local ನ್ಯೂಸ್ – ಆಯ್ಕೆ, ಸನ್ಮಾನ

ಸಿದ್ದಾಪುರ:- ಕೇಂದ್ರ ಸಾಹಿತ್ಯ ಅಕಾಡೆಮಿ ಯಿಂದ ನೀಡುವ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ್ ರವರನ್ನು ಅವರ ಸ್ವ ಗ್ರಹದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಪಿ ಆರ್ ನಾಯ್ಕ ಮಾತನಾಡಿ ನಮ್ಮನ್ನು ನಾವು ಸನ್ಮಾನಿಸಿಕೊಂಡಿದ್ದೇವೆ. ಸರಳ, ಸಜ್ಜನಿಕೆಯ ವ್ಯಕ್ತಿ ಯೊರ್ವರಿಗೆ ಈ ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷವಾಗಿದೆ. ಇದು ನಮ್ಮ
ಜಿಲ್ಲೆಗೆ ದೊಡ್ಡ ಗೌರವ. ಬೀಗಾರ್ ರವರು ಮಕ್ಕಳ ಸಾಹಿತ್ಯ ದಲ್ಲಿ ಜಿಲ್ಲೆಯಲ್ಲಿಯೇ ಮೊದಲನೆ ಸಾಲಿನಲ್ಲಿ ನಿಲ್ಲುತ್ತಾರೆ.
ನಾನು ಮಕ್ಕಳ ಕಥೆ ಬರೆಯಲು ತಮ್ಮಣ್ಣ ಬೀಗಾರ ರವರೆ ಪ್ರೇರಣೆ. ಅವರು
ಮಗುವಾಗಿ ಕಥೆ ಗಳನ್ನು ಕಟ್ಟಿದ್ದಾರೆ.
ಬಿಗಾರಂತಹ ಮಕ್ಕಳ ಸಾಹಿತಿ ಜಿಲ್ಲೆಯಲ್ಲಿ ಮತ್ತೊಬ್ಬರಿಲ್ಲ. ಅವರಿಂದ ನಿರಂತರವಾಗಿ ಬರವಣಿಗೆ ಬರಲಿ. ಪ್ರತಿಯೊಬ್ಬ ಶಿಕ್ಷಕರು ಬೀಗಾರ ರವರ ಕೃತಿಗಳನ್ನು ಓದುವಂತಾಗಬೇಕು ಎಂದು ಬೀಗಾರ್ ರವರಿಗೆ ಶುಭಾಶಯ ಕೋರಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಮಾತನಾಡಿ ಮಕ್ಕಳ ಕವನ ಕಥೆಗಳನ್ನು ಬರೆಯುವುದು ಸುಲಭವಲ್ಲ. ಬರೆಯಲು ಮಗುವಾಗಿ ಕುಳಿತುಕೊಳ್ಳಬೇಕು. ಅದು ಬೀಗಾರರವರಲ್ಲಿದೆ‌. ಅವರು ನಮ್ಮ ತಾಲೂಕಿನ ರಾಜ್ಯ ದ ಶಿಕ್ಷಣ ಕ್ಷೇತ್ರಕ್ಕೆ ಆಸ್ತಿ ಎಂದರ

ಜಿ. ಜಿ.ಹೆಗಡೆ ಬಾಳಗೋಡ ಮಾತನಾಡಿ ಬರವಣಿಗೆಯಲ್ಲಿ ಏಕಾಗ್ರತೆ ಬೇಕು.
ಬೆರೆಯವರ ಕವನ ಗಳನ್ನು ಕೇಳಬೇಕು. ಅಂದಾಗ ಮಾತ್ರ ನಮ್ಮಲ್ಲಿರುವ ದೌರ್ಬಲ್ಯ ಗೊತ್ತಾಗುತ್ತದೆ. ಬೀಗಾರ್ ರವರು ಕವಿಗೋಷ್ಠಿಯಲ್ಲಿ ಎಲ್ಲರ ಕವನಗಳನ್ನು ಕೇಳುತ್ತಿದ್ದರು. ಆ ಕಾರಣಕ್ಕಾಗಿ ಗಟ್ಟಿತನದ ಕವನಗಳನ್ನು ಬರೆಯುತ್ತಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಮ್ಮಣ್ಣ ಬೀಗಾರ್ ಎಲ್ಲರಲ್ಲಿಯೂ ಅಗಾಧವಾದ ಪ್ರತಿಭೆ ಇದೆ. ಆದರೆ ನಾವು ಸಮಾಜಕ್ಕೆ ಏನು ಕೊಡುಗೆ ಕೊಡುತ್ತೇವೆ ಎನ್ನುವುದು ಮುಖ್ಯ. ಏನನ್ನು ನಾವು ಆಪ್ತತೆಯಿಂದ ಒಪ್ಪಿಕೊಳ್ಳುತ್ತೇವೆಯೋ ಅವು ನಮ್ಮನ್ನು ಆವರಿಸಿಕೊಳ್ಳುತ್ತವೆ. ನಾವು ಪ್ರೀತಿಯಿಂದ ಎಲ್ಲ ಕೆಲಸಗಳನ್ನು ವಮಾಡಬೇಕು‌
ಒಂದು ಪುಸ್ತಕ ವನ್ನು ಬರೆದರೆ ನಾನು ಮೊದಲು ಮಕ್ಕಳಿಗೆ ಹೇಳುತ್ತಿದ್ದೆ, ಅವರು ಖುಷಿ ಪಟ್ಟರೆ ಪುಸ್ತಕ ಪ್ರಿಂಟ್ ಹಾಕುತ್ತಿದ್ದೆ ಎಂದ ತಮ್ಮ ಅನುಭವ ಹಂಚಿಕೊಂಡ ಅವರು ಎಲ್ಲರುಗೂ ಧನ್ಯವಾದ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ
ಸಿ ಎಸ್ ಗೌಡರ್, ಜಿ ಆಯ್ ನಾಯ್ಕ, ಶಿವಾನಂದ ಹೊನ್ನೆಗುಂಡಿ, ಪಿಬಿ ಹೊಸೂರ್, ನಾಗರಾಜ ಮಾಳ್ಕೋಡ್, ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಷಾ ನಾಯ್ಕ ಕವನ ವಾಚಿಸಿದರು.
ಅಣ್ಣಪ್ಪ ಶಿರಳಗಿ ನಿರೂಪಿಸಿದರು. ಪ್ರಶಾಂತ ಹೆಗಡೆ ವಂದಿಸಿದರು.

ಸಿದ್ದಾಪುರ: ತಾಲೂಕಿನ ಕಾನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಜಿ.ಐ.ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಐ.ನಾಯ್ಕ ಹಾಗೂ ಕಮಲಾ ಮಡಿವಾಳ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಘವೇಂದ್ರ ಶಾಸ್ತ್ತಿ, ಸರ್ವೋದಯ ಬ್ಯಾಂಕಿನ ನಿರ್ದೇಶಕ ಕೆ.ಜಿ.ನಾಗರಾಜ, ಕಾನಗೋಡ ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಕೆ.ಶಿವಾನಂದ ಅಭಿನಂದಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *