local ನ್ಯೂಸ್ – ಆಯ್ಕೆ, ಸನ್ಮಾನ

ಸಿದ್ದಾಪುರ:- ಕೇಂದ್ರ ಸಾಹಿತ್ಯ ಅಕಾಡೆಮಿ ಯಿಂದ ನೀಡುವ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಮಕ್ಕಳ ಸಾಹಿತಿ ತಮ್ಮಣ್ಣ ಬೀಗಾರ್ ರವರನ್ನು ಅವರ ಸ್ವ ಗ್ರಹದಲ್ಲಿ ಜಿಲ್ಲಾ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಪಿ ಆರ್ ನಾಯ್ಕ ಮಾತನಾಡಿ ನಮ್ಮನ್ನು ನಾವು ಸನ್ಮಾನಿಸಿಕೊಂಡಿದ್ದೇವೆ. ಸರಳ, ಸಜ್ಜನಿಕೆಯ ವ್ಯಕ್ತಿ ಯೊರ್ವರಿಗೆ ಈ ಪ್ರಶಸ್ತಿ ಬಂದಿರುವುದು ತುಂಬಾ ಸಂತೋಷವಾಗಿದೆ. ಇದು ನಮ್ಮ
ಜಿಲ್ಲೆಗೆ ದೊಡ್ಡ ಗೌರವ. ಬೀಗಾರ್ ರವರು ಮಕ್ಕಳ ಸಾಹಿತ್ಯ ದಲ್ಲಿ ಜಿಲ್ಲೆಯಲ್ಲಿಯೇ ಮೊದಲನೆ ಸಾಲಿನಲ್ಲಿ ನಿಲ್ಲುತ್ತಾರೆ.
ನಾನು ಮಕ್ಕಳ ಕಥೆ ಬರೆಯಲು ತಮ್ಮಣ್ಣ ಬೀಗಾರ ರವರೆ ಪ್ರೇರಣೆ. ಅವರು
ಮಗುವಾಗಿ ಕಥೆ ಗಳನ್ನು ಕಟ್ಟಿದ್ದಾರೆ.
ಬಿಗಾರಂತಹ ಮಕ್ಕಳ ಸಾಹಿತಿ ಜಿಲ್ಲೆಯಲ್ಲಿ ಮತ್ತೊಬ್ಬರಿಲ್ಲ. ಅವರಿಂದ ನಿರಂತರವಾಗಿ ಬರವಣಿಗೆ ಬರಲಿ. ಪ್ರತಿಯೊಬ್ಬ ಶಿಕ್ಷಕರು ಬೀಗಾರ ರವರ ಕೃತಿಗಳನ್ನು ಓದುವಂತಾಗಬೇಕು ಎಂದು ಬೀಗಾರ್ ರವರಿಗೆ ಶುಭಾಶಯ ಕೋರಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಮಾತನಾಡಿ ಮಕ್ಕಳ ಕವನ ಕಥೆಗಳನ್ನು ಬರೆಯುವುದು ಸುಲಭವಲ್ಲ. ಬರೆಯಲು ಮಗುವಾಗಿ ಕುಳಿತುಕೊಳ್ಳಬೇಕು. ಅದು ಬೀಗಾರರವರಲ್ಲಿದೆ‌. ಅವರು ನಮ್ಮ ತಾಲೂಕಿನ ರಾಜ್ಯ ದ ಶಿಕ್ಷಣ ಕ್ಷೇತ್ರಕ್ಕೆ ಆಸ್ತಿ ಎಂದರ

ಜಿ. ಜಿ.ಹೆಗಡೆ ಬಾಳಗೋಡ ಮಾತನಾಡಿ ಬರವಣಿಗೆಯಲ್ಲಿ ಏಕಾಗ್ರತೆ ಬೇಕು.
ಬೆರೆಯವರ ಕವನ ಗಳನ್ನು ಕೇಳಬೇಕು. ಅಂದಾಗ ಮಾತ್ರ ನಮ್ಮಲ್ಲಿರುವ ದೌರ್ಬಲ್ಯ ಗೊತ್ತಾಗುತ್ತದೆ. ಬೀಗಾರ್ ರವರು ಕವಿಗೋಷ್ಠಿಯಲ್ಲಿ ಎಲ್ಲರ ಕವನಗಳನ್ನು ಕೇಳುತ್ತಿದ್ದರು. ಆ ಕಾರಣಕ್ಕಾಗಿ ಗಟ್ಟಿತನದ ಕವನಗಳನ್ನು ಬರೆಯುತ್ತಿದ್ದಾರೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತಮ್ಮಣ್ಣ ಬೀಗಾರ್ ಎಲ್ಲರಲ್ಲಿಯೂ ಅಗಾಧವಾದ ಪ್ರತಿಭೆ ಇದೆ. ಆದರೆ ನಾವು ಸಮಾಜಕ್ಕೆ ಏನು ಕೊಡುಗೆ ಕೊಡುತ್ತೇವೆ ಎನ್ನುವುದು ಮುಖ್ಯ. ಏನನ್ನು ನಾವು ಆಪ್ತತೆಯಿಂದ ಒಪ್ಪಿಕೊಳ್ಳುತ್ತೇವೆಯೋ ಅವು ನಮ್ಮನ್ನು ಆವರಿಸಿಕೊಳ್ಳುತ್ತವೆ. ನಾವು ಪ್ರೀತಿಯಿಂದ ಎಲ್ಲ ಕೆಲಸಗಳನ್ನು ವಮಾಡಬೇಕು‌
ಒಂದು ಪುಸ್ತಕ ವನ್ನು ಬರೆದರೆ ನಾನು ಮೊದಲು ಮಕ್ಕಳಿಗೆ ಹೇಳುತ್ತಿದ್ದೆ, ಅವರು ಖುಷಿ ಪಟ್ಟರೆ ಪುಸ್ತಕ ಪ್ರಿಂಟ್ ಹಾಕುತ್ತಿದ್ದೆ ಎಂದ ತಮ್ಮ ಅನುಭವ ಹಂಚಿಕೊಂಡ ಅವರು ಎಲ್ಲರುಗೂ ಧನ್ಯವಾದ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಗೋಪಾಲ ನಾಯ್ಕ ಭಾಶಿ
ಸಿ ಎಸ್ ಗೌಡರ್, ಜಿ ಆಯ್ ನಾಯ್ಕ, ಶಿವಾನಂದ ಹೊನ್ನೆಗುಂಡಿ, ಪಿಬಿ ಹೊಸೂರ್, ನಾಗರಾಜ ಮಾಳ್ಕೋಡ್, ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಷಾ ನಾಯ್ಕ ಕವನ ವಾಚಿಸಿದರು.
ಅಣ್ಣಪ್ಪ ಶಿರಳಗಿ ನಿರೂಪಿಸಿದರು. ಪ್ರಶಾಂತ ಹೆಗಡೆ ವಂದಿಸಿದರು.

ಸಿದ್ದಾಪುರ: ತಾಲೂಕಿನ ಕಾನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ಜಿ.ಐ.ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಮಡಿವಾಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ನಡೆದ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜಿ.ಐ.ನಾಯ್ಕ ಹಾಗೂ ಕಮಲಾ ಮಡಿವಾಳ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸಿದ್ದಾಪುರ ಟಿಎಂಎಸ್ ಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ, ಕೆಡಿಸಿಸಿ ಬ್ಯಾಂಕಿನ ನಿರ್ದೇಶಕ ರಾಘವೇಂದ್ರ ಶಾಸ್ತ್ತಿ, ಸರ್ವೋದಯ ಬ್ಯಾಂಕಿನ ನಿರ್ದೇಶಕ ಕೆ.ಜಿ.ನಾಗರಾಜ, ಕಾನಗೋಡ ಗ್ರಾಮ ಪಂಚಾಯ್ತಿ ಸದಸ್ಯ ಎಚ್.ಕೆ.ಶಿವಾನಂದ ಅಭಿನಂದಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *