಾಗಿವೆ. ಮಲೆನಾಡಿನ ಮಕ್ಕಳ ಬದುಕು ಮತ್ತು ಅವರ ಬದುಕಿನ ಸಂಗತಿಗಳು ತುಂಬಾ ವೈವಿಧ್ಯಮಯವಾಗಿ ಅರಳಿಕೊಳ್ಳುವುದನ್ನು ಕಾಣಬಹುದು. ಬೆಟ್ಟ-ಕಣಿವೆಗಳನ್ನು ಏರಿ ಇಳಿದ ಮಕ್ಕಳ ಖುಷಿ, ವಿನೋದ, ಹುಡುಗಾಟಿಕೆ ಮುದ ನೀಡುತ್ತವೆ. ಅದೇರೀತಿ ಅಲ್ಲಿಯ ವೈರುಧ್ಯಗಳನ್ನು ಕೂಡಾ ಹೇಳಲು ತಮ್ಮಣ್ಣ ಅವರು ಹಿಂಜರಿಯಲಾರರು. ಮೊದಲಿನಿಂದಲೂ ಇವರದು ತುಂಬಾ ಸಮಾಧಾನ ಚಿತ್ತದ ಬರವಣಿಗೆ. ಒಂದು ರೀತಿಯಲ್ಲಿ ಅದು ಯಾವುದೇ ನಿಡುಸುಯ್ಯುವಿಕೆ ಇಲ್ಲದ ನಿಸರ್ಗದ ನಿತ್ಯೋತ್ಸವ.


.
‘ಗುಬ್ಬಚ್ಚಿ ಗೂಡು’ ‘ಚಿಂವ್ ಚಿಂವ್’ ‘ಜೀಕ್ ಜೀಕ್’ ‘ಪುಟಾಣಿ ಪುಡಿಕೆ’ ‘ಸೊನ್ನೆ ರಾಶಿ ಸೊನ್ನೆ’ ‘ತೆರೆಯಿರಿ ಕಣ್ಣು’ ‘ಖುಷಿಯ ಬೀಜ’ ‘ಹಾಡಿನ ಹಕ್ಕಿ’ ಮುಂತಾದ ಮಕ್ಕಳ ಕವನಸಂಕಲನಗಳು, ‘ಕಪ್ಪೆಯ ಪಯಣ’ ‘ಜಿಂಕೆ ಮರಿ’ ‘ಹಸಿರೂರಿನ ಹುಡುಗ,’ ‘ಮಲ್ನಾಡೆ ಮಾತಾಡು’, ‘ಅಮ್ಮನ ಚಿತ್ರ,’ ‘ಪುಟ್ಟನ ಕೋಳಿ’, ‘ಉಲ್ಟಾ ಅಂಗಿ’ ‘ಗಿರಗಿಟ್ಟಿ’ ‘ನಕ್ಷತ್ರ ನೋಡುತ್ತ’ ‘ಪುಟ್ಟಿಯೂ ಹಾರುತ್ತಿದ್ದಳು’ ಮುಂತಾದ ಮಕ್ಕಳ ಕಥಾಸಂಕಲನಗಳು .

‘ಮಾತಾಟ ಮಾತೂಟ’, ‘ಮರಬಿದ್ದಾಗ’, ಎನ್ನುವ ಮಕ್ಕಳಿಗಾಗಿ ಲಲಿತ ಬರಹಗಳು, ‘ಬಾವಲಿ ಗುಹೆ’ ‘ಫ್ರಾಗಿ ಮತ್ತು ಗೆಳೆಯರು’ ಎಂಬ ಮಕ್ಕಳ ಕಾದಂಬರಿಗಳೂ ಸೇರಿ ಇಪ್ಪತ್ತೇಳು ಕೃತಿಗಳನ್ನು ರಚಿಸಿದ್ದಾರೆ. ಆಕಾಶವಾಣಿಯಲ್ಲಿ ಇವರ ಕವಿತಗಳು, ದೂರದರ್ಶನದಲ್ಲಿ ಕಲಾಕೃತಿ ಹಾಗೂ ಸಂದರ್ಶನ ಪ್ರಸಾರ ಆಗಿವೆ.  ಇವರ ಹಸಿರೂರಿನ ಹುಡುಗ ಪುಸ್ತಕಕ್ಕೆ ಹೊಂಬಳ ಮಕ್ಕಳ ಸಾಹಿತ್ಯ ಪ್ರಶಸ್ತಿ, ಮಲ್ನಾಡೆ ಮಾತಾಡು ಕೃತಿಗೆ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಹಾಗೂ ಮರಬಿದ್ದಾಗ ಕೃತಿಗೆ ಬಾಲವಿಕಾಸ ಅಕಾಡೆಮಿ ಕೊಡುವ ಮಕ್ಕಳ ಚಂದ್ರ ಪ್ರಶಸ್ತಿ, ಫ್ರಾಗಿ ಮತ್ತು ಗೆಳೆಯರು ಕೃತಿಗೆ ಪುಸ್ತಕ ಸೊಗಸು ಬಹುಮಾನ ಬಂದಿವೆ. ಇದಲ್ಲದೇ ರಾಜ್ಯ ಉತ್ತಮ ಶಿಕ್ಷಕರ ಪ್ರಶಸ್ತಿ, ರಾಷ್ಟ್ರ  ಶಿಕ್ಷಕರ ಪ್ರಶಸ್ತಿ, ಪ್ರಜಾವಾಣಿ ಶಿಶುಕಾವ್ಯ ಸ್ಪರ್ಧಾ ಬಹುಮಾನ ಮುಂತಾದವು ದೊರೆತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *