ಆರ್​ಎಸ್​ಎಸ್​ ಅತಿದೊಡ್ಡ ಶ್ರೀಮಂತ ಎನ್​ಜಿಓ : ಬಿ ಕೆ ಹರಿಪ್ರಸಾದ್

ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, 6 ಬಾರಿ ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆದುಕೊಟ್ಟಿದ್ದಾರೆ. ಆತ ಬ್ರಿಟಿಷರ ವಿರುದ್ಧ ಹೋರಾಡಿದ ಒಂದೇ ಒಂದು ಉದಾಹರಣೆ ಇಲ್ಲ. ಆತ ಬ್ರಿಟಿಷರ ಬೂಟನ್ನು ನೆಕ್ಕುತ್ತಿದ್ದರು ಎಂದು ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮೈಸೂರು : ರಾಷ್ಟ್ರದಲ್ಲಿ ಬಿಜೆಪಿ ಅತಿದೊಡ್ಡ ಶ್ರೀಮಂತ ಪಕ್ಷ ಹಾಗೂ ಆರ್​ಎಸ್​ಎಸ್​ ಅತಿದೊಡ್ಡ ಶ್ರೀಮಂತ ಎನ್​ಜಿಓ ಸಂಘಟನೆಯಾಗಿದೆ. ಶತಮಾನದ ಇತಿಹಾಸ ಇರುವ ಕಾಂಗ್ರೆಸ್​ಗಿಂತ ಬಿಜೆಪಿ ಹಾಗೂ ಆರ್​ಎಸ್​ಎಸ್​ ಶ್ರೀಮಂತ ಪಕ್ಷವಾಗಲು ಕಾರಣವೇನೆಂದರೆ ಅದು 50 ಪರ್ಸೆಂಟ್ ಕಮಿಷನ್ ಪಡೆಯುತ್ತಿರುವುದೇ ಆಗಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲೂ ಸಂಪೂರ್ಣ ವಿಫಲವಾಗಿದೆ. ಕೊಲೆ ಬೆದರಿಕೆ, ಕೋಮುವಾದವೇ ಬಂಡವಾಳವಾಗಿದ್ದು, ರಾಜ್ಯ ಮತ್ತು ರಾಷ್ಟ್ರದ ಉದ್ಧಾರಕ್ಕೆ ಅವರ ಕೊಡುಗೆ ಶೂನ್ಯ ಎಂದು ಹರಿಹಾಯ್ದರು.

ಹರಿ ಪ್ರಸಾದ್ ಕಾಂಗ್ರೆಸ್ ಅವರ ಇತಿಹಾಸ ಸೃಷ್ಟಿ ಮಾಡುತ್ತಾರೆ. ಆದರೆ ಬಿಜೆಪಿ ಅವರು ಇತಿಹಾಸವನ್ನು ತಿರುಚುತ್ತಿದ್ದಾರೆ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, 6 ಬಾರಿ ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆದುಕೊಟ್ಟಿದ್ದರು. ಆತ ಬ್ರಿಟಿಷರ ವಿರುದ್ಧ ಹೋರಾಡಿದ ಒಂದೇ ಒಂದು ಉದಾಹರಣೆ ಇಲ್ಲ. ಅವರು ಬ್ರಿಟಿಷರ ಬೂಟನ್ನು ನೆಕ್ಕುತ್ತಿದ್ದರು, ಹೋರಾಟಗಾರನೇ ಅಲ್ಲ ಎಂದು ಹರಿಪ್ರಸಾದ್​ ಕಿಡಿಕಾರಿದರು.

ಬಿ ಕೆ ಹರಿಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿದರು

ಬಿಜೆಪಿಯವರಿಗೆ ಗೋಡ್ಸೆ, ಸಾವರ್ಕರ್ ಬಿಟ್ಟರೆ ಮಹಾಪುರುಷರೇ ಸಿಕ್ಕುತ್ತಿಲ್ಲ ಎಂದು ವ್ಯಂಗ್ಯವಾಡಿದ ಬಿ ಕೆ ಹರಿಪ್ರಸಾದ್ ಅವರು ಸಾವರ್ಕರ್ ಒಬ್ಬ ಅಪ್ಪಟ ನಾಸ್ತಿಕರಾಗಿದ್ದರು. ನಾಸ್ತಿಕ ಎಂದೇ ಆತ್ಮ ಚರಿತ್ರೆ ಬರೆದುಕೊಂಡಿದ್ದಾರೆ. ಇಂತಹ ನಾಸ್ತಿಕ ಸಾವರ್ಕರ್ ಭಾವಚಿತ್ರವನ್ನು ಗಣೇಶೋತ್ಸವದಲ್ಲಿ ಇಡುವ ಮೂಲಕ ಬಿಜೆಪಿಗರು ಹಿಂದೂ ಧರ್ಮಕ್ಕೆ ಅಪಮಾನ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *