local ನ್ಯೂಸ್ – ಆಯ್ಕೆ, ಸನ್ಮಾನ

ಸಿದ್ದಾಪುರ:- ಕೇಂದ್ರ ಸಾಹಿತ್ಯ ಅಕಾಡೆಮಿ ಯಿಂದ ನೀಡುವ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ್ ರವರನ್ನು ಅವರ ಸ್ವ ಗ್ರಹದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಪಿ ಆರ್ ನಾಯ್ಕ ಮಾತನಾಡಿ ನಮ್ಮನ್ನು ನಾವು ಸನ್ಮಾನಿಸಿಕೊಂಡಿದ್ದೇವೆ. ಸರಳ, ಸಜ್ಜನಿಕೆಯ ವ್ಯಕ್ತಿ ಯೊರ್ವರಿಗೆ ಈ ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷವಾಗಿದೆ. ಇದು ನಮ್ಮ
ಜಿಲ್ಲೆಗೆ ದೊಡ್ಡ ಗೌರವ. ಬೀಗಾರ್ ರವರು ಮಕ್ಕಳ ಸಾಹಿತ್ಯ ದಲ್ಲಿ ಜಿಲ್ಲೆಯಲ್ಲಿಯೇ ಮೊದಲನೆ ಸಾಲಿನಲ್ಲಿ ನಿಲ್ಲುತ್ತಾರೆ.
ನಾನು ಮಕ್ಕಳ ಕಥೆ ಬರೆಯಲು ತಮ್ಮಣ್ಣ ಬೀಗಾರ ರವರೆ ಪ್ರೇರಣೆ. ಅವರು
ಮಗುವಾಗಿ ಕಥೆ ಗಳನ್ನು ಕಟ್ಟಿದ್ದಾರೆ.
ಬಿಗಾರಂತಹ ಮಕ್ಕಳ ಸಾಹಿತಿ ಜಿಲ್ಲೆಯಲ್ಲಿ ಮತ್ತೊಬ್ಬರಿಲ್ಲ. ಅವರಿಂದ ನಿರಂತರವಾಗಿ ಬರವಣಿಗೆ ಬರಲಿ. ಪ್ರತಿಯೊಬ್ಬ ಶಿಕ್ಷಕರು ಬೀಗಾರ ರವರ ಕೃತಿಗಳನ್ನು ಓದುವಂತಾಗಬೇಕು ಎಂದು ಬೀಗಾರ್ ರವರಿಗೆ ಶುಭಾಶಯ ಕೋರಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಮಾತನಾಡಿ ಮಕ್ಕಳ ಕವನ ಕಥೆಗಳನ್ನು ಬರೆಯುವುದು ಸುಲಭವಲ್ಲ. ಬರೆಯಲು ಮಗುವಾಗಿ ಕುಳಿತುಕೊಳ್ಳಬೇಕು. ಅದು ಬೀಗಾರರವರಲ್ಲಿದೆ‌. ಅವರು ನಮ್ಮ ತಾಲೂಕಿನ ರಾಜ್ಯ ದ ಶಿಕ್ಷಣ ಕ್ಷೇತ್ರಕ್ಕೆ ಆಸ್ತಿ ಎಂದರ

ಜಿ. ಜಿ.ಹೆಗಡೆ ಬಾಳಗೋಡ ಮಾತನಾಡಿ ಬರವಣಿಗೆಯಲ್ಲಿ ಏಕಾಗ್ರತೆ ಬೇಕು.
ಬೆರೆಯವರ ಕವನ ಗಳನ್ನು ಕೇಳಬೇಕು. ಅಂದಾಗ ಮಾತ್ರ ನಮ್ಮಲ್ಲಿರುವ ದೌರ್ಬಲ್ಯ ಗೊತ್ತಾಗುತ್ತದೆ. ಬೀಗಾರ್ ರವರು ಕವಿಗೋಷ್ಠಿಯಲ್ಲಿ ಎಲ್ಲರ ಕವನಗಳನ್ನು ಕೇಳುತ್ತಿದ್ದರು. ಆ ಕಾರಣಕ್ಕಾಗಿ ಗಟ್ಟಿತನದ ಕವನಗಳನ್ನು ಬರೆಯುತ್ತಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಮ್ಮಣ್ಣ ಬೀಗಾರ್ ಎಲ್ಲರಲ್ಲಿಯೂ ಅಗಾಧವಾದ ಪ್ರತಿಭೆ ಇದೆ. ಆದರೆ ನಾವು ಸಮಾಜಕ್ಕೆ ಏನು ಕೊಡುಗೆ ಕೊಡುತ್ತೇವೆ ಎನ್ನುವುದು ಮುಖ್ಯ. ಏನನ್ನು ನಾವು ಆಪ್ತತೆಯಿಂದ ಒಪ್ಪಿಕೊಳ್ಳುತ್ತೇವೆಯೋ ಅವು ನಮ್ಮನ್ನು ಆವರಿಸಿಕೊಳ್ಳುತ್ತವೆ. ನಾವು ಪ್ರೀತಿಯಿಂದ ಎಲ್ಲ ಕೆಲಸಗಳನ್ನು ವಮಾಡಬೇಕು‌
ಒಂದು ಪುಸ್ತಕ ವನ್ನು ಬರೆದರೆ ನಾನು ಮೊದಲು ಮಕ್ಕಳಿಗೆ ಹೇಳುತ್ತಿದ್ದೆ, ಅವರು ಖುಷಿ ಪಟ್ಟರೆ ಪುಸ್ತಕ ಪ್ರಿಂಟ್ ಹಾಕುತ್ತಿದ್ದೆ ಎಂದ ತಮ್ಮ ಅನುಭವ ಹಂಚಿಕೊಂಡ ಅವರು ಎಲ್ಲರುಗೂ ಧನ್ಯವಾದ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ
ಸಿ ಎಸ್ ಗೌಡರ್, ಜಿ ಆಯ್ ನಾಯ್ಕ, ಶಿವಾನಂದ ಹೊನ್ನೆಗುಂಡಿ, ಪಿಬಿ ಹೊಸೂರ್, ನಾಗರಾಜ ಮಾಳ್ಕೋಡ್, ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಷಾ ನಾಯ್ಕ ಕವನ ವಾಚಿಸಿದರು.
ಅಣ್ಣಪ್ಪ ಶಿರಳಗಿ ನಿರೂಪಿಸಿದರು. ಪ್ರಶಾಂತ ಹೆಗಡೆ ವಂದಿಸಿದರು.

ಸಿದ್ದಾಪುರ: ತಾಲೂಕಿನ ಕಾನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಜಿ.ಐ.ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಐ.ನಾಯ್ಕ ಹಾಗೂ ಕಮಲಾ ಮಡಿವಾಳ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಘವೇಂದ್ರ ಶಾಸ್ತ್ತಿ, ಸರ್ವೋದಯ ಬ್ಯಾಂಕಿನ ನಿರ್ದೇಶಕ ಕೆ.ಜಿ.ನಾಗರಾಜ, ಕಾನಗೋಡ ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಕೆ.ಶಿವಾನಂದ ಅಭಿನಂದಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *